ತುಮಕೂರು: ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು

ತುಮಕೂರು ತಾಲ್ಲೂಕಿನ ಓಬಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಮ್ಮದ್ ಆಸೀಫ್ (12), ಮಮ್ತಾಜ್ (38), ಮತ್ತು ಶಾಖಿರ್ ಹುಸೇನ್ (18) ಮೃತಪಟ್ಟವರು. ಮಧುಗಿರಿ ತಾಲ್ಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದ ಈ ಮೂವರು, ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತುಮಕೂರು: ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು
ಅಪಘಾತ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on: Jan 07, 2025 | 11:32 AM

ತುಮಕೂರು, ಜನವರಿ 07: ತುಮಕೂರು (Tumakur) ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮಹಮ್ಮದ್​​ ಆಸೀಫ್ ​(12), ಮಮ್ತಾಜ್ ​​(38), ಶಾಖಿರ್​​ ಹುಸೇನ್ ​(18) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ಅಶೋಕ್ ವೆಂಕಟ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಕಡೆಯಿಂದ ಮಧುಗಿರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್​ ಡಿಕ್ಕಿ ಹೊಡೆದಿದೆ.

ಮೃತ ಮಹಮ್ಮದ್ ಆಸೀಪ್​ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಶಾಖಿರ್​​ ಹುಸೇನ್ 6ನೇ ತರಗತಿಯಲ್ಲಿ ಓದುತ್ತಿದ್ದನು. ಮಹಮ್ಮದ್ ಆಸೀಪ್, ಶಾಖಿರ್​​ ಹುಸೇನ್ ಮತ್ತು ತಾಯಿ ಮಮ್ತಾಜ್​ ಮೂವರು ಸೋಮವಾರ ಸಂಜೆ ಶಿರಾ ಗೇಟ್​ನಲ್ಲಿನ ಸಂಬಂಧಿ ಮನೆಗೆ ತೆರಳಿದ್ದರು. ಮಂಗಳವಾರ ಶಾಲೆ-ಕಾಲೇಜಿಗೆ ಹೋಗಬೇಕೆಂದು ಬೆಳಗಿನ ಜಾವ 6 ಗಂಟೆ ಸುಮಾರಿಗೆ ವಾಪಸ್ ಊರಿಗೆ ಹೋಗುತ್ತಿದ್ದರು. ಓಬಳಾಪುರ ಗ್ರಾಮದ ಬಳಿ ಬೈಕ್​ ಚಾಲಕನ ನಿಯಂತ್ರಣ ತಪ್ಪಿ ​ನಿಂತಿದ್ದ ಟ್ರ್ಯಾಕ್ಟರ್​​​ ಟ್ರೇಲರ್​ಗೆ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್