AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru: ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಜಿಲ್ಲೆಯ ಗುಬ್ಬಿ ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

Tumakuru: ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ
ಲಂಚ ಸ್ವೀಕರಿಸಿದ ಮಹಿಳಾ ಅಧಿಕಾರಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 01, 2023 | 8:23 AM

Share

ತುಮಕೂರು: ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಎಂಬುವವರು ಲಂಚ ಪಡೆದಿದ್ದ ಹಿನ್ನಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಹೌದು ನೊಂದಣಿಗಳ‌ ಮಹಾಪರಿವಿಕಕ್ಷರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರು ಡಾ. ಮಮತಾ ಅವರು ಈ ಆದೇಶ‌ ನೀಡಿದ್ದಾರೆ. ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಈ ಬಗ್ಗೆ ಮಂಜುನಾಥ್ ಎಂಬುವರು ದೂರು ನೀಡಿದ್ದರು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ ಬಂಧನ

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಲೋಕಾಯುಕ್ತ ಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್​ನನ್ನು ಬಂಧಿಸಿದ್ದರು. 50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್​ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು ಅರೆಸ್ಟ್​ ಮಾಡಲಾಗಿತ್ತು.

ಇದನ್ನೂ ಓದಿ:ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್

ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಿದ್ದರು. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ