AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ತಂದೆಯಿಂದಲೇ ನಿರಂತರ ಅತ್ಯಾಚಾರ, 3 ತಿಂಗಳ ಗರ್ಭಿಣಿಯಾದ 14 ವರ್ಷದ ಮಗಳು

ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನು ಕಾಪಾಡಬೇಕಿದ್ದ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದಾನೆ. ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರು: ತಂದೆಯಿಂದಲೇ ನಿರಂತರ ಅತ್ಯಾಚಾರ, 3 ತಿಂಗಳ ಗರ್ಭಿಣಿಯಾದ 14 ವರ್ಷದ ಮಗಳು
ಅತ್ಯಾಚಾರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Sep 04, 2024 | 8:46 AM

Share

ತುಮಕೂರು, ಸೆ​.04: ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟಿರುತ್ತಾರೆ. ಆದರೆ ಇಲ್ಲಿ ನಡೆದ ಘಟನೆಯೊಂದು ಅಪ್ಪ ಎಂಬ ಪದಕ್ಕೆ ಮಸಿ ಬಳಿದಂತಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ 14 ವರ್ಷದ ಮಗಳು ಗರ್ಭ ಧರಿಸಿದ್ದಾಳೆ.

ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಬಂದಿದ್ದ ಕುಟುಂಬ ಹೊನ್ನವಳ್ಳಿಯಲ್ಲಿ ನೆಲೆಸಿದೆ. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ತಂದೆ ಕ್ರೌರ್ಯ ಮೆರೆದಿರುವುದು ತಿಳಿಯುತ್ತಿದ್ದಂತೆ ಪೋಕ್ಸೋ ಪ್ರಕರಣ ಹಾಗೂ ಅತ್ಯಾಚಾರ ಆರೋಪ ಅಡಿ ಕೇಸ್ ದಾಖಲಾಗಿದೆ. ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯಿಂದ ಕೆಆರ್ ಪುರಂನಲ್ಲಿ ರಿಂಗ್ ರೋಡ್ ಅಧ್ವಾನ, ವಾಹನ ಸವಾರರಿಗೆ ನಿತ್ಯ ಕಿರಿಕಿರಿ

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಕಾಮುಕ ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿ ಆಗಿದ್ದ, ಕಾಮುಕ ಅರೆಸ್ಟ್ ಆಗಿದ್ದಾನೆ. ವಿಜಯನಗರ ಜಿಲ್ಲೆ ಕೂಡ್ಲಿಗಿಯ ತಿಪ್ಪೇನಹಳ್ಳಿಯಲ್ಲಿ ಆಗಸ್ಟ್ 31ರಂದು ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿತ್ತು. ಆರೋಪಿ ಓಬಣ್ಣ ತಪ್ಪೊಪ್ಪಿಕೊಂಡಿದ್ದು ಪೊಲೀಸರು ಜೈಲಿಗಟ್ಟಿದ್ದಾರೆ.

‘ಬರೀ ಕೊಲೆ ಅಲ್ಲ ರೇಪ್ & ಮರ್ಡರ್’

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದರ್​ನ ಗುಣತೀರ್ಥವಾಡಿ ಗ್ರಾಮದ ಯುವತಿ ಶವವಾಗಿ ಪತ್ತೆಯಾಗಿದ್ಲು. ಕಿಡಿಗೇಡಿಗಳು ಯುವತಿ ಮೇಲೆ ಅತ್ಯಾಚಾರ ಎಸೆಗಿ ಕೊಂದಿದ್ದಾರೆಂದು ಸಂಬಂಧಿಕರು ಆರೋಪಿಸಿದ್ದಾರೆ. ಬಸವಕಲ್ಯಾಣ ಪಟ್ಟಣದ ವಾಲ್ಮೀಕಿ ವೃತ್ತದ ಬಳಿ, ಆರೋಪಿಗಳನ್ನ ಬಂಧಿಸುವಂತೆ ಗ್ರಾಮಸ್ಥರು ಪ್ರತಿಭಟಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:44 am, Wed, 4 September 24

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು