AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಗಿರಿಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳು ದುಸ್ಥಿತಿಗೆ! ಸಚಿವ ರಾಜಣ್ಣ ಕ್ಷೇತ್ರದ ಗುರುವಡೇರಹಳ್ಳಿಯ ಶಾಲೆಗೆ ಹೋಗಲು ಮಕ್ಕಳು ಹಿಂದೇಟು

ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಅಭಿಯಾನ ಮುಂದುವರೆದಿದ್ದು, ಬಹುತೇಕ ಹಲವು ಕಡೆ ಸರ್ಕಾರಿ ಶಾಲೆಗಳು ಸಂಪೂರ್ಣ ಅವ್ಯವಸ್ಥೆ ಶೀಥಲಾವ್ಯವಸ್ಥೆಗೊಂಡಿವೆ. ಈ ಪೈಕಿ ಸಹಕಾರಿ ಸಚಿವ ಕೆಎನ್ ರಾಜಣ್ಣ ಸ್ವಕ್ಷೇತ್ರದಲ್ಲಿರುವ ಮಧುಗಿರಿ ಪಟ್ಟಣದ ಗುರುವಡೇರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಒಂದು. ಈ ಶಾಲೆಯಲ್ಲಿ ಶಿಕ್ಷಕರು, ಮಕ್ಕಳು ಭಯದಲ್ಲೇ ದಿನಗಳನ್ನು ಕಳೆಯುತ್ತಿದ್ದಾರೆ. ಒಂದಷ್ಟು ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.

ಮಧುಗಿರಿಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳು ದುಸ್ಥಿತಿಗೆ! ಸಚಿವ ರಾಜಣ್ಣ ಕ್ಷೇತ್ರದ ಗುರುವಡೇರಹಳ್ಳಿಯ ಶಾಲೆಗೆ ಹೋಗಲು ಮಕ್ಕಳು ಹಿಂದೇಟು
ಮಧುಗಿರಿಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳು ದುಸ್ಥಿತಿಗೆ! ಸಚಿವ ರಾಜಣ್ಣ ಕ್ಷೇತ್ರದ ಗುರುವಡೇರಹಳ್ಳಿಯ ಶಾಲೆಗೆ ಹೋಗಲು ಮಕ್ಕಳು ಹಿಂದೇಟು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on:Dec 21, 2023 | 9:28 AM

Share

ತುಮಕೂರು, ಡಿ.21: ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಅಭಿಯಾನ ಮುಂದುವರೆದಿದ್ದು, ಬಹುತೇಕ ಹಲವು ಕಡೆ ಸರ್ಕಾರಿ ಶಾಲೆಗಳು ಸಂಪೂರ್ಣ ಅವ್ಯವಸ್ಥೆ ಶೀಥಲಾವ್ಯವಸ್ಥೆಗೊಂಡಿವೆ. ಈ ಪೈಕಿ ಸಹಕಾರಿ ಸಚಿವ ಕೆಎನ್ ರಾಜಣ್ಣ (K.N. Rajanna) ಸ್ವಕ್ಷೇತ್ರದಲ್ಲಿರುವ ಮಧುಗಿರಿ ಪಟ್ಟಣದ (Madhugiri Town) ಗುರುವಡೇರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಒಂದು. ಈ ಶಾಲೆಯಲ್ಲಿ ಶಿಕ್ಷಕರು, ಮಕ್ಕಳು ಭಯದಲ್ಲೇ ದಿನಗಳನ್ನು ಕಳೆಯುತ್ತಿದ್ದಾರೆ. ಒಂದಷ್ಟು ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಸಹಕಾರಿ ಸಚಿವ ರಾಜಣ್ಣ ಅವರ ಸ್ವಕ್ಷೇತ್ರದ ಮಧುಗಿರಿ ಪಟ್ಟಣದ ಗುರುವಡೇರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿಗೆ ಬಂದು ವರ್ಷಗಳಾಗಿವೆ. ಈ ಬಗ್ಗೆ ನೂತನವಾಗಿ ಕಟ್ಟಡ ನಿರ್ಮಿಸಲು ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಲೆ ಕೆಡೆಸಿಕೊಂಡಿಲ್ಲ.

ಈ ಬಗ್ಗೆ ಸ್ವತಃ ಶಾಲಾ ಶಿಕ್ಷಕಿ ಶಾಂತಮ್ಮ ಕೂಡ ಬೇರಸ ವ್ಯಕ್ತಪಡಿಸಿದ್ದು, ಶಾಲೆಯ ಒಳಗೆ ಪಾಠ ಮಾಡಲು ಭಯ ಆಗುತ್ತಿದೆ. ಅಲ್ಲದೆ, ಶಾಲೆಯ ಮೇಲ್ಚಾವಣಿ ಕೂಡ ಬೀಳುವ ಹಂತದಲ್ಲಿ ಇದ್ದು, ಅದರ ಕೆಳಗೆ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ತುಮಕೂರಿನ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ದುಸ್ಥಿತಿ; ಜೀವ ಭಯದಲ್ಲೇ ಪಾಠ ಕೇಳುವ ಮಕ್ಕಳು

ಜೀವಹಾನಿ ಸಂಭವಿಸುವ ಸಾಧ್ಯತೆ ಹಿನ್ನೆಲೆ ಪಕ್ಕದಲ್ಲಿ ಇರುವ ಒಂದು ಕೊಠಡಿಯಲ್ಲೇ ಶಿಕ್ಷಕರು ಕಚೇರಿ ಹಾಗೂ ಮಕ್ಕಳಿಗೆ ಪಾಠ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಬಡವರ ಮಕ್ಕಳು ಬಹುತೇಕ ಸರ್ಕಾರಿ ಶಾಲೆಗೆ ಬರುತ್ತಾರೆ. ಸದ್ಯ ಇಲ್ಲಿನ ಕೊಠಡಿ ವ್ಯವಸ್ಥೆ ನೋಡಿ ಬರುವ ಮಕ್ಕಳು ಕೂಡ ಬೇರೆಡೆ ಹೋಗಿದ್ದಾರಂತೆ. ಪೋಷಕರು ಕೂಡ ತಮ್ಮ ಮಕ್ಕಳನ್ನ ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದು, ಸರ್ಕಾರ ಹೊಸದಾಗಿ ಕಟ್ಟಡ ‌‌ನೀಡಿದರೆ ಬಡವರ ಮಕ್ಕಳು ಓದಬಹುದು ಎಂದು ಸ್ಥಳೀಯ ನಿವಾಸಿ ವಿಶಾಲಾಕ್ಷಿ ಹೇಳಿದ್ದಾರೆ.

ಮಾಹಿತಿ ಪ್ರಕಾರ, ಮಧುಗಿರಿ ತಾಲೂಕಿನಲ್ಲಿ ಒಟ್ಟು ನೂರಕ್ಕೂ ಹೆಚ್ಚು ಶಾಲೆಗಳು ದುಸ್ಥಿತಿಗೆ ತಲುಪಿದ್ದು ಶಾಲಾ‌ ಮಕ್ಕಳಿಗೆ ಪಾಠ ಮಾಡಲು ತೀವ್ರ ತೊಂದರೆ ಆಗುತ್ತಿದೆ. ಸದ್ಯ ಇನ್ನಾದರೂ ಸರ್ಕಾರ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುತ್ತಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Thu, 21 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ