ತುಮಕೂರು KSRTC ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರಟಿದ್ದ ಇಬ್ಬರು ಮಹಿಳಾ ಭಕ್ತರು ಬಸ್​ಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ತುಮಕೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. KSRTC ಬಸ್ ಅನ್ನು ರಿವರ್ಸ್ ತೆಗೆಯುವಾಗ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು KSRTC ಬಸ್ ನಿಲ್ದಾಣದಲ್ಲಿ ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು
ತುಮಕೂರು ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿ ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸಾವು
ಮಹೇಶ್ ಇ, ಭೂಮನಹಳ್ಳಿ Edited By: Rakesh Nayak Manchi

Updated on: Sep 15, 2023 | 12:24 PM

ತುಮಕೂರು, ಸೆ.15: ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಎಸ್​ಆರ್​ಟಿಸಿ (KSRTC) ಬಸ್​ ನಿಲ್ದಾಣದಲ್ಲಿ ನಡೆದಿದೆ. ಬಸ್​ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್​ಆರ್​ಟಿಸಿ ಬಸ್​ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯುರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಬಸ್ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್​ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಸಂಬಂಧಿಕರು ಹಾಗೂ ಸ್ನೇಹಿತರ ಆಕ್ರೋಶ

ಅಪಘಾತದಲ್ಲಿ ಮೃತಪಟ್ಟ ಇಬ್ಬರು ಮಹಿಳೆಯರ ಕುಟುಂಬಸ್ಥರು ಹಾಗೂ ಸ್ನೇಹಿತರು ಆಕ್ರೋಶ ಹೊರಹಾಕಿದ್ದಾರೆ. ನಾವಿಬ್ಬರು ಮೊದಲು ಬಸ್ ಹತ್ತಲು ಹೋದೆವು. ಈ ವೇಳೆ ಚಾಲಕ ಏಕಾಏಕಿ ಹಿಂದೆ ಬಂದು ಡಿಕ್ಕಿ ಹೊಡೆದ. ನಾವು ಎಷ್ಟೇ ಕೂಗಿಕೊಂಡು ಹೇಳಿದರೂ ಚಾಲಕ ಕೇಳಿಸಿಕೊಳ್ಳಲಿಲ್ಲ. ನಾವು ಸಂಬಂಧಿದಿಕರಿಗೆ ಏನ್ ಹೇಳಬೇಕು? ಪಂಕಜಮ್ಮನೇ ರಾತ್ರಿ ನಮ್ಮನ್ನ ಗೊರವನಹಳ್ಳಿಗೆ ಹೋಗಿ ಬರೋಣ ಅಂತಾ ಹೊರಡಿಸಿದರು ಎಂದರು.

ಬೆಳಿಗ್ಗೆ 5.30 ಕ್ಕೆ ಹೊರಟಿವಿ ಮಂಡ್ಯ ಮದ್ದೂರು ಮೂಲಕ ಬೆಳಿಗ್ಗೆ 9.15 ಕ್ಕೆ ತುಮಕೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದೆವು. ಕಾಪಿ ತಿಂಡಿ ತಿನ್ನಲು ಹೋಗಬೇಕಿತ್ತು. ಬಸ್ ಸಿಗಲ್ಲ ಅಂತಾ ನಿಂತು ಬಸ್ ನೋಡಿ ಹತ್ತಲು ಹೋದಾಗ ಈ ಘಟನೆ ನಡೆದಿದೆ. ಬಸ್ ಚಾಲಕನ ಅಜಾರೂಗಕತೆಯಿಂದ ಅಪಘಾತ ಆಗಿದೆ ಎಂದರು. ತುಮಕೂರಿನ ಜಿಲ್ಲಾಸ್ಪತ್ರೆ ಶವಗಾರ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Fri, 15 September 23

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us