AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur Accident: ಪಿಎಂ ಮೋದಿಯಿಂದ ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ; ಅಪಘಾತಕ್ಕೆ ಅಸಲಿ ಕಾರಣ ಇಲ್ಲಿದೆ

Tumakur Accident - ಕ್ರೂಷರ್ ವಾಹನ ಅಪಘಾತಕ್ಕೆ ಕ್ರೂಷರ್ ವಾಹನದ ಪರಿಸ್ಥಿತಿ ಸಂಪೂರ್ಣ ಕೆಟ್ಟಿದ್ದೇ ಕಾರಣವೆನ್ನಲಾಗುತ್ತಿದ್ದು, ನಾಲ್ಕೂ ಚಕ್ರಗಳು ಸಂಪೂರ್ಣ ಸವೆದು ಹೋಗಿವೆ. 12 ಜನ ಸಾಮರ್ಥ್ಯದ ವಾಹನದಲ್ಲಿ 24 ಜನ ಪ್ರಯಾಣಿಕರು ಇದ್ದರು.

Tumakur Accident: ಪಿಎಂ ಮೋದಿಯಿಂದ ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ; ಅಪಘಾತಕ್ಕೆ ಅಸಲಿ ಕಾರಣ ಇಲ್ಲಿದೆ
ಅಪಘಾತಕ್ಕೀಡಾದ ಕ್ರೂಷರ್​ ವಾಹನ
TV9 Web
| Edited By: |

Updated on:Aug 25, 2022 | 11:03 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ವಿಧಿ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದು, ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿ ಒಟ್ಟು 9 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸುಜಾತಾ ಪ್ರಭು(25), ಲಕ್ಷ್ಮೀ(30), ವಿನೋಧಪ್ರಭು(3), ಹಾಗೂ ಕೃಷ್ಣಪ್ಪ(28), ಪ್ರಭು(30), ಬಸಮ್ಮ ಶಿವಪ್ಪ(50) ಮೃತ ದುರ್ದೈವಿಗಳು. ಇನ್ನುಳಿದ ಮೃತ ಮೂವರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಮೋನಮ್ಮ, ಅನಿಲ್ ಕುಮಾರ್, ಲಲಿತಾ, ಸಂದೀಪ್, ಬಾಲಾಜಿ, ವಿರೂಪಾಕ್ಷ, ದುರ್ಗಮ್ಮ, ದುರ್ಗಪ್ಪಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಾಗೊಂಡಿದ್ದಾರೆ. ಜಿಲ್ಲಾಧಿಕಾರಿ ಡಿಸಿ ವೈ.ಎಸ್.ಪಾಟೀಲ್ ಮತ್ತು ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ರಾಹುಲ್ ಕುಮಾರ ಶಹಪುರವಾಡ್​ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಅಪಘಾತ ನಡೆದಿದ್ದೇಗೆ?

ರಾಯಚೂರು ಜಿಲ್ಲೆಯಿಂದ ನಿನ್ನೆ 24 ಜನರು ಹೊರಟಿದ್ದು, ಮಾರ್ಗಮಧ್ಯದಲ್ಲಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕ್ರೂಸರ್ ಚಾಲಕ ಲಾರಿವೊಂದನ್ನು ಓವರ್​ ಟೇಕ್​ ಮಾಡಲು ಹೋಗಿದ್ದು, ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್​ ವಾಹನದ ಟೈರ್​ ಸ್ಫೋಟಗೊಂಡು ಡಿವೈಡರ್​ಗೆ ಡಿಕ್ಕಿ ಹೊಡಿದಿದೆ. ಹುಬ್ಬಳ್ಳಿಯಿಂದ ತಮಿಳುನಾಡಿನ ಕೊಯಂಬತ್ತೂರಿಗೆ ಲಾರಿ ತೆರಳುತ್ತಿತ್ತು. ತಮಿಳುನಾಡಿನ ನೋಂದಣಿ ಸಂಖ್ಯೆಯನ್ನು ಲಾರಿ ಹೊಂದಿದೆ.

ಕ್ರೂಷರ್ ಹದಗೆಟ್ಟಿದೆ ಅಪಘಾತಕ್ಕೆ ಕಾರಣನಾ?

ಕ್ರೂಷರ್ ವಾಹನ ಅಪಘಾತಕ್ಕೆ ಕ್ರೂಷರ್ ವಾಹನದ ಪರಿಸ್ಥಿತಿ ಸಂಪೂರ್ಣ ಕೆಟ್ಟಿದ್ದೇ ಕಾರಣವೆನ್ನಲಾಗುತ್ತಿದ್ದು, ನಾಲ್ಕೂ ಚಕ್ರಗಳು ಸಂಪೂರ್ಣ ಸವೆದು ಹೋಗಿವೆ. 12 ಜನ ಸಾಮರ್ಥ್ಯದ ವಾಹನದಲ್ಲಿ 24 ಜನ ಪ್ರಯಾಣಿಕರು ಇದ್ದರು. ಟಯರ್ ಸವೆದಿದ್ದರಿಂದ ಬ್ಲಾಸ್ಟ್ ಗೊಂಡಿದೆ. ಹಾಗಾಗಿ ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಚಾಲಕ ಮದ್ಯಪಾನ ಮಾಡಿರುವ ಆರೋಪ

ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೆಲಸಕ್ಕೆಂದು ಕುಟುಂಬ ಸಮೇತ ಕೂಲಿ ಕಾರ್ಮಿಕರು ಹೊರಟಿದ್ರು. ಚಾಲಕ ಮದ್ಯಪಾನ ಮಾಡಿದ್ದ ಎಂದು ಗಾಯಾಳುಗಳ ಆರೋಪ ಮಾಡಿದ್ದು, ಬೆಳಗ್ಗೆ ಚಹಾ ಕುಡಿಯಲೆಂದು ಚಾಲಕ ವಾಹನ ನಿಲ್ಲಿಸಿದ್ದ. ಈ ವೇಳೆ ಹೋಗಿ ಮದ್ಯ ಸೇವಿಸಿ ಬಂದಿದ್ದಾನೆಂದು ಆರೋಪ ಮಾಡಲಾಗಿದೆ.

ಟ್ವೀಟ್​ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಅದೇ ರೀತಿಯಾಗಿ ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:55 am, Thu, 25 August 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?