AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ ನೇಮಕ ವಿವಾದ; 22 ದಿನಗಳಿಂದ ಅಂಗನವಾಡಿ ಬಂದ್

ಗ್ರಾಮದಲ್ಲಿ ಶೇ.99ರಷ್ಟು ಮಂದಿ ಮುಸ್ಲಿಂ ಸಮುದಾಯದವರು ಇರುವ ಕಾರಣ ಗ್ರಾಮದಲ್ಲಿರುವವರನ್ನೇ ನೇಮಿಸಿ ಅಂತಾ ಗ್ರಾಮಸ್ಥರು ಹಿಡಿದಿದ್ದಾರೆ. ಈ ಬಗ್ಗೆ ಸುಮಾ ಅವರು ಮೇಲಾಧಿಕಾರಿಗಳಿಗೆ ಮಾಹಿಸಿ ನೀಡಿದ್ದಾರೆ.

ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ ನೇಮಕ ವಿವಾದ; 22 ದಿನಗಳಿಂದ ಅಂಗನವಾಡಿ ಬಂದ್
ಅಂಗನವಾಡಿ ಬಳಿ ಪೊಲೀಸರು ಭೇಟಿ ನೀಡಿದ್ದರು
TV9 Web
| Edited By: |

Updated on: Dec 02, 2021 | 10:54 AM

Share

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬೊಮ್ಮೆನಹಳ್ಳಿಪಾಳ್ಯ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕಳೆದ 22 ದಿನಗಳಿಂದ ಗ್ರಾಮಸ್ಥರು ಬೀಗ ಜಡಿದ ಘಟನೆ ನಡೆದಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ನೇಮಕದ ಬಗ್ಗೆ ವಿವಾದ ಉಂಟಾಗಿದ್ದು, ವಿವಾದ ಬಗೆಹರಿಯುವವರೆಗೂ ಬೀಗ ತೆಗೆಯಲ್ಲ ಅಂತಾ ಪಟ್ಟುಹಿಡಿದಿದ್ದಾರೆ. ಬೊಮ್ಮೆನಹಳ್ಳಿಪಾಳ್ಯ ಅಂಗನವಾಡಿ ಕೇಂದ್ರಕ್ಕೆ ತಾಲೂಕಿನ ವಿಜಯನಗರ ಕಾಲೋನಿಯ ಮಿನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಮಾ ಅವರನ್ನ ಅಕ್ಟೋಬರ್ 26 ರಂದು ನೇಮಿಸಲಾಗಿತ್ತು. ನವೆಂಬರ್ 10 ರಂದು ಅಂಗನವಾಡಿ ಕೇಂದ್ರಕ್ಕೆ ಕರ್ತವ್ಯ ನಿರ್ವಹಿಸಲು ಸುಮಾ ಅವರು ಮೇಲ್ವಿಚಾರಕಿ ಜೊತೆ ಬಂದಾಗ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿ ಬೀಗ ಹಾಕಿದ್ದಾರೆ.

ಗ್ರಾಮಸ್ಥರ ಒತ್ತಾಯವೇನು? ಗ್ರಾಮದಲ್ಲಿ ಶೇ.99ರಷ್ಟು ಮಂದಿ ಮುಸ್ಲಿಂ ಸಮುದಾಯದವರು ಇರುವ ಕಾರಣ ಗ್ರಾಮದಲ್ಲಿರುವವರನ್ನೇ ನೇಮಿಸಿ ಅಂತಾ ಗ್ರಾಮಸ್ಥರು ಹಿಡಿದಿದ್ದಾರೆ. ಈ ಬಗ್ಗೆ ಸುಮಾ ಅವರು ಮೇಲಾಧಿಕಾರಿಗಳಿಗೆ ಮಾಹಿಸಿ ನೀಡಿದ್ದಾರೆ. ಬಳಿಕ ನವೆಂಬರ್ 16 ರಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುಷಾ ಮತ್ತು ಸಿಬ್ಬಂದಿ ಗ್ರಾಮಕ್ಕೆ ತೆರಳಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸಿಗುವ ಸೌಲಭ್ಯ ಬಗ್ಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ ಅಂತ ಹೇಳಲಾಗುತ್ತಿದೆ.

ಸದ್ಯ ಯೋಜನಾಧಿಕಾರಿ ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಹೋದರೂ ಅಂಗನವಾಡಿ ಕೇಂದ್ರ ಬೀಗ ತೆರೆದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಗ್ರಾಮದಲ್ಲಿ ಇರೋರನ್ನೇ ನೇಮಿಸಬೇಕು ಅಂತ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಸದ್ಯ ಅಂಗನವಾಡಿ ಬಂದ್ ಆಗಿದ್ದು, ಇದಕ್ಕೆ ಪರಿಹಾರ ಯಾವಾಗ ಸಿಗುತ್ತದೆ ಅಂತ ಕಾದು ನೋಡಬೇಕಿದೆ.

ಇದನ್ನೂ ಓದಿ

ನಡು ಬೀದಿಯಲ್ಲೇ ಮಹಿಳೆ ಹಿಡಿದು ಕೊರೊನಾ ವ್ಯಾಕ್ಸಿನ್​ ಹಾಕಿಸಿದ ಕುಟುಂಬಸ್ಥರು, ವಿಡಿಯೋ ವೈರಲ್

Hindu Muslim : ‘ನಾನು ಅವನನ್ನು ಬಿಡುಗಡೆಗೊಳಿಸುವೆ ನೀನು ಅವನನ್ನು ಇಸ್ಲಾಮಿಗೆ ಮತಾಂತರಿಸಿದರೆ ಮಾತ್ರ’

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ