ತುಮಕೂರು: ವೈದ್ಯರಿಲ್ಲದಿದ್ದಕ್ಕೆ ಮಗು ಸಾವು ಆರೋಪ ಪ್ರಕರಣ; ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಆ್ಯಂಬುಲೆನ್ಸ್​ ಚಾಲಕ ಅಮಾನತು

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 04, 2022 | 1:22 PM

ಕೊಡಿಗೆನಹಳ್ಳಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣ ಮಗು ಸಾವನ್ನಪ್ಪಿದ ಹಿನ್ನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರೋಹಿತ್​​ ಹಾಗೂ ಆ್ಯಂಬುಲೆನ್ಸ್​ ಚಾಲಕ ಸೀನಪ್ಪನನ್ನು ಅಮಾನತು ಮಾಡಲಾಗಿದೆ.

ತುಮಕೂರು: ವೈದ್ಯರಿಲ್ಲದಿದ್ದಕ್ಕೆ ಮಗು ಸಾವು ಆರೋಪ ಪ್ರಕರಣ; ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಆ್ಯಂಬುಲೆನ್ಸ್​ ಚಾಲಕ ಅಮಾನತು
ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ
Follow us on

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾಕ್ಟರ್​ ಇಲ್ಲದ ಕಾರಣ ಮಗು ಸಾವನ್ನಪ್ಪಿದ್ದು. ಆರೋಗ್ಯಾಧಿಕಾರಿಯಾಗಿರುವ ಡಾ.ರಮೇಶ್ ಬಾಬು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ.ಮಂಜುನಾಥ್ ಅವರಿಗೆ ಕರ್ತವ್ಯ ಲೋಪದ ಆರೋಪದ ಮೇಲೆ ನೋಟಿಸ್ ನೀಡಲಾಗಿದೆ. ಪ್ರಕರಣದ ಕುರಿತು ವರದಿ ನೀಡುವಂತೆ ಸೂಚಿಸಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರೋಹಿತ್​​ ಹಾಗೂ ಆ್ಯಂಬುಲೆನ್ಸ್​ ಚಾಲಕ ಸೀನಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಕೊಡಿಗೆನಹಳ್ಳಿ ಗ್ರಾಮದಲ್ಲಿ ಸಂಪ್​ಗೆ ಬಿದ್ದಿದ್ದ ಮಗು ಚಿಕಿತ್ಸೆಗಾಗಿ ಬಂದಾಗ ವೈದ್ಯರಿಲ್ಲದೆ ಕರ್ತವ್ಯ ಲೋಪ ಈ ಬಗ್ಗೆ ವರದಿ ನೀಡುವಂತೆ ಡಿಎಚ್​​ಒ ಡಾ.ಮಂಜುನಾಥ್​ಗೆ ಸೂಚನೆ ನೀಡಲಾಗಿತ್ತು. ವರದಿಯಲ್ಲಿ ಆಸ್ಪತ್ರೆ ವೈದ್ಯ, ಆ್ಯಂಬುಲೆನ್ಸ್ ಚಾಲಕನ ನಿರ್ಲಕ್ಷ್ಯ ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ. ವೈದ್ಯರ ಹಾಗೂ ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ನಡೆಸಿಲ್ಲ, ಜಿಲ್ಲಾ ಆರೋಗ್ಯಧಿಕಾರಿಯಾಗಿ ಸರಿಯಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. 24/7 ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು, ಕರ್ತವ್ಯ ಲೋಪ ಎಸಗಿದ್ದಾರೆ.

ಇದನ್ನೂ ಓದಿ:ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ

ಇನ್ನು ಪಂಚರತ್ನ ಯಾತ್ರೆ ವೇಳೆ ಮಗು ಶವ ಕಂಡು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಕುಮಾರಸ್ವಾಮಿ. ಈ ಪ್ರಕರಣದ ಕುರಿತು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ