AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್; 20 ವರ್ಷ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ತುಮಕೂರಿನ 2ನೇ ಸತ್ರ ನ್ಯಾಯಾಲಯ

ಅಪರಾಧಿಗಳು 1999ರಲ್ಲಿ ಡಿಸಿಸಿ ಬ್ಯಾಂಕ್ಗೆ‌ ಸುಮಾರು 34.85ಲಕ್ಷ ವಂಚನೆ ಮಾಡಿದ್ದರು. ಅಶ್ವಥನಾರಾಯಣ ಲೆಕ್ಕಪತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 50 ಹಾಳೆಗಳ ಡಿಡಿ ಬುಕ್ ಕಳವು ಮಾಡಿದ್ದ. ಡಿಡಿ ಬುಕ್ ಮೂಲಕ ಮೂವರೂ ಆರೋಪಿಗಳು ಸೇರಿ ಬ್ಯಾಂಕ್ ಗೆ 34.85ಲಕ್ಷ ಹಣವನ್ನ ವಂಚನೆ ಮಾಡಿದ್ದರು.

ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್; 20 ವರ್ಷ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ತುಮಕೂರಿನ 2ನೇ ಸತ್ರ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 31, 2021 | 1:37 PM

Share

ತುಮಕೂರು: ಸತತ 20 ವರ್ಷಗಳ ವಾದ ವಿವಾದಗಳ ಬಳಿಕ ತುಮಕೂರಿನ 2ನೇ ಸತ್ರ ನ್ಯಾಯಾಲಯ ಆರೋಪಿಗಳಿಗೆ ಜೈಲು ಶಿಕ್ಷೆ ಆದೇಶ ಹೊರಡಿಸಿದೆ. 1999ರಲ್ಲಿ ಡಿಸಿಸಿ ಬ್ಯಾಂಕ್‌ಗೆ 34.85 ಲಕ್ಷ ವಂಚನೆ ಕೇಸ್ಗೆ ಸಂಬಂಧಿಸಿ ಆರೋಪಿ ಅಶ್ವತ್ಥ್ ನಾರಾಯಣಶೆಟ್ಟಿಗೆ 9 ವರ್ಷ ಜೈಲು ಹಾಗೂ ಜಯಮ್ಮ, ಬಶೀರ್ ಅಹ್ಮದ್‌ಗೆ 6 ವರ್ಷ ಜೈಲು ಶಿಕ್ಷೆ ನೀಡಿ ತುಮಕೂರಿನ 2ನೇ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಡಿಸಿಸಿ ಬ್ಯಾಂಕ್‌ಗೆ 34.85 ಲಕ್ಷ ವಂಚನೆ ಮಾಡಿದ್ದ ನೌಕರ ಹಾಗೂ ಇತರ ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿ ತುಮಕೂರು 2 ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ. ಸುದೀರ್ಘ 20 ವರ್ಷಗಳ ಕಾಲ ವಾದ ವಿವಾದ ನಡೆದು ಕೊನೆಗೂ ಆದೇಶ ಹೊರ ಬಿದ್ದಿದೆ. ಡಿಸಿಸಿ ಬ್ಯಾಂಕ್ ನೌಕರ ಅಶ್ವಥನಾರಾಯಣಶೆಟ್ಟಿಗೆ 9 ವರ್ಷ, ಅವರ ಸಂಬಂಧಿ ಶಾಂತಲಕ್ಷ್ಮಮ್ಮ, ಸ್ನೇಹಿತ ಬಶೀರ್ ಅಹ್ಮದ್‌ಗೆ ತಲಾ 6 ವರ್ಷಗಳ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಹೆಚ್.ಎಸ್. ಮಲ್ಲಿಕಾರ್ಜುನಸ್ವಾಮಿ ಅವರು ಆದೇಶ ನೀಡಿದ್ದಾರೆ.

1999 ರಲ್ಲಿ ವಂಚನೆ ನಡೆದಿದ್ದು, 2001 ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಡಿಸಿಸಿ ಬ್ಯಾಂಕ್ ನೌಕರ ಅಶ್ವಥನಾರಾಯಣಶೆಟ್ಟಿ ಬ್ಯಾಂಕ್‌ನ ಲೆಕ್ಕಪತ್ರ ವಿಭಾಗ ಹಾಗೂ ಡಿಡಿ ಪುಸ್ತಕ ವಿತರಿಸುವ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ 50 ಹಾಳೆಗಳಿರುವ ಒಂದು ಡಿಡಿ ಪುಸ್ತಕವನ್ನು ಕಳವು ಮಾಡಿ, ಸಂಬಂಧಿ ಶಾಂತಲಕ್ಷಮ್ಮ, ಸ್ನೇಹಿತ ಬಶೀರ್ ಅಹ್ಮದ್​ಗೆ 34 ಲಕ್ಷದ 85 ಸಾವಿರ ರೂಪಾಯಿಯನ್ನ ಹಂಚಿದ್ದರು. ಅಲ್ಲದೇ, ಅಂದಿನ ಮ್ಯಾನೇಜರ್ ಸಹಿಯನ್ನ ನಕಲು ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

Published On - 12:23 pm, Tue, 31 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?