AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮಗಳನ್ನು ಹತ್ಯೆಗೈದಿದ್ದ ತಂದೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬೇರೊಬ್ಬಳ ಜೊತೆ ಮದುವೆಯಾಗಲು ಅಡ್ಡಿ ಬರುತ್ತಾಳೆ ಎಂದು ತನ್ನ ಮಗಳನ್ನೇ ಹತ್ಯೆ ಮಾಡಿದ್ದ ಅಪರಾಧಿ ತಂದೆಗೆ ತುಮಕೂರು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ತನ್ನ ನಾಲ್ಕು ವರ್ಷದ‌ ಮಗಳನ್ನು ಕೊಲೆ ಮಾಡಿ ಬಾವಿಗೆ ಬಿಸಾಡಿದ್ದ ನರಸಿಂಹಮೂರ್ತಿಗೆ ಶಿಕ್ಷೆಗೆ ಒಳಗಾದ ಅಪರಾಧಿ.

ತುಮಕೂರು: ಮಗಳನ್ನು ಹತ್ಯೆಗೈದಿದ್ದ ತಂದೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಮಗಳನ್ನು ಕೊಂದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ (ಸಾಂದರ್ಭಿಕ ಚಿತ್ರ)Image Credit source: iStock Photo
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Sep 02, 2023 | 11:14 AM

Share

ತುಮಕೂರು, ಸೆ.2: ಬೇರೊಬ್ಬಳ ಜೊತೆ ಮದುವೆಯಾಗಲು ಅಡ್ಡಿ ಬರುತ್ತಾಳೆ ಎಂದು ತನ್ನ ಮಗಳನ್ನೇ ಹತ್ಯೆ (Murder) ಮಾಡಿದ್ದ ಅಪರಾಧಿ ತಂದೆಗೆ ತುಮಕೂರು (Tumkur) ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ತನ್ನ ನಾಲ್ಕು ವರ್ಷದ‌ ಮಗಳನ್ನು ಕೊಲೆ ಮಾಡಿ ಬಾವಿಗೆ ಬಿಸಾಡಿದ್ದ ನರಸಿಂಹಮೂರ್ತಿಗೆ ಶಿಕ್ಷೆಗೆ ಒಳಗಾದ ಅಪರಾಧಿ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತಣ್ಣೇನಹಳ್ಳಿ ಸಮೀಪದ ವೆಂಕಟಾಪುರದ ಗ್ರಾಮದ ನರಸಿಂಹಮೂರ್ತಿ, ತನ್ನ ಪತ್ನಿಯ ಮೇಲೆ ಅಕ್ರಮ ಸಂಬಂಧದ ಶಂಕೆ ಹೊಂದಿದ್ದನು. ಹೀಗಾಗಿ ಆಕೆಯನ್ನು ಬಿಟ್ಟು ಬೇರೊಬ್ಬಳಂದಿಗೆ ಮದುವೆಯಾಗಲು ನಿರ್ಧರಿಸಿದ್ದನು.

ಇದನ್ನೂ ಓದಿ: ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ಆದರೆ, ಮದುವೆಗೆ ಸ್ವಂತ ಮಗಳು ಅಡ್ಡ ಬರುತ್ತಾಳೆಂದು 2018 ಡಿಸೆಂಬರ್ 4 ರಂದು ನಾಲ್ಕು ವರ್ಷದ ಮಗಳನ್ನೇ ಕೊಂದು ಬಾವಿಗೆ ಎಸೆದು ಪರಾರಿಯಾಗಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಕೋಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ತುಮಕೂರು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ ಗೀತಾ ಅವರು, ಆರೋಪಿ ನರಸಿಂಹಮೂರ್ತಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆ ನರಸಿಂಹಮೂರ್ತಿಯನ್ನು ಅಪರಾಧಿ ಎಂದು ಘೋಷಿಸಿ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ವಕೀಲ ಎಸ್ ರಾಜಣ್ಣ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:10 am, Sat, 2 September 23

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ