AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devarayanadurga: ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ, ಜನಪ್ರತಿನಿಧಿಗಳು-ಅಧಿಕಾರಿಗಳು ಶಾಮೀಲಾಗಿದ್ದಾರಾ?

ಊರ್ಡಿಗೆರೆ ಹೋಬಳಿಯಲ್ಲಿ ಬರುವ ದುರ್ಗದಹಳ್ಳಿ ಗೋಮಾಳಲ್ಲಿರುವ 49 ಎಕರೆ ಪ್ರದೇಶವನ್ನು ಅಕ್ರಮವಾಗಿ ಜೆಸಿಬಿಯಿಂದ ಅಗೆಯಲಾಗಿದೆ. ರೆಸಾರ್ಟ್ ನಿರ್ಮಿಸಲು ನೂರಾರು ಗಿಡಗಳನ್ನು ಅನುಮತಿ ಪಡೆಯದೇ ಕಡಿದು ಹಾಕಿದ್ದಾರೆ.

Devarayanadurga: ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ, ಜನಪ್ರತಿನಿಧಿಗಳು-ಅಧಿಕಾರಿಗಳು ಶಾಮೀಲಾಗಿದ್ದಾರಾ?
ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 20, 2023 | 2:30 PM

Share

ಐತಿಹಾಸಿಕ ಪ್ರವಾಸಿ ತಾಣ, ಸಂರಕ್ಷಿತ ಅರಣ್ಯ ಪ್ರದೇಶ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ಪದೇ ಪದೇ ಜೆಸಿಬಿ ಘರ್ಜನೆ ಮಾಡುತ್ತಿದೆ. ರಿಯಲ್ ಎಸ್ಟೇಟ್ ಕುಳಗಳು ಒಂದರ ಹಿಂದೆ ಒಂದು ರೆಸಾರ್ಟ್ (Hill Resort) ನಿರ್ಮಾಣಕ್ಕೆ ಕೈ ಹಾಕುತಿದ್ದಾರೆ. ಪರಿಣಾಮ ಜೀವ ಸಂಕುಲಕ್ಕೆ ಸಂಚಕಾರ ತಂದೊಡ್ಡುತ್ತಿದೆ. ತುಮಕೂರು (Tumkur) ಜಿಲ್ಲೆಯ ದೇವರಾಯನ ದುರ್ಗದ (Devarayanadurga) ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ (Forest) ಕಾನೂನುಬಾಹಿರವಾಗಿ ಗುಡ್ಡ ಬಗೆದು ಜೀವ ವೈವಿಧ್ಯತೆ ನಾಶದ ಜತೆಗೆ ಸರ್ಕಾರಿ ಗೋಮಾಳವನ್ನು ಅತಿಕ್ರಮಿಸುವ ದೊಡ್ಡ ಹುನ್ನಾರ ನಡೆದಿದೆ. ಇದರಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿದ್ದಾರಾ ಎಂಬ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಊರ್ಡಿಗೆರೆ ಹೋಬಳಿಯಲ್ಲಿ ಬರುವ ದುರ್ಗದಹಳ್ಳಿಯ ಸರ್ವೇ ನಂ. 4ರ ಗೋಮಾಳಲ್ಲಿರುವ ಸುಮಾರು 49 ಎಕರೆ ಪ್ರದೇಶವನ್ನು ಅಕ್ರಮವಾಗಿ ಜೆಸಿಬಿಯಿಂದ ಅಗೆಯಲಾಗಿದೆ. ಹಣವಿರುವ ಕುಳಗಳು ಈಗಾಗಲೇ ರೆಸಾರ್ಟ್ ನಿರ್ಮಿಸಲು ನೂರಾರು ಗಿಡಗಳನ್ನು ಅನುಮತಿ ಪಡೆಯದೇ ಕಡಿದು ಹಾಕಿದ್ದಾರೆ. ಈ ಕುರಿತು ಊರಿನ ಯಾರಿಗೂ ಮಾಹಿತಿ ಇಲ್ಲ. ಸುಮಾರು 15 ದಿನಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಅಕ್ರಮವಾಗಿ ನಿರ್ಮಾಣವಾಗುತ್ತಿರುವ ರೆಸಾರ್ಟ್‌ಗೆ ಅಧಿಕಾರಿಗಳು ಕೃಪಾಕಟಾಕ್ಷವಿದೆ ಎಂದು ಆರೋಪಿಸಲಾಗಿದೆ.

ಇನ್ನು ಸಾವಿರಾರು ಜಾತಿಯ ಸಸ್ಯಗಳನ್ನು ನಾಶ ಮಾಡಲಾಗಿದೆ. ದೇವರಾಯನದುರ್ಗದ ತಪ್ಪಲಿನಲ್ಲಿ ಬರುವ ದುರ್ಗದಹಳ್ಳಿಯು ಸಂರಕ್ಷಿತ ಅರಣ್ಯಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮವಾಗಿದೆ. ಈ ಗ್ರಾಮದ ಸುತ್ತಮುತ್ತಲಿನಲ್ಲಿ ವಾಸಿಸುವ ಕಾಡುಪಾಪ, ಚಿರತೆ, ಮೊಲ, ಉಡ, ಕಾಡುಬೆಕ್ಕು, ಹೆಬ್ಬಾವು, ಸುಮಾರು 30ಕ್ಕೂ ಹೆಚ್ಚು ಬಗೆಯ ಹಾವುಗಳು, 10ಕ್ಕಿಂತ ಹೆಚ್ಚು ವಿಧದ ಕಪ್ಪೆಗಳು, 163 ಬಗೆಯ ಪಕ್ಷಿಗಳು, 7 ಬಗೆಯ ಚೇಳುಗಳು, ಮುಳ್ಳು ಹಂದಿ, ಕಾಡು ಹಂದಿ, ಕರಡಿ ಸೇರಿ ನೂರಾರು ಜಾತಿಯ ಗಿಡ-ಮರಗಳು ಇಲ್ಲಿವೆ. ಜತೆಗೆ ನವಿಲುಗಳ ವಾಸಸ್ಥಾನವೂ ಇದ್ದು, ಜಿಂಕೆಗಳ ಆವಾಸ ಸ್ಥಾನವಾಗಿದೆ.

ಇದನ್ನೂ ಓದಿ:

ಕೈಬೀಸಿ ಕರೆಯುತ್ತಿದೆ ದೇವರಾಯನದುರ್ಗ; ಹಚ್ಚಹಸಿರಿನ ಪ್ರಕೃತಿ ಸೊಬಗನ್ನು ಸವಿಯಲು ಹರಿದು ಬರುತ್ತಿದೆ ಪ್ರವಾಸಿಗರ ದಂಡು

ರೆಸಾರ್ಟ್ ನಿರ್ಮಾಣದಿಂದ ಇವುಗಳಿಗೆ ಕಂಟಕ ಎದುರಾಗುತ್ತದೆ. ಈಗಾಗಲೇ ನವಿಲುಗಳ ಮೊಟ್ಟೆಗಳು ನಾಶವಾಗಿವೆ. ಅಷ್ಟಲ್ಲದೇ ಭಾರತದಲ್ಲಿ ಅಪರೂಪವಾಗಿ ಕಂಡು ಬರುವ ಜೇಡ ಪ್ರಬೇಧವೂ ಈ ದೇವರಾಯನದುರ್ಗದ ಅರಣ್ಯದಲ್ಲಿವೆ. ಅಭಿವೃದ್ಧಿಯ ಹೆಸರಿನಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದೆ. ಸದ್ಯ ಜೆಸಿಬಿ ತಂದು ಗುಡ್ಡ ಅಗೆದ ರಾಮಚಂದ್ರ ಅನ್ನುವವರ ವಿರುದ್ದ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜಾರೋಷವಾಗಿ ಈ ಭಾಗದಲ್ಲಿ ಗುಡ್ಡವನ್ನು ಅಗೆಯುವುದರಿಂದ ಮುಂದೆ ಗುಡ್ಡ ಕುಸಿತವಾಗಬಹುದು. ಆಗ ಗ್ರಾಮಸ್ಥರಿಗೆ ಏನಾದರೂ ಆದರೆ ಯಾರು ಜವಾವ್ದಾರಿ, ಕುರಿಗಳನ್ನು ಮೇಯಿಸುತ್ತಿದ್ದ ಜಾಗದಲ್ಲೇ ರೆಸಾರ್ಟ್‌ ನಿರ್ಮಿಸುತ್ತಿದ್ದು, ಕುರಿಗಳಿಗೆ ಹುಲ್ಲು ಇಲ್ಲದಂತಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಅಕ್ರಮವಾಗಿ ನಡೆಯುತ್ತಿರುವ ಚಟುವಟಿಕೆಗೆ ತಕ್ಷಣ ಕಡಿವಾಣ ಹಾಕಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತುಮಕೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Thu, 20 July 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ