AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devarayanadurga: ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ, ಜನಪ್ರತಿನಿಧಿಗಳು-ಅಧಿಕಾರಿಗಳು ಶಾಮೀಲಾಗಿದ್ದಾರಾ?

ಊರ್ಡಿಗೆರೆ ಹೋಬಳಿಯಲ್ಲಿ ಬರುವ ದುರ್ಗದಹಳ್ಳಿ ಗೋಮಾಳಲ್ಲಿರುವ 49 ಎಕರೆ ಪ್ರದೇಶವನ್ನು ಅಕ್ರಮವಾಗಿ ಜೆಸಿಬಿಯಿಂದ ಅಗೆಯಲಾಗಿದೆ. ರೆಸಾರ್ಟ್ ನಿರ್ಮಿಸಲು ನೂರಾರು ಗಿಡಗಳನ್ನು ಅನುಮತಿ ಪಡೆಯದೇ ಕಡಿದು ಹಾಕಿದ್ದಾರೆ.

Devarayanadurga: ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ, ಜನಪ್ರತಿನಿಧಿಗಳು-ಅಧಿಕಾರಿಗಳು ಶಾಮೀಲಾಗಿದ್ದಾರಾ?
ರೆಸಾರ್ಟ್ ನಿರ್ಮಿಸಲು ದೇವರಾಯನ ದುರ್ಗದ ಅರಣ್ಯ ಪ್ರದೇಶ ನಾಶ
ಮಹೇಶ್ ಇ, ಭೂಮನಹಳ್ಳಿ
| Updated By: ಸಾಧು ಶ್ರೀನಾಥ್​|

Updated on:Jul 20, 2023 | 2:30 PM

Share

ಐತಿಹಾಸಿಕ ಪ್ರವಾಸಿ ತಾಣ, ಸಂರಕ್ಷಿತ ಅರಣ್ಯ ಪ್ರದೇಶ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ಪದೇ ಪದೇ ಜೆಸಿಬಿ ಘರ್ಜನೆ ಮಾಡುತ್ತಿದೆ. ರಿಯಲ್ ಎಸ್ಟೇಟ್ ಕುಳಗಳು ಒಂದರ ಹಿಂದೆ ಒಂದು ರೆಸಾರ್ಟ್ (Hill Resort) ನಿರ್ಮಾಣಕ್ಕೆ ಕೈ ಹಾಕುತಿದ್ದಾರೆ. ಪರಿಣಾಮ ಜೀವ ಸಂಕುಲಕ್ಕೆ ಸಂಚಕಾರ ತಂದೊಡ್ಡುತ್ತಿದೆ. ತುಮಕೂರು (Tumkur) ಜಿಲ್ಲೆಯ ದೇವರಾಯನ ದುರ್ಗದ (Devarayanadurga) ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ (Forest) ಕಾನೂನುಬಾಹಿರವಾಗಿ ಗುಡ್ಡ ಬಗೆದು ಜೀವ ವೈವಿಧ್ಯತೆ ನಾಶದ ಜತೆಗೆ ಸರ್ಕಾರಿ ಗೋಮಾಳವನ್ನು ಅತಿಕ್ರಮಿಸುವ ದೊಡ್ಡ ಹುನ್ನಾರ ನಡೆದಿದೆ. ಇದರಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿದ್ದಾರಾ ಎಂಬ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಊರ್ಡಿಗೆರೆ ಹೋಬಳಿಯಲ್ಲಿ ಬರುವ ದುರ್ಗದಹಳ್ಳಿಯ ಸರ್ವೇ ನಂ. 4ರ ಗೋಮಾಳಲ್ಲಿರುವ ಸುಮಾರು 49 ಎಕರೆ ಪ್ರದೇಶವನ್ನು ಅಕ್ರಮವಾಗಿ ಜೆಸಿಬಿಯಿಂದ ಅಗೆಯಲಾಗಿದೆ. ಹಣವಿರುವ ಕುಳಗಳು ಈಗಾಗಲೇ ರೆಸಾರ್ಟ್ ನಿರ್ಮಿಸಲು ನೂರಾರು ಗಿಡಗಳನ್ನು ಅನುಮತಿ ಪಡೆಯದೇ ಕಡಿದು ಹಾಕಿದ್ದಾರೆ. ಈ ಕುರಿತು ಊರಿನ ಯಾರಿಗೂ ಮಾಹಿತಿ ಇಲ್ಲ. ಸುಮಾರು 15 ದಿನಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಅಕ್ರಮವಾಗಿ ನಿರ್ಮಾಣವಾಗುತ್ತಿರುವ ರೆಸಾರ್ಟ್‌ಗೆ ಅಧಿಕಾರಿಗಳು ಕೃಪಾಕಟಾಕ್ಷವಿದೆ ಎಂದು ಆರೋಪಿಸಲಾಗಿದೆ.

ಇನ್ನು ಸಾವಿರಾರು ಜಾತಿಯ ಸಸ್ಯಗಳನ್ನು ನಾಶ ಮಾಡಲಾಗಿದೆ. ದೇವರಾಯನದುರ್ಗದ ತಪ್ಪಲಿನಲ್ಲಿ ಬರುವ ದುರ್ಗದಹಳ್ಳಿಯು ಸಂರಕ್ಷಿತ ಅರಣ್ಯಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮವಾಗಿದೆ. ಈ ಗ್ರಾಮದ ಸುತ್ತಮುತ್ತಲಿನಲ್ಲಿ ವಾಸಿಸುವ ಕಾಡುಪಾಪ, ಚಿರತೆ, ಮೊಲ, ಉಡ, ಕಾಡುಬೆಕ್ಕು, ಹೆಬ್ಬಾವು, ಸುಮಾರು 30ಕ್ಕೂ ಹೆಚ್ಚು ಬಗೆಯ ಹಾವುಗಳು, 10ಕ್ಕಿಂತ ಹೆಚ್ಚು ವಿಧದ ಕಪ್ಪೆಗಳು, 163 ಬಗೆಯ ಪಕ್ಷಿಗಳು, 7 ಬಗೆಯ ಚೇಳುಗಳು, ಮುಳ್ಳು ಹಂದಿ, ಕಾಡು ಹಂದಿ, ಕರಡಿ ಸೇರಿ ನೂರಾರು ಜಾತಿಯ ಗಿಡ-ಮರಗಳು ಇಲ್ಲಿವೆ. ಜತೆಗೆ ನವಿಲುಗಳ ವಾಸಸ್ಥಾನವೂ ಇದ್ದು, ಜಿಂಕೆಗಳ ಆವಾಸ ಸ್ಥಾನವಾಗಿದೆ.

ಇದನ್ನೂ ಓದಿ:

ಕೈಬೀಸಿ ಕರೆಯುತ್ತಿದೆ ದೇವರಾಯನದುರ್ಗ; ಹಚ್ಚಹಸಿರಿನ ಪ್ರಕೃತಿ ಸೊಬಗನ್ನು ಸವಿಯಲು ಹರಿದು ಬರುತ್ತಿದೆ ಪ್ರವಾಸಿಗರ ದಂಡು

ರೆಸಾರ್ಟ್ ನಿರ್ಮಾಣದಿಂದ ಇವುಗಳಿಗೆ ಕಂಟಕ ಎದುರಾಗುತ್ತದೆ. ಈಗಾಗಲೇ ನವಿಲುಗಳ ಮೊಟ್ಟೆಗಳು ನಾಶವಾಗಿವೆ. ಅಷ್ಟಲ್ಲದೇ ಭಾರತದಲ್ಲಿ ಅಪರೂಪವಾಗಿ ಕಂಡು ಬರುವ ಜೇಡ ಪ್ರಬೇಧವೂ ಈ ದೇವರಾಯನದುರ್ಗದ ಅರಣ್ಯದಲ್ಲಿವೆ. ಅಭಿವೃದ್ಧಿಯ ಹೆಸರಿನಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದೆ. ಸದ್ಯ ಜೆಸಿಬಿ ತಂದು ಗುಡ್ಡ ಅಗೆದ ರಾಮಚಂದ್ರ ಅನ್ನುವವರ ವಿರುದ್ದ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜಾರೋಷವಾಗಿ ಈ ಭಾಗದಲ್ಲಿ ಗುಡ್ಡವನ್ನು ಅಗೆಯುವುದರಿಂದ ಮುಂದೆ ಗುಡ್ಡ ಕುಸಿತವಾಗಬಹುದು. ಆಗ ಗ್ರಾಮಸ್ಥರಿಗೆ ಏನಾದರೂ ಆದರೆ ಯಾರು ಜವಾವ್ದಾರಿ, ಕುರಿಗಳನ್ನು ಮೇಯಿಸುತ್ತಿದ್ದ ಜಾಗದಲ್ಲೇ ರೆಸಾರ್ಟ್‌ ನಿರ್ಮಿಸುತ್ತಿದ್ದು, ಕುರಿಗಳಿಗೆ ಹುಲ್ಲು ಇಲ್ಲದಂತಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಅಕ್ರಮವಾಗಿ ನಡೆಯುತ್ತಿರುವ ಚಟುವಟಿಕೆಗೆ ತಕ್ಷಣ ಕಡಿವಾಣ ಹಾಕಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತುಮಕೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Thu, 20 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ