AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆ ಆತಂಕ; ಇಂದಿನಿಂದ ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ

ದೇವಾಸ್ಥಾನಗಳಲ್ಲಿ ದೈನಂದಿನ ಪೂಜೆ ಹೊರತುಪಡಿಸಿ ಅಮಾವಾಸ್ಯೆ ಪೂಜೆ, ಧಾರ್ಮಿಕ ಸೇವೆಗಳು, ಉತ್ಸವಗಳು ಜಾತ್ರೆಗಳನ್ನ ಜಿಲ್ಲಾಡಳಿತ ಬಂದ್ ಮಾಡಿ ಆದೇಶ ನೀಡಿದೆ. ಅರ್ಚಕರು ಮಾತ್ರ ಸಾಂಪ್ರದಾಯಿಕ ಪೂಜೆ ಮಾಡಬಹುದು.

ಕೊರೊನಾ ಮೂರನೇ ಅಲೆ ಆತಂಕ; ಇಂದಿನಿಂದ ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ
ಸಾಂಕೇತಿಕ ಚಿತ್ರ
TV9 Web
| Updated By: sandhya thejappa|

Updated on: Aug 12, 2021 | 9:33 AM

Share

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಶುರುವಾಗಿದೆ. ಜುಲೈ ತಿಂಗಳಲ್ಲಿ ಇಳಿಮುಖ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಮತ್ತೆ ಹೆಚ್ಚಾಗುತ್ತಿದೆ. ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮತ್ತೆ ಕಠಿಣ ನಿಯಮಗಳು ಜಾರಿಯಾಗುವ ಸಾಧ್ಯತೆಯೂ ಇದೆ. ಹೀಗಾಗಿ ಕೊರೊನಾ ಸೋಂಕನ್ನು ನಿಯಂತ್ರಿಸಲು ತುಮಕೂರು ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ಇಂದಿನಿಂದ (ಆಗಸ್ಟ್ 12) ತುಮಕೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿತಾಣ, ದೇಗುಲಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ದೇವಾಸ್ಥಾನಗಳಲ್ಲಿ ದೈನಂದಿನ ಪೂಜೆ ಹೊರತುಪಡಿಸಿ ಅಮಾವಾಸ್ಯೆ ಪೂಜೆ, ಧಾರ್ಮಿಕ ಸೇವೆಗಳು, ಉತ್ಸವಗಳು ಜಾತ್ರೆಗಳನ್ನ ಜಿಲ್ಲಾಡಳಿತ ಬಂದ್ ಮಾಡಿ ಆದೇಶ ನೀಡಿದೆ. ಅರ್ಚಕರು ಮಾತ್ರ ಸಾಂಪ್ರದಾಯಿಕ ಪೂಜೆ ಮಾಡಬಹುದು. ಆದರೆ ಭಕ್ತರಿಗೆ ದೇವಾಲಯಗಳಿಗೆ ಬರಲು ಅವಕಾಶವಿರಲ್ಲ. ಶನಿವಾರ, ಭಾನುವಾರ, ಸೋಮವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಪ್ರೇಕ್ಷಣೀಯ ಪ್ರದೇಶಗಳಾದ ದೇವರಾಯನದುರ್ಗ, ನಾಮದ ಚಿಲುಮೆ, ಬಸದಿಬೆಟ್ಟ, ರಾಮದೇವರಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ಹಲವು ಪ್ರವಾಸಿತಾಣಗಳನ್ನು ಸಂಪೂಣ್ ಬಂದ್ ಮಾಡಲಾಗಿದೆ.

ವಸತಿ ಗೃಹಗಳಲ್ಲಿ ತಂಗಲು ಬಯಸುವ ಹೊರ ರಾಜ್ಯದವರು 72 ಗಂಟೆಯೊಳಗೆ ಆರ್​ಟಿಪಿಸಿಆರ್ (RTPCR) ಟೆಸ್ಟ್ ನೆಗಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಅಂತ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೊವಿಡ್ 19 ಮೂರನೇ ಅಲೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿನ್ನೆ ನಡೆದ ಜಿಲ್ಲಾ ವಿಪತ್ತು, ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಕ್ರಮಗಳನ್ನು ನಿರ್ಧರಿಸಲಾಗಿದೆ.

ಇದನ್ನೂ ಓದಿ

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

Sleeping Tips: ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ? ಈ ಅಭ್ಯಾಸಗಳನ್ನು ಅನುಸರಿಸಿ

(Tumkur District Administration Prohibition Enacted for controlling Corona third wave)

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು