AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ, ಹೇಗೆ?

ಇಂದು ಗಿಳಿ ಸಿಕ್ಕ ಖುಷಿಯಲ್ಲಿ 50 ಸಾವಿರ ಬದಲಿಗೆ 85 ಸಾವಿರ ಬಹುಮಾನ ಕೊಟ್ಟು ಅರ್ಜುನ್ ದಂಪತಿ ಖುಷಿ ಪಟ್ಟಿದ್ದಾರೆ. ತಮ್ಮ ಕುಟುಂಬದಲ್ಲಿ ಒಂದಾಗಿದ್ದ ಗಿಳಿ ಮತ್ತೆ ಮನೆಗೆ ಬಂದಿದ್ದಕ್ಕೆ ಮನೆಯಲ್ಲಿ ಸಂತಸ ಮನೆ ಮಾಡಿದೆ.

ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ, ಹೇಗೆ?
ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ
TV9 Web
| Edited By: ಆಯೇಷಾ ಬಾನು|

Updated on:Jul 22, 2022 | 10:40 PM

Share

ತುಮಕೂರು: ತಮ್ಮ ಕುಟುಂಬದಲ್ಲೇ ಒಂದಾಗಿದ್ದ ಗಿಳಿಯೊಂದು ಜುಲೈ 16ರಂದು ನಾಪತ್ತೆಯಾಗಿತ್ತು. ಗಿಳಿ(Parrot) ನಾಪತ್ತೆ ಬಗ್ಗೆ ಕುಟುಂಬಸ್ಥರು ಪ್ರಕಟಣೆ ಹೊರಡಿಸಿದ್ದರು. ಹಾಗೂ ಗಿಳಿ ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಸದ್ಯ ಈಗ ಆ ಗಿಳಿ ಸಿಕ್ಕಿದ್ದು ಗಿಣಿ ಸಿಕ್ಕ ಖುಷಿಯಲ್ಲಿ 85 ಸಾವಿರ ಬಹುಮಾನ ಕೊಟ್ಟಿದ್ದಾರೆ.

ಶಿವಮೊಗ್ಗದ ಭದ್ರಾವತಿಯಲ್ಲಿದ್ದ ಅರ್ಜುನ್ ಹಾಗೂ ರಂಜನಾ ದಂಪತಿ ಮೂರು ವರ್ಷಗಳಿಂದ ಎರಡು ಗಿಳಿಗಳನ್ನ ಸಾಕುತಿದ್ರು. ಕಳೆದ 20 ದಿನಗಳ ಹಿಂದಷ್ಟೇ ತುಮಕೂರಿನ ಜಯನಗರಕ್ಕೆ ಶಿಫ್ಟ್ ಆಗಿದ್ರು. ಆದ್ರೆ ಜುಲೈ 16 ರಂದು ಮನೆಯ ಬಾಗಿಲು ತೆರೆದಾಗ ಗಂಡು ಗಿಣಿ ಹಾರಿಹೋಗಿದ್ದು ಪುನಃ ಬಂದಿಲ್ಲ. ಹೀಗಾಗಿ ಆಟೋದಲ್ಲಿ ಅನೌನ್ಸ್ ಮಾಡುತ್ತಾ, ಕರಪತ್ರ ಹಂಚುತ್ತಾ ಗಿಳಿಗಾಗಿ ಹುಡುಕಾಡುತ್ತಿದ್ದರು. ಆಫ್ರಿಕನ್ ಗ್ರೇ ಬಣ್ಣದ ಗಂಡು ಗಿಳಿಗೆ ರುಸ್ತುಮಾ ಅಂತಾ ಹೆಸರಿಟ್ಟಿದ್ರು. ಆದ್ರೀಗ ಪ್ರೀತಿಯ ಗಿಳಿ ಹಾರಿಹೋಗಿದ್ದು ಹುಡುಕಿ ಕೊಟ್ಟವ್ರಿಗೆ 50 ಸಾವಿರ ರೂಪಾಯಿ ಬಹುಮಾನ ಕೊಡೋದಾಗಿ ಹೇಳಿದ್ದರು.

ಸದ್ಯ ಈಗ ಸಿದ್ಧಗಂಗಾ ಮಠದ ಬಂಡೆ ಪಾಳ್ಯದಲ್ಲಿ ಗಿಳಿ ಪತ್ತೆಯಾಗಿದೆ. ಶ್ರೀನಿವಾಸ್ ಎಂಬುವವರ ಮನೆಯ ಟೇರಸ್ ಮೇಲೆ ಗಿಳಿ ಕೂತಿತ್ತು. ಇದನ್ನು ಗಮನಿಸಿದ ಮನೆ ಯಜಮಾನ ಕೊನೆಗೂ ಗಿಳಿಯನ್ನು ಅದರ ಮಾಲೀಕರ ಕೈಗೆ ಒಪ್ಪಿಸಿದ್ದಾರೆ. ಇಂದು ಗಿಳಿ ಸಿಕ್ಕ ಖುಷಿಯಲ್ಲಿ 50 ಸಾವಿರ ಬದಲಿಗೆ 85 ಸಾವಿರ ಬಹುಮಾನ ಕೊಟ್ಟು ಅರ್ಜುನ್ ದಂಪತಿ ಖುಷಿ ಪಟ್ಟಿದ್ದಾರೆ. ತಮ್ಮ ಕುಟುಂಬದಲ್ಲಿ ಒಂದಾಗಿದ್ದ ಗಿಳಿ ಮತ್ತೆ ಮನೆಗೆ ಬಂದಿದ್ದಕ್ಕೆ ಮನೆಯಲ್ಲಿ ಸಂತೋಷ ಮನೆ ಮಾಡಿದೆ. ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Published On - 10:36 pm, Fri, 22 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ