AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ, ಹೇಗೆ?

ಇಂದು ಗಿಳಿ ಸಿಕ್ಕ ಖುಷಿಯಲ್ಲಿ 50 ಸಾವಿರ ಬದಲಿಗೆ 85 ಸಾವಿರ ಬಹುಮಾನ ಕೊಟ್ಟು ಅರ್ಜುನ್ ದಂಪತಿ ಖುಷಿ ಪಟ್ಟಿದ್ದಾರೆ. ತಮ್ಮ ಕುಟುಂಬದಲ್ಲಿ ಒಂದಾಗಿದ್ದ ಗಿಳಿ ಮತ್ತೆ ಮನೆಗೆ ಬಂದಿದ್ದಕ್ಕೆ ಮನೆಯಲ್ಲಿ ಸಂತಸ ಮನೆ ಮಾಡಿದೆ.

ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ, ಹೇಗೆ?
ವಾರದ ಬಳಿಕ ಕೊನೆಗೂ ಮಾಲೀಕರ ಕೈಸೇರಿತು ಮಿಸ್ಸಿಂಗ್ ಗಿಳಿ
TV9 Web
| Edited By: |

Updated on:Jul 22, 2022 | 10:40 PM

Share

ತುಮಕೂರು: ತಮ್ಮ ಕುಟುಂಬದಲ್ಲೇ ಒಂದಾಗಿದ್ದ ಗಿಳಿಯೊಂದು ಜುಲೈ 16ರಂದು ನಾಪತ್ತೆಯಾಗಿತ್ತು. ಗಿಳಿ(Parrot) ನಾಪತ್ತೆ ಬಗ್ಗೆ ಕುಟುಂಬಸ್ಥರು ಪ್ರಕಟಣೆ ಹೊರಡಿಸಿದ್ದರು. ಹಾಗೂ ಗಿಳಿ ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಸದ್ಯ ಈಗ ಆ ಗಿಳಿ ಸಿಕ್ಕಿದ್ದು ಗಿಣಿ ಸಿಕ್ಕ ಖುಷಿಯಲ್ಲಿ 85 ಸಾವಿರ ಬಹುಮಾನ ಕೊಟ್ಟಿದ್ದಾರೆ.

ಶಿವಮೊಗ್ಗದ ಭದ್ರಾವತಿಯಲ್ಲಿದ್ದ ಅರ್ಜುನ್ ಹಾಗೂ ರಂಜನಾ ದಂಪತಿ ಮೂರು ವರ್ಷಗಳಿಂದ ಎರಡು ಗಿಳಿಗಳನ್ನ ಸಾಕುತಿದ್ರು. ಕಳೆದ 20 ದಿನಗಳ ಹಿಂದಷ್ಟೇ ತುಮಕೂರಿನ ಜಯನಗರಕ್ಕೆ ಶಿಫ್ಟ್ ಆಗಿದ್ರು. ಆದ್ರೆ ಜುಲೈ 16 ರಂದು ಮನೆಯ ಬಾಗಿಲು ತೆರೆದಾಗ ಗಂಡು ಗಿಣಿ ಹಾರಿಹೋಗಿದ್ದು ಪುನಃ ಬಂದಿಲ್ಲ. ಹೀಗಾಗಿ ಆಟೋದಲ್ಲಿ ಅನೌನ್ಸ್ ಮಾಡುತ್ತಾ, ಕರಪತ್ರ ಹಂಚುತ್ತಾ ಗಿಳಿಗಾಗಿ ಹುಡುಕಾಡುತ್ತಿದ್ದರು. ಆಫ್ರಿಕನ್ ಗ್ರೇ ಬಣ್ಣದ ಗಂಡು ಗಿಳಿಗೆ ರುಸ್ತುಮಾ ಅಂತಾ ಹೆಸರಿಟ್ಟಿದ್ರು. ಆದ್ರೀಗ ಪ್ರೀತಿಯ ಗಿಳಿ ಹಾರಿಹೋಗಿದ್ದು ಹುಡುಕಿ ಕೊಟ್ಟವ್ರಿಗೆ 50 ಸಾವಿರ ರೂಪಾಯಿ ಬಹುಮಾನ ಕೊಡೋದಾಗಿ ಹೇಳಿದ್ದರು.

ಸದ್ಯ ಈಗ ಸಿದ್ಧಗಂಗಾ ಮಠದ ಬಂಡೆ ಪಾಳ್ಯದಲ್ಲಿ ಗಿಳಿ ಪತ್ತೆಯಾಗಿದೆ. ಶ್ರೀನಿವಾಸ್ ಎಂಬುವವರ ಮನೆಯ ಟೇರಸ್ ಮೇಲೆ ಗಿಳಿ ಕೂತಿತ್ತು. ಇದನ್ನು ಗಮನಿಸಿದ ಮನೆ ಯಜಮಾನ ಕೊನೆಗೂ ಗಿಳಿಯನ್ನು ಅದರ ಮಾಲೀಕರ ಕೈಗೆ ಒಪ್ಪಿಸಿದ್ದಾರೆ. ಇಂದು ಗಿಳಿ ಸಿಕ್ಕ ಖುಷಿಯಲ್ಲಿ 50 ಸಾವಿರ ಬದಲಿಗೆ 85 ಸಾವಿರ ಬಹುಮಾನ ಕೊಟ್ಟು ಅರ್ಜುನ್ ದಂಪತಿ ಖುಷಿ ಪಟ್ಟಿದ್ದಾರೆ. ತಮ್ಮ ಕುಟುಂಬದಲ್ಲಿ ಒಂದಾಗಿದ್ದ ಗಿಳಿ ಮತ್ತೆ ಮನೆಗೆ ಬಂದಿದ್ದಕ್ಕೆ ಮನೆಯಲ್ಲಿ ಸಂತೋಷ ಮನೆ ಮಾಡಿದೆ. ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Published On - 10:36 pm, Fri, 22 July 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್