AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ

ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ
ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮನ
TV9 Web
| Edited By: |

Updated on:Jan 29, 2022 | 7:42 PM

Share

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ (ಜನವರಿ 28) ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ, ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ. ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ.

9.40 ಲಕ್ಷ ರೂಪಾಯಿಗೆ ಕೆಂಪೇಗೌಡ ವಾಹನ ಖರೀದಿಸಿದ್ದಾರೆ. 2 ಲಕ್ಷ ಮುಂಗಡ ಹಣ ಪಾವತಿಸಿ ಕೆಂಪೇಗೌಡ ವಾಹನ ಖರೀದಿ ಮಾಡಿದ್ದಾರೆ. ಉಳಿದ ಹಣ ಲೋನ್ ಮೂಲಕ ಪಾವತಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿತ್ತು. ಬೊಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿತ್ತು. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.

ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ದಿಗ್ಗಜರು’ ಸಿನಿಮಾವನ್ನು ನೀವು ನೋಡಿರುತ್ತೀರಿ. ಆ ಸಿನಿಮಾದಲ್ಲಿನ ದೃಶ್ಯದಂಥ ಘಟನೆಯೊಂದು ನಿಜಜೀವನದಲ್ಲಿ ಸಂಭವಿಸಿತ್ತು. ತುಮಕೂರಿನ ರೈತರೊಬ್ಬರಿಗೆ ಅಂಥ ಅನುಭವವಾಗಿತ್ತು.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿತ್ತು. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದರು.

ಕಾರ್ ಶೋರೂಮ್​ನಲ್ಲಿ ಹೇಳಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ. ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಎಂದು ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ‘ನೀವು ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ’ ಎಂದು ಅವಮಾನ ಮಾಡಿದ್ದರು ಎಂದು ಹೇಳಲಾಗಿತ್ತು.

ನಾವು 25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ತುಮಕೂರಿನಲ್ಲಿ ಜೀಪ್ ಖರೀದಿಗೆ ಬಂದ ರೈತರಿಗೆ ಅವಮಾನ: ಗ್ರಾಹಕರ ಘನತೆ ನಮ್ಮ ಹೊಣೆ ಎಂದ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ

ಇದನ್ನೂ ಓದಿ: ತುಮಕೂರು: ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ

Published On - 6:18 pm, Sat, 29 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?