AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ

ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ.

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್; ಶುಭಕೋರಿದ ಆನಂದ್ ಮಹೀಂದ್ರ
ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮನ
TV9 Web
| Edited By: |

Updated on:Jan 29, 2022 | 7:42 PM

Share

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ (ಜನವರಿ 28) ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ, ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ. ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ.

9.40 ಲಕ್ಷ ರೂಪಾಯಿಗೆ ಕೆಂಪೇಗೌಡ ವಾಹನ ಖರೀದಿಸಿದ್ದಾರೆ. 2 ಲಕ್ಷ ಮುಂಗಡ ಹಣ ಪಾವತಿಸಿ ಕೆಂಪೇಗೌಡ ವಾಹನ ಖರೀದಿ ಮಾಡಿದ್ದಾರೆ. ಉಳಿದ ಹಣ ಲೋನ್ ಮೂಲಕ ಪಾವತಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿತ್ತು. ಬೊಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿತ್ತು. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.

ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ದಿಗ್ಗಜರು’ ಸಿನಿಮಾವನ್ನು ನೀವು ನೋಡಿರುತ್ತೀರಿ. ಆ ಸಿನಿಮಾದಲ್ಲಿನ ದೃಶ್ಯದಂಥ ಘಟನೆಯೊಂದು ನಿಜಜೀವನದಲ್ಲಿ ಸಂಭವಿಸಿತ್ತು. ತುಮಕೂರಿನ ರೈತರೊಬ್ಬರಿಗೆ ಅಂಥ ಅನುಭವವಾಗಿತ್ತು.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿತ್ತು. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದರು.

ಕಾರ್ ಶೋರೂಮ್​ನಲ್ಲಿ ಹೇಳಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ. ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಎಂದು ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ‘ನೀವು ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ’ ಎಂದು ಅವಮಾನ ಮಾಡಿದ್ದರು ಎಂದು ಹೇಳಲಾಗಿತ್ತು.

ನಾವು 25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ತುಮಕೂರಿನಲ್ಲಿ ಜೀಪ್ ಖರೀದಿಗೆ ಬಂದ ರೈತರಿಗೆ ಅವಮಾನ: ಗ್ರಾಹಕರ ಘನತೆ ನಮ್ಮ ಹೊಣೆ ಎಂದ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ

ಇದನ್ನೂ ಓದಿ: ತುಮಕೂರು: ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ

Published On - 6:18 pm, Sat, 29 January 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು