ತುಮಕೂರು: ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ, ನಾಲ್ವರಿಗೆ ಗಾಯ

ತುಮಕೂರು ತಾಲೂಕಿನ ವಸಂತನರಸಾಪುರ(Vasanthanarasapura) ಕೈಗಾರಿಕಾ ಪ್ರದೇಶದಲ್ಲಿನ ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ. ಕೆಲಸದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದ್ದು, ನಿಖರ ಕಾರಣ ತಿಳಿದುಬಂದಿಲ್ಲ, ಈ ಕುರಿತು ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ, ನಾಲ್ವರಿಗೆ ಗಾಯ
ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ,
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 05, 2024 | 9:14 PM

ತುಮಕೂರು, ಮಾ.05: ಇತ್ತೀಚೆಗೆ ಅಗ್ನಿ ಅವಘಡಗಳು ತುಸು ಹೆಚ್ಚುತ್ತಿದೆ. ಅದರಂತೆ ಇದೀಗ ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರಿಗೆ ಗಾಯವಾದ ಘಟನೆ ತುಮಕೂರು ತಾಲೂಕಿನ ವಸಂತನರಸಾಪುರ (Vasanthanarasapura) ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಜೋದಾನಿ ಪ್ರೈ. ಲಿಮಿಟೆಡ್ ಸಂಸ್ಥೆಗೆ ಸೇರಿದ ಪೇಪರ್ ಗೋದಾಮು  ಇದಾಗಿದ್ದು, ಕೆಲಸದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಪಿ ನಿವಾಸದ ಹೊರ ಭಾಗದಲ್ಲಿ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ

ಯಾದಗಿರಿ: ನಗರದ ಚಿತ್ತಾಪುರ ರಸ್ತೆಯಲ್ಲಿರುವ ಎಸ್​ಪಿ ನಿವಾಸದ ಹೊರ ಭಾಗದಲ್ಲಿ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಬೇಸಿಗೆಕಾಲ ಆಗಿರುವುದರಿಂದ ಸ್ವಲ್ಪ ಬೆಂಕಿ ತಗುಲಿದರೂ ದೊಡ್ಡ ಮಟ್ಟದಲ್ಲಿ ಅದು ಹರಡುತ್ತದೆ. ಇದೀಗ ಒಣಗಿರುವ ಹುಲ್ಲಿಗೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ.  ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಕಾರದೊಂದಿಗೆ ಬೆಂಕಿ ನಂದಿಸಲಾಗಿದೆ. ಈ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ

ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಮಂಡ್ಯ: ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರವೇಶದಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಲ್ಟ್​ ಕಾರ್ಖಾನೆಗೆ ಬೆಂಕಿ ಬಿದ್ದಿತ್ತು. ಶಾರ್ಟ್ ಸರ್ಕ್ಯೂಟ್​​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿತ್ತು. ಬೆಂಕಿ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಸುಟ್ಟು ಕರಕಲಾಗಿದೆ. ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿರುವ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿತ್ತು. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದರು. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 pm, Tue, 5 March 24