AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕರಿಗೆ ಹಾಲಿ ಶಾಸಕರಿಂದ ಕೊಲೆ ಸ್ಕೆಚ್ ಆರೋಪ, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು

ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡರಿಗೆ ಕೊಲೆ ಯತ್ನ ಆರೋಪ ಸಂಬಂಧ ಶಾಸಕ ಗೌರಿಶಂಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಶಾಸಕರಿಗೆ ಹಾಲಿ ಶಾಸಕರಿಂದ ಕೊಲೆ ಸ್ಕೆಚ್ ಆರೋಪ, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು
ಮಾಜಿ ಶಾಸಕರಿಗೆ ಶಾಸಕರಿಂದ ಕೊಲೆ ಸ್ಕೆಚ್, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು
TV9 Web
| Edited By: Rakesh Nayak Manchi|

Updated on:Nov 25, 2022 | 8:47 AM

Share

ತುಮಕೂರು: ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಅವರ ಕೊಲೆ ಯತ್ನ ಆರೋಪ ಸಂಬಂಧ ಜೆಡಿಎಸ್ ಶಾಸಕ ಗೌರಿಶಂಕರ್ (MLA Gowri Shankar) ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು (ಅಟ್ಟಿಕಾ ಬಾಬು) ವಿರುದ್ಧ ದೂರು ದಾಖಲಾಗಿದೆ. ತಮ್ಮ ವಿರುದ್ಧದ ಕೊಲೆ ಸಂಚಿನ ಬಗ್ಗೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಸುರೇಶ್ ಗೌಡ ಅವರು ದೂರು ನೀಡಿದ್ದು, ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಅನ್ವಯ ಪೊಲೀಸರು, IPC 1860 ( 120B, 506, 109, 34) ಅಡಿ‌ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು NIAಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಈ ಮೂವರು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಜೀವಬೆದರಿಕೆ‌ ಇದೆ ಎಂದು ದೂರು ನೀಡಿದ್ದಾರೆ. ಅಲ್ಲದೆ, ಕೊಲೆ ಮಾಡಿದರೆ 5 ಕೋಟಿ ರೂಪಾಯಿ ರೌಡಿಯೊಬ್ಬನಿಗೆ ನೀಡುವುದಾಗಿ ಸಿದ್ಧತೆ ನಡೆಸಿದ್ದಾರೆ. ಕಾರಿನಲ್ಲಿ ಚಲಿಸುವಾಗ ಅಡ್ಡಗಟ್ಟಿ ಅಥವಾ ಬಾರಿ ವಾಹನ ಮೂಲಕ ಕೊಲೆ ಮಾಡಿ ಅಪಘಾತ ರೀತಿಯಲ್ಲಿ ಬಿಂಬಿಸಲು ಸಿದ್ಧತೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Karnataka Assembly Poll ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಸೂಚನೆ ಕೊಟ್ಟ ಡಿಕೆ ಶಿವಕುಮಾರ್

ತುಮಕೂರಿನ ಜೆಎಮ್​ಎಫ್​ಸಿ ನ್ಯಾಯಾಲಯದ ಅನುಮತಿ ಪಡೆದ ಸುರೇಶ್ ಗೌಡ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಕೊಲೆ‌ ಮಾಡಲು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್, ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ಅವರು ರೌಡಿಶಿಟರ್ ಮೂಲಕ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಶಾಸಕ ಗೌರಿಶಂಕರ್ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ಅವರು ನೀಡಿದ ದೂರಿನ ಪ್ರತಿ

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Fri, 25 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್