AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕರಿಗೆ ಹಾಲಿ ಶಾಸಕರಿಂದ ಕೊಲೆ ಸ್ಕೆಚ್ ಆರೋಪ, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು

ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡರಿಗೆ ಕೊಲೆ ಯತ್ನ ಆರೋಪ ಸಂಬಂಧ ಶಾಸಕ ಗೌರಿಶಂಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಶಾಸಕರಿಗೆ ಹಾಲಿ ಶಾಸಕರಿಂದ ಕೊಲೆ ಸ್ಕೆಚ್ ಆರೋಪ, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು
ಮಾಜಿ ಶಾಸಕರಿಗೆ ಶಾಸಕರಿಂದ ಕೊಲೆ ಸ್ಕೆಚ್, ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು
TV9 Web
| Edited By: |

Updated on:Nov 25, 2022 | 8:47 AM

Share

ತುಮಕೂರು: ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಅವರ ಕೊಲೆ ಯತ್ನ ಆರೋಪ ಸಂಬಂಧ ಜೆಡಿಎಸ್ ಶಾಸಕ ಗೌರಿಶಂಕರ್ (MLA Gowri Shankar) ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು (ಅಟ್ಟಿಕಾ ಬಾಬು) ವಿರುದ್ಧ ದೂರು ದಾಖಲಾಗಿದೆ. ತಮ್ಮ ವಿರುದ್ಧದ ಕೊಲೆ ಸಂಚಿನ ಬಗ್ಗೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಸುರೇಶ್ ಗೌಡ ಅವರು ದೂರು ನೀಡಿದ್ದು, ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಅನ್ವಯ ಪೊಲೀಸರು, IPC 1860 ( 120B, 506, 109, 34) ಅಡಿ‌ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು NIAಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಈ ಮೂವರು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಜೀವಬೆದರಿಕೆ‌ ಇದೆ ಎಂದು ದೂರು ನೀಡಿದ್ದಾರೆ. ಅಲ್ಲದೆ, ಕೊಲೆ ಮಾಡಿದರೆ 5 ಕೋಟಿ ರೂಪಾಯಿ ರೌಡಿಯೊಬ್ಬನಿಗೆ ನೀಡುವುದಾಗಿ ಸಿದ್ಧತೆ ನಡೆಸಿದ್ದಾರೆ. ಕಾರಿನಲ್ಲಿ ಚಲಿಸುವಾಗ ಅಡ್ಡಗಟ್ಟಿ ಅಥವಾ ಬಾರಿ ವಾಹನ ಮೂಲಕ ಕೊಲೆ ಮಾಡಿ ಅಪಘಾತ ರೀತಿಯಲ್ಲಿ ಬಿಂಬಿಸಲು ಸಿದ್ಧತೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Karnataka Assembly Poll ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಸೂಚನೆ ಕೊಟ್ಟ ಡಿಕೆ ಶಿವಕುಮಾರ್

ತುಮಕೂರಿನ ಜೆಎಮ್​ಎಫ್​ಸಿ ನ್ಯಾಯಾಲಯದ ಅನುಮತಿ ಪಡೆದ ಸುರೇಶ್ ಗೌಡ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಕೊಲೆ‌ ಮಾಡಲು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್, ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ಅವರು ರೌಡಿಶಿಟರ್ ಮೂಲಕ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಶಾಸಕ ಗೌರಿಶಂಕರ್ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ಅವರು ನೀಡಿದ ದೂರಿನ ಪ್ರತಿ

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Fri, 25 November 22

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್