AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ದುಸ್ಥಿತಿ; ಜೀವ ಭಯದಲ್ಲೇ ಪಾಠ ಕೇಳುವ ಮಕ್ಕಳು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬ್ಯಾಡಗೆರೆ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಬಿರುಕು ಬಿಟ್ಟಿದೆ. ಮಕ್ಕಳಿಗೆ ಕೊಠಡಿ ಇಲ್ಲ. ಸರ್ಕಾರಿ ಶಾಲೆಯ ಆವರಣದಲ್ಲೇ ವಿದ್ಯುತ್ ಲೈನ್ (ಗ್ರೌಂಡಿಗ್ ವೈರ್) ಅಳವಡಿಸಿದ್ದು ಶಾಲಾ ಮಕ್ಕಳು ಅದನ್ನ ತಾಗಿಸಿಕೊಂಡು ಓಡಾಡುತ್ತಾರೆ. ಹಾಘೂ ಶಾಲೆ ಎದುರಲ್ಲೆ ಬೃಹತ್ ಅರಳಿ ಮರ ಒಣಗಿದ್ದು ಬೀಳುವ ಆತಂಕವಿದೆ.

ತುಮಕೂರಿನ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ದುಸ್ಥಿತಿ; ಜೀವ ಭಯದಲ್ಲೇ ಪಾಠ ಕೇಳುವ ಮಕ್ಕಳು
ಬ್ಯಾಡಗೆರೆ ಗ್ರಾಮದ ಅಂಗನವಾಡಿ ಕೇಂದ್ರ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Dec 19, 2023 | 9:30 AM

Share

ತುಮಕೂರು, ಡಿ.19: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳ (Anganwadi) ದುಸ್ಥಿತಿ ಹೇಳತೀರದ್ದಾಗಿದೆ. ಕೊಪ್ಪಳದ ಅಂಗನವಾಡಿಯೊಂದರಲ್ಲಿ ಕಟ್ಟಡದ ದುಸ್ಥಿತಿಯಿಂದಾಗಿ ಜೀವ ಭಯದಲ್ಲಿ ಮಕ್ಕಳನ್ನು ಮೈದಾನದಲ್ಲಿ ಕೂರಿಸಿ ಪಾಠ ಮಾಡುವಂತ ಸ್ಥಿತಿ ಇದೆ. ಇನ್ನು ಮತ್ತೊಂದೆಡೆ ತುಮಕೂರಿನಲ್ಲಿ (Tumkur) ಅಂಗನವಾಡಿ ಇಲ್ಲದೆ ಅಕ್ಷರ ದಾಸೋಹ ಕೊಠಡಿಯಲ್ಲಿ ಮಕ್ಕಳಿಗೆ ಪಾಠ ಮಾಡುವಂತಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬ್ಯಾಡಗೆರೆ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಬಿರುಕು ಬಿಟ್ಟಿದ್ದು ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಹೀಗಾಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರ ದಾಸೋಹದ ಚಿಕ್ಕ ಕೊಠಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

15 ಜನ ಮಕ್ಕಳಿರುವ ಅಂಗನವಾಡಿ ಕೇಂದ್ರ ದುಸ್ಥಿತಿಗೆ ಜಾರಿದೆ. ಈ‌ ಮಕ್ಕಳಿಗೆ ಕೂರಲು ಸೂಕ್ತವಾಗಿ ಅಂಗನವಾಡಿ ಕಟ್ಟಡ ಇಲ್ಲ, ಸುಮಾರು 30 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಹಳೆ ಅಂಗನವಾಡಿ ಕೇಂದ್ರ ಈಗ ಹಾಳಾಗಿದೆ. ಇಂದೋ ನಾಳೆ ಬೀಳುವ ಪರಿಸ್ಥಿತಿಯಲ್ಲಿದೆ. ಬೀಳೊ ಪರಿಸ್ಥಿತಿ ಇರುವ ಕಾರಣ ಪಕ್ಕದಲ್ಲೆ ಇರುವ ಶಾಲೆಯ ಅಕ್ಷರ ದಾಸೋಹದ ಚಿಕ್ಕ ಕೊಠಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಲಾಲನೆ ಪಾಲನೆ ಮಾಡಲಾಗುತ್ತಿದೆ. ಒಂದು ಚಿಕ್ಕ ಕೊಠಡಿಯಲ್ಲಿ ಮಕ್ಕಳು ಕೂತು ಪಾಠ ಕೇಳುತ್ತಿದ್ದು, ಪಕ್ಕದಲ್ಲಿ ಗ್ಯಾಸ್​ನಲ್ಲಿ ಅಡುಗೆ ಮಾಡಲಾಗುತ್ತದೆ.

ಈ ಮಕ್ಕಳಿಗೆ ಟೀಕರ್ ಇಲ್ಲ

ಬೀಳುವ ಕೊಠಡಿಯಲ್ಲಿದ್ದ ಮಕ್ಕಳನ್ನ ದಾಸೋಹದ ಕೊಠಡಿಯಲ್ಲಿ ಕೂರಿಸಲಾಗುತ್ತಿದ್ದು ಅದು ಕೂಡ ಸಮರ್ಪಕವಾಗಿ ಇಲ್ಲ ಅನ್ನೋ ಆರೋಪ ಗ್ರಾಮಸ್ಥರು ಮಾಡ್ತಿದ್ದಾರೆ. ಇನ್ನೂ ಈ ಮಕ್ಕಳಿಗೂ ಕೂಡ ಅಂಗನವಾಡಿ ಕಾರ್ಯಕರ್ತೆ ಇಲ್ಲ. ಪಕ್ಕದ ಗ್ರಾಮದ ಅಂಗನವಾಡಿ ‌ಕಾರ್ಯಕರ್ತೆ ಮೂರು ದಿನಗಳ ಕಾಲ ಡೆಪ್ಯೋಟೆಷನ್ ಬಂದು ಕಾರ್ಯ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಅಂಗನವಾಡಿ ಸಹಾಯಕಿ‌ ಮಕ್ಕಳನ್ನ ನೋಡಿಕೊಳ್ಳಬೇಕಿದೆ. ಇಷ್ಟೇ ಅಲ್ಲದೆ ಅಂಗನವಾಡಿ ಜೊತೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಕೂಡ ದುಸ್ಥಿತಿಯಲ್ಲಿದೆ. ಕಟ್ಟಡ ತೀವ್ರ ಹಳೆಯದಾಗಿದ್ದು ಸಣ್ಣ ಪುಟ್ಟ ತೇಪೆ ಹಚ್ಚಿ ಬಣ್ಣ ಹೊಡೆಯಲಾಗಿದೆ. ಶಾಲೆಯಾದ್ರೂ ಸರಿಯಾಗಿದೆ ಅಂದ್ರೆ ಅದು ಸರಿಯಿಲ್ಲ, ಅತ್ತ ಅಂಗನವಾಡಿ ಕೂಡ ಸಮರ್ಪಕವಾಗಿ ಇಲ್ಲ.

ಇದನ್ನೂ ಓದಿ: ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ದೇವಾಲಯ, ಶೆಡ್ ನಿರ್ಮಾಣಕ್ಕೆ ಹಣ ವಸೂಲಿ

ಶಾಲೆಯ ಆವರಣದಲ್ಲಿ ವಿದ್ಯುತ್ ಲೈನ್

ಇಲ್ಲಿನ ಶಾಲೆ ಮಕ್ಕಳು ತೀವ್ರ ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಶಾಲೆಯ ಆವರಣದಲ್ಲಿ ವಿದ್ಯುತ್ ಲೈನ್ (ಗ್ರೌಂಡಿಗ್ ವೈರ್) ಅಳವಡಿಸಿದ್ದು ಶಾಲಾ ಮಕ್ಕಳು ಅದನ್ನ ತಾಗಿಸಿಕೊಂಡು ಓಡಾಡುತ್ತಾರೆ. ಅಲ್ಲದೇ ಶಾಲೆಯ ಕಾಂಪೌಂಡ್ ಗೆ ಹೊಂದಿಕೊಂಡಂತೆ ವಿದ್ಯುತ್ ಕಂಬ ಅಳವಡಿಸಿ ಗ್ರೌಂಡ್ ವೈರ್ ಶಾಲೆಯ ಆವರಣದಲ್ಲಿ ಬಿಗಿಸಲಾಗಿದೆ. ಶಾಲೆ ಎದುರಲ್ಲೆ ಬೃಹತ್ ಅರಳಿ ಮರ ಒಣಗಿದ್ದು ಬೀಳುವ ಆತಂಕವಿದೆ. ಇದು ಕೂಡ ತೆಗೆಸಲು ಬೆಸ್ಕಾಂ ಅಧಿಕಾರಿಗಳಿಗೆ ಸಾಕಷ್ಟು ಬಾರಿ‌ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಒಟ್ಟಾರೆ ಈ ಬ್ಯಾಡಗೆರೆ ಗ್ರಾಮದಲ್ಲಿ ಅಂಗನವಾಡಿ, ಸರ್ಕಾರಿ ಶಾಲೆ ದುಸ್ಥಿತಿಗೆ ಜಾರಿದ್ದು ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಶಿಕ್ಷಣ ಇಲಾಖೆ ಹಾಗೂ ಬೆಸ್ಕಾಂ ಇಲಾಖೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ಕಂಡು ಬಂದಿದೆ. ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಅನಾಹುತವನ್ನು ತಪ್ಪಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ