AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬದುಕಿರುವ ಗ್ರಾ.ಪಂ. ಸದಸ್ಯ ಸತ್ತಿದ್ದಾನೆಂದು ವೋಟರ್ ಐಡಿ ರದ್ದು; ತಹಶೀಲ್ದಾರ್​ಗೆ ದೂರು ಸಲ್ಲಿಕೆ!

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮ ಪಂಚಾಯತ್ ಸದಸ್ಯ ಟಿ. ಶಿವಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಗೌರಿಶಂಕರ್​ ಜೊತೆ ಆಗಮಿಸಿ ತಹಶೀಲ್ದಾರ್​ಗೆ ದೂರು ಸಲ್ಲಿಕೆ ಮಾಡಲಾಗಿದೆ. ತುಮಕೂರು ತಹಶೀಲ್ದಾರ್​ಗೆ ಗ್ರಾಮ ಪಂಚಾಯತ್ ಸದಸ್ಯ ಟಿ.ಶಿವಪ್ರಸಾದ್ ದೂರು ನೀಡಿದ್ದಾರೆ.

ತುಮಕೂರು: ಬದುಕಿರುವ ಗ್ರಾ.ಪಂ. ಸದಸ್ಯ ಸತ್ತಿದ್ದಾನೆಂದು ವೋಟರ್ ಐಡಿ ರದ್ದು; ತಹಶೀಲ್ದಾರ್​ಗೆ ದೂರು ಸಲ್ಲಿಕೆ!
TV9 Web
| Updated By: ganapathi bhat|

Updated on: Feb 01, 2022 | 7:24 PM

Share

ತುಮಕೂರು: ಬದುಕಿರುವ ಗ್ರಾಮ ಪಂಚಾಯತ್ ಸದಸ್ಯ ಸತ್ತಿದ್ದಾನೆಂದು ವೋಟರ್​ ಐಡಿ ರದ್ದು ಮಾಡಿರುವ ಘಟನೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಳೂರು ಗ್ರಾಮ ಪಂಚಾಯತ್​ನಲ್ಲಿ ನಡೆದಿದೆ. ಇಲ್ಲಿನ ಗ್ರಾಮ ಪಂಚಾಯತ್ ಸದಸ್ಯ ಟಿ. ಶಿವಪ್ರಸಾದ್ ವೋಟರ್ ಐಡಿ ರದ್ದುಮಾಡಲಾಗಿದೆ. ವ್ಯಕ್ತಿ ಸತ್ತಿದ್ದಾನೆಂದು ಮತದಾರರ ಗುರುತಿನ ಚೀಟಿಯನ್ನು ತಾಲೂಕು ಅಧಿಕಾರಿಗಳು ರದ್ದು ಮಾಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮ ಪಂಚಾಯತ್ ಸದಸ್ಯ ಟಿ. ಶಿವಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಗೌರಿಶಂಕರ್​ ಜೊತೆ ಆಗಮಿಸಿ ತಹಶೀಲ್ದಾರ್​ಗೆ ದೂರು ಸಲ್ಲಿಕೆ ಮಾಡಲಾಗಿದೆ. ತುಮಕೂರು ತಹಶೀಲ್ದಾರ್​ಗೆ ಗ್ರಾಮ ಪಂಚಾಯತ್ ಸದಸ್ಯ ಟಿ.ಶಿವಪ್ರಸಾದ್ ದೂರು ನೀಡಿದ್ದಾರೆ.

ಕೋಲಾರ: ಜೀವಂತ ರೈತನಿಗೆ ಮರಣ ಪ್ರಮಾಣಪತ್ರ!

ವ್ಯಕ್ತಿ ಸತ್ತ ಮೇಲೆ ನೀಡುವ ಮರಣ ಪ್ರಮಾಣಪತ್ರ ಅಧಿಕಾರಿಗಳ ಎಡವಟ್ಟಿನಿಂದಾಗಿ ವ್ಯಕ್ತಿಯೊಬ್ಬನಿಗೆ ಜೀವಂತ ಇದ್ದಾಗಲೇ ಸಿಕ್ಕಿದ ಘಟನೆ ನಡೆದಿತ್ತು. ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕು ಕಚೇರಿಯಲ್ಲಿ ನಡೆಯಬಾರದ್ದೊಂದು ಘಟನೆ ನಡೆದು ಹೋಗಿತ್ತು. ಇದರಲ್ಲಿ ಅಧಿಕಾರಿಗಳ ಎಡವಟ್ಟು ಅನ್ನೋದು ಒಂದು ಅಂಶವಾದರೆ, ತಾಲ್ಲೂಕು ಕಚೇರಿಯಲ್ಲಿ ಹಣ ಕೊಟ್ಟರೆ ಯಾರನ್ನು ಬೇಕಾದರೂ ಸಾಯಿಸಬಹುದು, ಯಾರನ್ನು ಬೇಕಾದ್ರು ಬದುಕಿಸಬಹುದು ಅನ್ನೋದು ಪ್ರಶ್ನೆಯಾಗಿತ್ತು. ಮುಳಬಾಗಿಲು ತಾಲೂಕಿನ ಎಂ. ಹೊಸಹಳ್ಳಿ ಗ್ರಾಮದ ರೈತ ಶಿವರಾಜ್ ಇನ್ನೂ ಜೀವಂತವಾಗಿ ಇರುವಾಗಲೇ ಅವರನ್ನು ದಾಖಲೆಗಳಲ್ಲಿ ಸಾಯಿಸಲಾಗಿತ್ತು.

ಎಂ. ಹೊಸಹಳ್ಳಿ ಗ್ರಾಮದ ರೈತ ಶಿವರಾಜ್​ ಎಂಬುವರು ತಮಗಿರುವ ಒಂದಷ್ಟು ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಅದರ ಜೊತೆಗೆ ಸಣ್ಣದೊಂದು ಅಂಗಡಿ ಹಾಕಿಕೊಂಡು ಜೀವನ ಮಾಡಿಕೊಂಡು ಬದುಕುತ್ತಿದ್ದರು. ಹೀಗಿರುವಾಗಲೇ ಅವರಿಗೆ ಕಳೆದ 2021 ನೇ ಜುಲೈ 7 ರಂದು ರೈತ ಶಿವರಾಜ್​ ಮರಣ ಹೊಂದಿದ್ದಾರೆಂದು ಮರಣ ಪ್ರಮಾಣ ಪತ್ರ ನೀಡಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದರು.

ಅದು ಶಿವರಾಜ್​ ಅವರಿಗೆ ಗೊತ್ತಾಗಿಲ್ಲ, ಶಿವರಾಜ್ ಕುಟುಂಬ ಎಂ.ಹೊಸಹಳ್ಳಿ ಗ್ರಾಮದ ಹೊರಗೆ ಸಣ್ಣದೊಂದು ಚಿಲ್ಲರೆ ಅಂಗಡಿ‌ ಹಾಕಿಕೊಂಡು‌ ಜೀವನ ಮಾಡುತ್ತಿದ್ದರು. ಜೊತೆಗೆ ಗ್ರಾಮದ ಯಾರ ವಿಷಯಕ್ಕೂ ಹೋಗದೆ ತಾವಾಯಿತು ತಮ್ಮ ಬದುಕುಯಾಯಿತೆಂದು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. ಹೀಗಿರುವಾಗಲೇ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ತಿಂಗಳಿನಂತೆ ಪಡಿತರ ಆಹಾರ ಪಡೆಯಲು ಹೋದ ವೇಳೆ ರೈತ ಶಿವರಾಜ್​ಗೆ ಆಘಾತ ಕಾರಿ ಅಂಶ ಹೊರಬಿದ್ದಿತ್ತು. ಶಿವರಾಜ್ ಮೃತರಾಗಿದ್ದು ಅವರನ್ನು ಪಡಿತರ ಚೀಟಿಯಿಂದ‌ ಹೆಸರನ್ನು ಕೈ‌ ಬಿಡಲಾಗಿದೆ ಅನ್ನೋ ವಿಷಯ ಗೊತ್ತಾಗಿತ್ತು. ಇದರಿಂದ‌ ಈಡೀ ಕುಟುಂಬ‌ ಅಘಾತಕ್ಕೊಳಗಾಗಿದ್ದರು.

ಇದನ್ನೂ ಓದಿ: ಕೋಲಾರ: ಜೀವಂತ ರೈತನಿಗೆ ಮರಣ ಪ್ರಮಾಣಪತ್ರ! ಇದು ಅಧಿಕಾರಿಗಳ ಎಡವಟ್ಟೋ ದುರುದ್ದೇಶದ ಕೃತ್ಯವೋ?

ಇದನ್ನೂ ಓದಿ: ಚಾಮರಾಜನಗರ: ಜಾತಿ ಪ್ರಮಾಣಪತ್ರ ನೀಡುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲ್ಲ; ಭೋವಿ ಜನಾಂಗದಿಂದ ಸಿಎಂಗೆ ಪತ್ರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ