AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ ನಿಧನ

ಗುಪ್ತವಾರ್ತೆ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 1994ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಇನ್ನು ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಮೂಲದವರು.

ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ ನಿಧನ
ಡಿವೈಎಸ್​ಪಿ ಶಿವಕುಮಾರ್
TV9 Web
| Edited By: |

Updated on:Apr 30, 2022 | 11:43 AM

Share

ತುಮಕೂರು: ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ (DYSP Shivakumar) ತಡರಾತ್ರಿ ನಿಧನ (Death) ಹೊಂದಿದ್ದಾರೆ. ಜಿಲ್ಲೆಯ ನಿವಾಸದಲ್ಲಿ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಎಸ್​ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್​ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಗುಪ್ತವಾರ್ತೆ ವಿಭಾಗದಲ್ಲಿ ಡಿವೈಎಸ್​ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 1994ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಇನ್ನು ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಮೂಲದವರು. ಒಂದೂವರೆ ವರ್ಷದಿಂದ ತುಮಕೂರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ. ಇವರಿಗೆ ಮೂರು ಜನ ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗ. ಹಿರಿಯ ಮಗಳು ಇಂಜಿನಿಯರಿಂಗ್ ಪದವಿ ಮುಗಿಸಿದ್ದು, ಎರಡನೇ ಮಗಳು ಕವನ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿರುತ್ತಾರೆ. ಮಗ ಪ್ರತೀಕ್ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರಾದ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ.

ಅಕ್ರಮ ಮಣ್ಣು ಗಣಿಗಾರಿಕೆಗೆ ಇಬ್ಬರು ಯುವಕರು ಬಲಿ: ಗದಗ: ಅಕ್ರಮ ಮಣ್ಣು ಗಣಿಗಾರಿಕೆಗೆ ಇಬ್ಬರು ಯುವಕರು ಬಲಿಯಾಗಿದ್ದಾರೆ. ಈ ಘಟನೆ  ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ. ಮಣ್ಣು ತೆಗೆದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ. 20 ಗಂಟೆ ಕಳೆದರೂ ಶವಗಳು ಸಿಗಲಿಲ್ಲ. ಹೊಂಡದಲ್ಲಿ ಇಳಿದು ಶವ ಶೋಧಕ್ಕೆ ಅಗ್ನಿಶಾಮಕ ಸಿಬ್ಬಂದಿ ಸಿಬ್ಬಂದಿ ಹಿಂದೇಟು ಹಾಕುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯ ಬೇಜವಾಬ್ದಾರಿತನಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಮಣ್ಣು ಗಣಿಗಾರಿಕೆಗೆ ಅಧಿಕಾರಿಗಳು ಕಡಿವಾಣ ಹಾಕದಕ್ಕೆ ದುರಂತ ನಡೆದಿದೆ ಅಂತ ಕಿಡಿಕಾರಿದ್ದಾರೆ.

ಇದನ್ನೂ ಓದಿ

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

Petrol Price Today: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

Published On - 9:12 am, Sat, 30 April 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?