AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ ನಿಧನ

ಗುಪ್ತವಾರ್ತೆ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 1994ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಇನ್ನು ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಮೂಲದವರು.

ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ ನಿಧನ
ಡಿವೈಎಸ್​ಪಿ ಶಿವಕುಮಾರ್
TV9 Web
| Edited By: sandhya thejappa|

Updated on:Apr 30, 2022 | 11:43 AM

Share

ತುಮಕೂರು: ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ (DYSP Shivakumar) ತಡರಾತ್ರಿ ನಿಧನ (Death) ಹೊಂದಿದ್ದಾರೆ. ಜಿಲ್ಲೆಯ ನಿವಾಸದಲ್ಲಿ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಎಸ್​ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್​ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಗುಪ್ತವಾರ್ತೆ ವಿಭಾಗದಲ್ಲಿ ಡಿವೈಎಸ್​ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 1994ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಇನ್ನು ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಮೂಲದವರು. ಒಂದೂವರೆ ವರ್ಷದಿಂದ ತುಮಕೂರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ. ಇವರಿಗೆ ಮೂರು ಜನ ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗ. ಹಿರಿಯ ಮಗಳು ಇಂಜಿನಿಯರಿಂಗ್ ಪದವಿ ಮುಗಿಸಿದ್ದು, ಎರಡನೇ ಮಗಳು ಕವನ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿರುತ್ತಾರೆ. ಮಗ ಪ್ರತೀಕ್ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರಾದ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ.

ಅಕ್ರಮ ಮಣ್ಣು ಗಣಿಗಾರಿಕೆಗೆ ಇಬ್ಬರು ಯುವಕರು ಬಲಿ: ಗದಗ: ಅಕ್ರಮ ಮಣ್ಣು ಗಣಿಗಾರಿಕೆಗೆ ಇಬ್ಬರು ಯುವಕರು ಬಲಿಯಾಗಿದ್ದಾರೆ. ಈ ಘಟನೆ  ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ. ಮಣ್ಣು ತೆಗೆದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ. 20 ಗಂಟೆ ಕಳೆದರೂ ಶವಗಳು ಸಿಗಲಿಲ್ಲ. ಹೊಂಡದಲ್ಲಿ ಇಳಿದು ಶವ ಶೋಧಕ್ಕೆ ಅಗ್ನಿಶಾಮಕ ಸಿಬ್ಬಂದಿ ಸಿಬ್ಬಂದಿ ಹಿಂದೇಟು ಹಾಕುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯ ಬೇಜವಾಬ್ದಾರಿತನಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಮಣ್ಣು ಗಣಿಗಾರಿಕೆಗೆ ಅಧಿಕಾರಿಗಳು ಕಡಿವಾಣ ಹಾಕದಕ್ಕೆ ದುರಂತ ನಡೆದಿದೆ ಅಂತ ಕಿಡಿಕಾರಿದ್ದಾರೆ.

ಇದನ್ನೂ ಓದಿ

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

Petrol Price Today: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

Published On - 9:12 am, Sat, 30 April 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?