AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯ ಟೆಕ್ಕಿ ಸುಮಾ ಅವರ ಮೃತದೇಹ ಪತ್ತೆಯಾಗಿದೆ. ಗುರುವಾರ ಸಂಜೆ ಕೆರೆ ಬಳಿ ಅವರ ವಸ್ತುಗಳು ಪತ್ತೆಯಾದ ನಂತರ ಶೋಧ ಕಾರ್ಯ ನಡೆಸಲಾಯಿತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ಟೆಕ್ಕಿ ಸುಮಾ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Feb 28, 2025 | 2:46 PM

Share

ತುಮಕೂರು, ಫೆಬ್ರವರಿ 28: ಕುಣಿಗಲ್ (Kunigal) ಬಳಿಯ ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಣಿಗಲ್ ತಾಲೂಕಿನ ಸೊಬಗಾನಹಳ್ಳಿ ನಿವಾಸಿ ಸುಮಾ ಮೃತ ದುರ್ದೈವಿ. ಟೆಕ್ಕಿ ಸುಮಾ ಅವರು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಟೆಕ್ಕಿ ಸುಮಾ ಗುರುವಾರ (ಫೆ.27) ಬೆಂಗಳೂರಿನಿಂದ‌ ಗ್ರಾಮಕ್ಕೆ ವಾಪಸ್ ಬಂದಿದ್ದರು. ಸಂಜೆ ಹೊತ್ತಿಗೆ ಕೆರೆ ಬಳಿ ಸುಮಾರ ಬ್ಯಾಗ್​, ಮೊಬೈಲ್​, ಬಸ್​ ಟಿಕೆಟ್, ಚಪ್ಪಲಿ ಸಿಕ್ಕಿವೆ.

ಇದರಿಂದ ಅನುಮಾನಗೊಂಡ ಸ್ಥಳೀಯರು ಸುಮಾರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಸುಮಾರ ಕುಟುಂಬಸ್ಥರು, ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಗುರುವಾರ ಸಂಜೆಯಿಂದ ಸುಮಾಗಾಗಿ ಕೆರೆಯಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಡಿದ್ದಾರೆ. ಆದರೆ, ಸುಮಾ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
Image
ಬಾಡಿಗೆತಾಯಿಯಿಂದ ಮಗು ಕೊಡಿಸುತ್ತೇನೆಂದು ಕದ್ದ ಶಿಶು ನೀಡಿದ ವೈದ್ಯೆಗೆ ಜೈಲು
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
Image
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
Image
ಕಾಮದ ತೀಟೆಗೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಅಗ್ನಿಶಾಮಕ ಸಿಬ್ಬಂದಿ ಶುಕ್ರವಾರ ಮತ್ತೆ ಶೋಧಕಾರ್ಯಕ್ಕೆ ಇಳಿದರು. ಅಗ್ನಿಶಾಮಕದಳ ಸಿಬ್ಬಂದಿಯೊಂದಿಗೆ ಶಾಸಕ ರಂಗನಾಥ್ ಸಾಥ್​ ನೀಡಿದ್ದು, ಖುದ್ದು ಶೋಧಕಾರ್ಯಕ್ಕೆ ಕೆರೆಗೆ ಇಳಿದರು. ನಿರಂತರ ಶೋಧಕಾರ್ಯ ಬಳಿಕ ಟೆಕ್ಕಿ ಸುಮಾರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 28 February 25

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ