AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯ ಟೆಕ್ಕಿ ಸುಮಾ ಅವರ ಮೃತದೇಹ ಪತ್ತೆಯಾಗಿದೆ. ಗುರುವಾರ ಸಂಜೆ ಕೆರೆ ಬಳಿ ಅವರ ವಸ್ತುಗಳು ಪತ್ತೆಯಾದ ನಂತರ ಶೋಧ ಕಾರ್ಯ ನಡೆಸಲಾಯಿತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ಟೆಕ್ಕಿ ಸುಮಾ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Feb 28, 2025 | 2:46 PM

Share

ತುಮಕೂರು, ಫೆಬ್ರವರಿ 28: ಕುಣಿಗಲ್ (Kunigal) ಬಳಿಯ ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕುಣಿಗಲ್ ತಾಲೂಕಿನ ಸೊಬಗಾನಹಳ್ಳಿ ನಿವಾಸಿ ಸುಮಾ ಮೃತ ದುರ್ದೈವಿ. ಟೆಕ್ಕಿ ಸುಮಾ ಅವರು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಟೆಕ್ಕಿ ಸುಮಾ ಗುರುವಾರ (ಫೆ.27) ಬೆಂಗಳೂರಿನಿಂದ‌ ಗ್ರಾಮಕ್ಕೆ ವಾಪಸ್ ಬಂದಿದ್ದರು. ಸಂಜೆ ಹೊತ್ತಿಗೆ ಕೆರೆ ಬಳಿ ಸುಮಾರ ಬ್ಯಾಗ್​, ಮೊಬೈಲ್​, ಬಸ್​ ಟಿಕೆಟ್, ಚಪ್ಪಲಿ ಸಿಕ್ಕಿವೆ.

ಇದರಿಂದ ಅನುಮಾನಗೊಂಡ ಸ್ಥಳೀಯರು ಸುಮಾರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಸುಮಾರ ಕುಟುಂಬಸ್ಥರು, ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಗುರುವಾರ ಸಂಜೆಯಿಂದ ಸುಮಾಗಾಗಿ ಕೆರೆಯಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಡಿದ್ದಾರೆ. ಆದರೆ, ಸುಮಾ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
Image
ಬಾಡಿಗೆತಾಯಿಯಿಂದ ಮಗು ಕೊಡಿಸುತ್ತೇನೆಂದು ಕದ್ದ ಶಿಶು ನೀಡಿದ ವೈದ್ಯೆಗೆ ಜೈಲು
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
Image
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
Image
ಕಾಮದ ತೀಟೆಗೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಅಗ್ನಿಶಾಮಕ ಸಿಬ್ಬಂದಿ ಶುಕ್ರವಾರ ಮತ್ತೆ ಶೋಧಕಾರ್ಯಕ್ಕೆ ಇಳಿದರು. ಅಗ್ನಿಶಾಮಕದಳ ಸಿಬ್ಬಂದಿಯೊಂದಿಗೆ ಶಾಸಕ ರಂಗನಾಥ್ ಸಾಥ್​ ನೀಡಿದ್ದು, ಖುದ್ದು ಶೋಧಕಾರ್ಯಕ್ಕೆ ಕೆರೆಗೆ ಇಳಿದರು. ನಿರಂತರ ಶೋಧಕಾರ್ಯ ಬಳಿಕ ಟೆಕ್ಕಿ ಸುಮಾರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 28 February 25

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ