AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೆಂಟರ್ ಕೆಲಸದ ಜೊತೆ ಜೊತೆಗೆ ಸಿಂಗಲ್ ಬ್ಯಾರಲ್ ನಾಡಬಂದೂಕಗಳ ತಯಾರಿಸಿ ಪೊಲೀಸರ ಅತಿಥಿಯಾದ!

ತುಮಕೂರು: ಆತ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ, ತನ್ನ ಕೆಲಸ ತಾನು ಮಾಡಿಕೊಂಡು ಇದ್ದಿದ್ದರೇ ಇಂದು ಪೊಲೀಸರ ಅತಿಥಿಯಾಗುತ್ತಿರಲಿಲ್ಲ ಅನ್ನಿಸುತ್ತೆ, ಆದರೆ ಮಾಡಬಾರದ ಕೆಲಸ ಮಾಡಿ ಜೈಲಿಗೆ ಸೇರಿದ್ದಾನೆ. ಇಷ್ಟಕ್ಕೂ ಏನದು ಅಂತೀರಾ… ಮುಂದೆ ಓದಿ. ಹೌದು. ಕಾರ್ಪೆಂಟರ್ ಒಬ್ಬ ನಾಡಬಂದೂಕಗಳನ್ನ ತಯಾರಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ದುರ್ಗದಹಳ್ಳಿ ಗ್ರಾಮದಲ್ಲಿ ಕೃಷ್ಣಪ್ಪ ಎಂಬಾತ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದಾನೆ. ಹಲವು ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು ಮನೆಗಳ ವುಡ್ […]

ಕಾರ್ಪೆಂಟರ್ ಕೆಲಸದ ಜೊತೆ ಜೊತೆಗೆ ಸಿಂಗಲ್ ಬ್ಯಾರಲ್ ನಾಡಬಂದೂಕಗಳ ತಯಾರಿಸಿ ಪೊಲೀಸರ ಅತಿಥಿಯಾದ!
ಕಾರ್ಪೆಂಟರ್ ಕೆಲಸದ ಜೊತೆ ಜೊತೆಗೆ ಸಿಂಗಲ್ ಬ್ಯಾರಲ್ ನಾಡಬಂದೂಕಗಳ ತಯಾರಿಸಿ ಪೊಲೀಸರ ಅತಿಥಿಯಾದ!
TV9 Web
| Edited By: |

Updated on: Jan 14, 2022 | 9:41 AM

Share

ತುಮಕೂರು: ಆತ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ, ತನ್ನ ಕೆಲಸ ತಾನು ಮಾಡಿಕೊಂಡು ಇದ್ದಿದ್ದರೇ ಇಂದು ಪೊಲೀಸರ ಅತಿಥಿಯಾಗುತ್ತಿರಲಿಲ್ಲ ಅನ್ನಿಸುತ್ತೆ, ಆದರೆ ಮಾಡಬಾರದ ಕೆಲಸ ಮಾಡಿ ಜೈಲಿಗೆ ಸೇರಿದ್ದಾನೆ. ಇಷ್ಟಕ್ಕೂ ಏನದು ಅಂತೀರಾ… ಮುಂದೆ ಓದಿ. ಹೌದು. ಕಾರ್ಪೆಂಟರ್ ಒಬ್ಬ ನಾಡಬಂದೂಕಗಳನ್ನ ತಯಾರಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ದುರ್ಗದಹಳ್ಳಿ ಗ್ರಾಮದಲ್ಲಿ ಕೃಷ್ಣಪ್ಪ ಎಂಬಾತ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದಾನೆ. ಹಲವು ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು ಮನೆಗಳ ವುಡ್ ವರ್ಕ್ ಸೇರಿದಂತೆ ಬಾಗಿಲು ಕಿಟಕಿಗಳನ್ನು ತಯಾರು‌ ಮಾಡುತ್ತಿದ್ದ. ಇದರ ಜೊತೆ ಜೊತೆಗೆ ನಾಡಬಂದೂಕಗಳನ್ನ ತಯಾರಿಸುವ ವಿದ್ಯೆಯನ್ನೂ ಕಲಿತಿದ್ದಾನೆ. ಅದರಂತೆ ಅಕ್ರಮವಾಗಿ ಸರಿಸುಮಾರು ಆರಕ್ಕೂ ಹೆಚ್ಚು ಸಿಂಗಲ್ ಬ್ಯಾರಲ್ ನಾಡಬಂದೂಕಗಳನ್ನ ತಯಾರಿಸಿ ಆರು ಜನರಿಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಕ್ಯಾತ್ಸಂದ್ರ ಪೊಲೀಸರು ಮೊನ್ನೆ ರಾತ್ರಿ ದುರ್ಗದಹಳ್ಳಿ ಗ್ರಾಮದ ಕೃಷ್ಣಪ್ಪ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಒಂದು ನಾಡಬಂದೂಕು, ಬಂದೂಕು ತಯಾರಿಸುವ ಸಾಮಾಗ್ರಿಗಳನ್ನು ಹಾಗೂ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದ ಕೃಷ್ಣಪ್ಪನನ್ನ ಬಂಧಿಸಿ, ಕರೆತಂದಿದ್ದಾರೆ.

ಸದ್ಯ ಆರು ಜನರಿಗೆ ಬಂದೂಕುಗಳನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಅದರಲ್ಲಿ ಮೂವರನ್ನ ವಶಕ್ಕೆ ಪಡೆದಿದ್ದು, ಇನ್ನುಳಿದ ಮೂವರಿಗಾಗಿ ಶೋಧ ಮುಂದುವರೆದಿದೆ. ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೇಲ್ನೋಟಕ್ಕೆ ಪ್ರಾಣಿ, ಪಕ್ಷಿಗಳ ಬೇಟೆಯಾಡಲು ನಾಡಬಂದೂಕಗಳನ್ನ ಬಳಸಲು ಹೀಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ಉಳಿದ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಅಕ್ರಮವಾಗಿ ನಾಡಬಂದೂಕಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದ ಕೃಷ್ಣಪ್ಪ ವಿಚಾರಣೆ ನಡೆಸಿದ್ದು, ಆತ ಕಳೆದ ಒಂದೂವರೆ ವರ್ಷದಿಂದ ಹೀಗೆ ಮಾಡುತ್ತಾ ಬಂದಿದ್ದಾನೆ ಎನ್ನಲಾಗಿದೆ. ಇತ್ತ ಕೃಷ್ಣಪ್ಪನ ಮನೆಯವರು ಪ್ರಕರಣದಿಂದ ಗಾಬರಿಯಾಗಿದ್ದಾರೆ.

– ಮಹೇಶ್, ಟಿವಿ9, ತುಮಕೂರು

Also Read: ಆರೋಪಿಯ ಬಂಧಿಸಲು ತಮ್ಮ ಕಾರು ಕೊಟ್ಟಿದ್ದೇಕೆ ಜಿಲ್ಲೆಯ ನಂ. 1 ಪೊಲೀಸ್​ ಅಧಿಕಾರಿ? ಇದರಲ್ಲಿ ಇನ್ಸ್​ಪೆಕ್ಟರ್​ ಸಾಹೇಬ ಹಕೀಕತ್ತು, ಹಿಕ್ಮತ್ತು ಏನು?

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ