AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧುಸ್ವಾಮಿ ಮುನಿಸು: ಭಿನ್ನಮತ ಶಮನಕ್ಕೆ ವಿ.ಸೋಮಣ್ಣ ಕಸರತ್ತು; ಸೊಗಡು ಶಿವಣ್ಣ ನಿವಾಸಕ್ಕೆ ಭೇಟಿ

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕರ್ನಾಟಕದಲ್ಲಿ ಭಿನ್ನಮತ, ಮುನಿಸು ಸ್ಫೋಟಗೊಂಡಿದ್ದು, ಬಂಡಾಯದ ಬಿಸಿ ಪಕ್ಷವನ್ನು ಸುಡುತ್ತಿದೆ. ತುಮಕೂರು ಕ್ಷೇತ್ರದಲ್ಲೂ ಭಿನ್ನಮತ ಸೃಷ್ಟಿಯಾಗಿದ್ದು, ಮಾಧುಸ್ವಾಮಿ ಮುನಿಸು ಶಮನಕ್ಕೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಮಾಧುಸ್ವಾಮಿ ಬಣದ ಸೊಗಡು ಶಿವಣ್ಣ ಅವರನ್ನು ಭೇಟಿಯಾಗಿದ್ದಾರೆ.

ಮಾಧುಸ್ವಾಮಿ ಮುನಿಸು: ಭಿನ್ನಮತ ಶಮನಕ್ಕೆ ವಿ.ಸೋಮಣ್ಣ ಕಸರತ್ತು; ಸೊಗಡು ಶಿವಣ್ಣ ನಿವಾಸಕ್ಕೆ ಭೇಟಿ
ತುಮಕೂರಿನಲ್ಲಿ ಭಿನ್ನಮತ ಶಮನಕ್ಕೆ ವಿ.ಸೋಮಣ್ಣ ಕಸರತ್ತು; ಸೊಗಡು ಶಿವಣ್ಣ ನಿವಾಸಕ್ಕೆ ಸೋಮಣ್ಣ ಭೇಟಿ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Mar 19, 2024 | 10:36 PM

Share

ತುಮಕೂರು, ಮಾ.19: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕರ್ನಾಟಕದಲ್ಲಿ ಭಿನ್ನಮತ, ಮುನಿಸು ಸ್ಫೋಟಗೊಂಡಿದ್ದು, ಬಂಡಾಯದ ಬಿಸಿ ಪಕ್ಷವನ್ನು ಸುಡುತ್ತಿದೆ. ತುಮಕೂರು (Tumkur) ಲೋಕಸಭಾ ಕ್ಷೇತ್ರದಲ್ಲೂ ಭಿನ್ನಮತ ಸೃಷ್ಟಿಯಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜೆಸಿ ಮಾಧುಸ್ವಾಮಿ (JC Madhuswamy) ಮುನಿಸು ಶಮನಕ್ಕೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ (V.Somanna) ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಮಾಧುಸ್ವಾಮಿ ಬಣದ ಸೊಗಡು ಶಿವಣ್ಣ (Sogadu Shivanna) ಅವರನ್ನು ಭೇಟಿಯಾಗಿದ್ದಾರೆ.

ಭಿನ್ನಮತ ಶಮನಕ್ಕೆ ಹಗಲು ರಾತ್ರಿ ಕಸರತ್ತು ನಡೆಸುತ್ತಿರುವ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಮಾಜಿ ಸಚಿವ ಸೊಗಡು ಶಿವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮಾಧುಸ್ವಾಮಿ ಬಣದಲ್ಲಿ‌ ಗುರುತಿಸಿಕೊಂಡಿರುವ ಸೊಗಡು ಶಿವಣ್ಣ ಅವರು ಸಂಸದ ಜಿ.ಎಸ್ ಬಸವರಾಜು ಅವರ ಬದ್ಧವೈರಿಯಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೊಗಡು ಶಿವಣ್ಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಸೋಮಣ್ಣ ಅವರು, ಚಿಕ್ಕಪೇಟೆಯ ಸೊಗಡು ಶಿವಣ್ಣ ಮನೆಗೆ ಭೇಟಿ ನೀಡಿದ್ದಾರೆ. ಮಾತುಕತೆ ವೇಳೆ, ತಮ್ಮ ಪರ ಕೆಲಸ ಮಾಡುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.

ಬಳಿಕ ಮಾತನಾಡಿದ ವಿ ಸೋಮಣ್ಣ, ಕೆಲವು ಕಾರಣಗಳಿಂದ ನಾನು ಕೂಡ ಕೆಲವಾರು ತಪ್ಪುಗಳನ್ನು ಮಾಡಿ ಒದ್ದಾಡುತ್ತಿರುತ್ತೇವೆ. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಅಥವಾ ನೋವಾದರೆ ಸಹಿಸಲ್ಲ ಅನ್ನೋ ಸಂದೇಶ ಕೊಟ್ಟಿದ್ದಾರೆ. ಈ ಕುಟುಂಬಕ್ಕೂ ನಮಗೂ ಅವಿನಾಭಾವ ಸಂಬಂಧ ಇದೆ. ಹತ್ತಾರು ಕಾರ್ಯಕ್ರಮಗಳನ್ನ ನಾನು ಮತ್ತು ಸೊಗಡು ಶಿವಣ್ಣ ಅವರು ಒಟ್ಟಾಗಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಎಲ್ಲೆಲ್ಲಿ ಯಾರಿಂದ ಬಂಡಾಯ? ಇಲ್ಲಿದೆ ವಿವರ

ಸ್ವಲ್ಪ ಯಡವಟ್ಟಾದರೆ, ಸಣ್ಣದು ಕೂಡ ದೊಡ್ಡ ಅಸ್ತ್ರ ಆಗುತ್ತೆ ಅನ್ನೋದಕ್ಕೆ ಕೆಲವಾರು ಉದಾಹರಣೆಗಳನ್ನು ನೋಡಿದ್ದೇವೆ. ನಾವು ಸ್ವಲ್ಪ ಎಚ್ಚೆತ್ತುಕೊಂಡಿದ್ದೇವೆ, ಶಿವಣ್ಣನವರು ಸ್ವಾಭಿಮಾನ ಬೆಳಸಿಕೊಂಡಿದ್ದಾರೆ. ಮಾನಸಿಕ ತೋಳಲಾಟ ತಾಳಲಾರದೆ ಚುನಾವಣೆಗೆ ನಿಂತರು. ನನ್ನ ಸಂಪರ್ಕದಲ್ಲಿ ಇರುವ ರಾಷ್ಟ್ರೀಯ ನಾಯಕರಿಗೆ ಎಲ್ಲಾವನ್ನು ಹೇಳಿದ್ದೇನೆ. ಅವರ ಸ್ನೇಹಿತರ ಜೊತೆಗೆ ಸೇರಿ ಶಿವಣ್ಣ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಹಾಗೂ ಸಾಯೋತನಕ ಅವರ ಜೊತೆಗೆ‌ ಇರುತ್ತೇನೆ ಎಂದರು.

ರಾಜಕಾರಣ ಮುಳ್ಳಿನ ಹಾಸಿಗೆ. ಯಾರು ಶತ್ರುಗಳಲ್ಲ, ಮಿತ್ರರಲ್ಲ, ರಾಜಕೀಯ ನಿಂತ ನೀರಲ್ಲ. ಒಬ್ಬರ ಮನಸು ಮತ್ತೊಬ್ಬರ ಮನಸು ಒಂದಾಗಬೇಕು ಎಂದು ತುಮಕೂರಿನಲ್ಲಿ ಸೋಮಣ್ಣ ಹೇಳಿದರು.

ಕೈತಪ್ಪಿದ ಟಿಕೆಟ್; ಯಡಿಯೂರಪ್ಪ ಮೇಲೆ ಮಾಧುಸ್ವಾಮಿ ಗರಂ

ತುಮಕೂರು ಲೋಕಸಭಾ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರದಲ್ಲಿ ಸೋಮಣ್ಣ ಅವರಿಗೆ ಮಣೆ ಹಾಕಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಮಾಧುಸ್ವಾಮಿ, ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದಾರೆ. ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ ಎಂದು ಬಹಿರಂಗವಾಗಿ ಹೇಳಿದ್ದರು.

ಸೋಮಣ್ಣ ಅವಕಾಶವಾದಿ, ಅವರು ಅವಕಾಶ ಕೇಳಿದ್ದಾರೆ‌. ಸೋಮಣ್ಣ ಮೇಲೆ ನಮಗೇನು ಬೇಸರ ಇಲ್ಲ. ಆದರೆ, ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಾಗಿದೆ. ಯಾರ್ಯಾರು ನನಗೆ ಅನ್ಯಾಯ ಮಾಡಿದರು ಎಂದು ಪಕ್ಷಕ್ಕೆ 10 ಪೇಜ್ ಬರೆದುಕೊಟ್ಟವರು ಇಂದು ಅವರೇ ದೊಡ್ಡವರಾಗಿದ್ದಾರೆ. ನಿಷ್ಠಾವಂತವಾಗಿ ದುಡಿದ ನಾವು ಲೆಕ್ಕಕ್ಕಿಲ್ಲ ಅಂದರೆ ನೋವು ಆಗಲ್ವಾ? ನಾವೇನು ಪಾರ್ಲಿಮೆಂಟ್​ನಲ್ಲಿ ಕೊಡಿ, ವಿಧಾನಸಭೆಯಲ್ಲಿ ಕೊಡಿ ಎಂದು ಕೇಳಿಲ್ಲ. ಗೌರವಯುತವಾಗಿ ವರ್ತಿಸದೇ ಇದ್ದರೆ ಹೇಗೆ? ನೋವು ಬಾದಿಸುತ್ತದೆ ಅಲ್ವಾ? ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ