AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!

ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಇದೀಗ ಪತ್ತೆ ಹಚ್ಚಿದ್ದಾರೆ. ಶಿರಾ‌ ಗ್ರಾಮಾಂತರ ಸಿಪಿಐ ರವಿಕುಮಾರ್ ನೇತೃತ್ವದಲ್ಲಿ ಆರೋಪಿ ಬಂಧನ ಮಾಡಲಾಗಿದೆ.

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!
ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!
TV9 Web
| Edited By: |

Updated on:Jan 23, 2022 | 8:25 AM

Share

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನನ್ನು ಶಿರಾ ಗ್ರಾಮಾಂತರ ವೃತ್ತ ಪೊಲೀಸರು 16 ವರ್ಷಗಳ ಬಳಿಕ ಬಂಧಿಸಿದ್ದಾರೆ. ಮುಂಬೈನಲ್ಲಿ 16 ವರ್ಷಗಳ ಬಳಿಕ ಉತ್ತರ ಪ್ರದೇಶ ಮೂಲದ ಲಾರಿ ಚಾಲಕ ರಾಮದಾರ್ ಜೈಸ್ವಾರ್​ನನ್ನ ಬಂಧಿಸಲಾಗಿದೆ. 2006ರಲ್ಲಿ ಶೀರಾ- ಹಿರಿಯೂರು ಹೆದ್ದಾರಿಯಲ್ಲಿ ಟೆಂಪೋ ಟ್ರ್ಯಾಕ್ಸ್​​ಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಸ್ ನಿಲ್ದಾಣದ ಬಳಿ ಜನರನ್ನ ಇಳಿಸುತ್ತಿದ್ದಾಗ ಟೆಂಪೋ ಟ್ರ್ಯಾಕ್ಸ್​ಗೆ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಪಶುವೈದ್ಯ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. 8 ರಿಂದ 9 ಜನರಿಗೆ ಗಂಭೀರ ಗಾಯವಾಗಿತ್ತು. ಈ ಪ್ರಕರಣ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯದಿಂದ ಜಾಮೀನಿನಿಂದ ಹೊರಬಂದು ಆರೋಪಿ ನಾಪತ್ತೆಯಾಗಿದ್ದ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಇದೀಗ ಪತ್ತೆ ಹಚ್ಚಿದ್ದಾರೆ. ಶಿರಾ‌ ಗ್ರಾಮಾಂತರ ಸಿಪಿಐ ರವಿಕುಮಾರ್ ನೇತೃತ್ವದಲ್ಲಿ ಬಂಧನ ಮಾಡಲಾಗಿದೆ.

ಬೆಂಗಳೂರು: ಪ್ಯಾಲೇಸ್​ ಗ್ರೌಂಡ್​​ನ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತ

ಪ್ಯಾಲೇಸ್​ ಗ್ರೌಂಡ್​​ನ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಕಾರ್ಮಿಕರಿಗೆ ಗಾಯ ಆಗಿದ್ದಯ, ಓರ್ವನ ಕೈ ಮುರಿತವಾಗಿದೆ. ಗೇಟ್ ನಂಬರ್ 8 ರಲ್ಲಿ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತವಾಗಿದೆ. ಸ್ಥಳದಲ್ಲಿ ಕಾರ್ಯಕ್ರಮ ಹಿನ್ನೆಲೆ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ, ಕೊವಿಡ್ ಹೆಚ್ಚಳ ಹಿನ್ನೆಲೆ ಇಂದಿನ ಕಾರ್ಯಕ್ರಮ ರದ್ದಾಗಿತ್ತು. ಡೆಕೋರೇಷನ್ ಮಾಡಿದ್ದ ಸೆಟ್ ಬಿಚ್ಚುವ ವೇಳೆ ಅವಘಡ ಸಂಭವಿಸಿದೆ. ಮೇಲ್ಚಾವಣಿ ಕುಸಿತದಿಂದಾಗಿ ತಾತ್ಕಾಲಿಕ ಸೆಟ್ ವಾಲಿದೆ. ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ: ಬೈಕ್​ಗೆ ಬಸ್ ಡಿಕ್ಕಿ; ಯುವಕ ಸಾವು

ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನೆಲಮಂಗಲ ಸಮೀಪ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4 ಅರಿಶಿನಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಹಿಂಬದಿಯಲ್ಲಿ ಕುಳಿತಿದ್ದ ಜಗದೀಶ್ (23) ಎಂಬಾತ ಮೃತ ದುರ್ದೈವಿ. ಬೈಕ್ ಸವಾರ ಆದರ್ಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಆಗಿದೆ. ಬಸ್ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ: ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ; ಎದುರಿನ ಅಂಗಡಿಯ ಇಬ್ಬರಿಗೆ ಗಾಯ

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಭೀಕರ ರಸ್ತೆ ಅಪಘಾತ; ಖ್ಯಾತ​ ನಟ ಬಚಾವ್​, ವೈರಲ್​ ಆಯ್ತು ಫೋಟೋ

Published On - 9:26 pm, Sat, 22 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ