Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!

ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಇದೀಗ ಪತ್ತೆ ಹಚ್ಚಿದ್ದಾರೆ. ಶಿರಾ‌ ಗ್ರಾಮಾಂತರ ಸಿಪಿಐ ರವಿಕುಮಾರ್ ನೇತೃತ್ವದಲ್ಲಿ ಆರೋಪಿ ಬಂಧನ ಮಾಡಲಾಗಿದೆ.

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!
ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!
Follow us
TV9 Web
| Updated By: ganapathi bhat

Updated on:Jan 23, 2022 | 8:25 AM

ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನನ್ನು ಶಿರಾ ಗ್ರಾಮಾಂತರ ವೃತ್ತ ಪೊಲೀಸರು 16 ವರ್ಷಗಳ ಬಳಿಕ ಬಂಧಿಸಿದ್ದಾರೆ. ಮುಂಬೈನಲ್ಲಿ 16 ವರ್ಷಗಳ ಬಳಿಕ ಉತ್ತರ ಪ್ರದೇಶ ಮೂಲದ ಲಾರಿ ಚಾಲಕ ರಾಮದಾರ್ ಜೈಸ್ವಾರ್​ನನ್ನ ಬಂಧಿಸಲಾಗಿದೆ. 2006ರಲ್ಲಿ ಶೀರಾ- ಹಿರಿಯೂರು ಹೆದ್ದಾರಿಯಲ್ಲಿ ಟೆಂಪೋ ಟ್ರ್ಯಾಕ್ಸ್​​ಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಸ್ ನಿಲ್ದಾಣದ ಬಳಿ ಜನರನ್ನ ಇಳಿಸುತ್ತಿದ್ದಾಗ ಟೆಂಪೋ ಟ್ರ್ಯಾಕ್ಸ್​ಗೆ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಪಶುವೈದ್ಯ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. 8 ರಿಂದ 9 ಜನರಿಗೆ ಗಂಭೀರ ಗಾಯವಾಗಿತ್ತು. ಈ ಪ್ರಕರಣ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯದಿಂದ ಜಾಮೀನಿನಿಂದ ಹೊರಬಂದು ಆರೋಪಿ ನಾಪತ್ತೆಯಾಗಿದ್ದ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಇದೀಗ ಪತ್ತೆ ಹಚ್ಚಿದ್ದಾರೆ. ಶಿರಾ‌ ಗ್ರಾಮಾಂತರ ಸಿಪಿಐ ರವಿಕುಮಾರ್ ನೇತೃತ್ವದಲ್ಲಿ ಬಂಧನ ಮಾಡಲಾಗಿದೆ.

ಬೆಂಗಳೂರು: ಪ್ಯಾಲೇಸ್​ ಗ್ರೌಂಡ್​​ನ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತ

ಪ್ಯಾಲೇಸ್​ ಗ್ರೌಂಡ್​​ನ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಕಾರ್ಮಿಕರಿಗೆ ಗಾಯ ಆಗಿದ್ದಯ, ಓರ್ವನ ಕೈ ಮುರಿತವಾಗಿದೆ. ಗೇಟ್ ನಂಬರ್ 8 ರಲ್ಲಿ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತವಾಗಿದೆ. ಸ್ಥಳದಲ್ಲಿ ಕಾರ್ಯಕ್ರಮ ಹಿನ್ನೆಲೆ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ, ಕೊವಿಡ್ ಹೆಚ್ಚಳ ಹಿನ್ನೆಲೆ ಇಂದಿನ ಕಾರ್ಯಕ್ರಮ ರದ್ದಾಗಿತ್ತು. ಡೆಕೋರೇಷನ್ ಮಾಡಿದ್ದ ಸೆಟ್ ಬಿಚ್ಚುವ ವೇಳೆ ಅವಘಡ ಸಂಭವಿಸಿದೆ. ಮೇಲ್ಚಾವಣಿ ಕುಸಿತದಿಂದಾಗಿ ತಾತ್ಕಾಲಿಕ ಸೆಟ್ ವಾಲಿದೆ. ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ: ಬೈಕ್​ಗೆ ಬಸ್ ಡಿಕ್ಕಿ; ಯುವಕ ಸಾವು

ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನೆಲಮಂಗಲ ಸಮೀಪ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4 ಅರಿಶಿನಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಹಿಂಬದಿಯಲ್ಲಿ ಕುಳಿತಿದ್ದ ಜಗದೀಶ್ (23) ಎಂಬಾತ ಮೃತ ದುರ್ದೈವಿ. ಬೈಕ್ ಸವಾರ ಆದರ್ಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಆಗಿದೆ. ಬಸ್ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ: ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ; ಎದುರಿನ ಅಂಗಡಿಯ ಇಬ್ಬರಿಗೆ ಗಾಯ

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಭೀಕರ ರಸ್ತೆ ಅಪಘಾತ; ಖ್ಯಾತ​ ನಟ ಬಚಾವ್​, ವೈರಲ್​ ಆಯ್ತು ಫೋಟೋ

Published On - 9:26 pm, Sat, 22 January 22

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ