AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಮಕೂರು: ಅಪ್ರಾಪ್ತ ಹುಡುಗಿ ಜೊತೆ ಪ್ರೀತಿ; ಆಕೆಯನ್ನ ನೋಡಲು ಹೋದ ಯುವಕ ನಾಪತ್ತೆ

ಆ ಯುವಕ ಗ್ರಾಮದಲ್ಲಿ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಹುಡುಗಿ ಮೇಲೆ ಪ್ರೀತಿ ಆಗಿದೆ. ಆಕೆಯನ್ನ ನೋಡಲು ರಾತ್ರಿ ಅವರ ಮನೆಗೆ ಹೋದವನು ನಾಪತ್ತೆಯಾಗಿದ್ದಾನೆ. ಆತನನ್ನೆ ನಂಬಿ ಜೀವನ ಮಾಡ್ತಿದ್ದ ತಾಯಿ ಇದೀಗ ಕಣ್ಣಿರು ಹಾಕುತ್ತಿದ್ದಾಳೆ.

‘ತುಮಕೂರು: ಅಪ್ರಾಪ್ತ ಹುಡುಗಿ ಜೊತೆ ಪ್ರೀತಿ; ಆಕೆಯನ್ನ ನೋಡಲು ಹೋದ ಯುವಕ ನಾಪತ್ತೆ
ನಾಪತ್ತೆಯಾದ ಯುವಕ ನವೀನ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 24, 2023 | 3:50 PM

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಕೋಡಗದಾಲ ಗ್ರಾಮದ ನಿವಾಸಿ ನವೀನ್​, ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಗ್ರಾಮದಲ್ಲಿ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ. ಆತನಿಗೆ ಅಪ್ರಾಪ್ತ ಬಾಲಕಿ‌ಯ ಪರಿಚಯವಾಗಿ, ಬಳಿಕ ಅದು ಪ್ರೀತಿಗೆ ತಿರುಗಿದೆ. ಹೀಗೆ ಫೆ.9 ರಂದು ನವೀನ್ ಪ್ರೀತಿಸಿದ ಹುಡುಗಿಯ ಮನೆಗೆ ಹೋಗಿದ್ದಾನೆ. ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ನವೀನ್ 15 ದಿನ ಕಳೆಯುತ್ತಾ ಬಂದರೂ ಪತ್ತೆಯಾಗಿಲ್ಲ ಎನ್ನಲಾಗಿದೆ. ನಾಪತ್ತೆಯಾದ ಮಗನನ್ನು ನೆನೆದು ತಾಯಿ ಕಣ್ಣಿರು ಹಾಕುತ್ತಿದ್ದಾಳೆ.

ಗ್ರಾಮದ ಚಿನ್ನರಂಗ ಎಂಬುವರ ಅಪ್ರಾಪ್ತ ಮಗಳ ಜೊತೆಗೆ ನವೀನ್ ಲವ್​ನಲ್ಲಿ ಇದ್ದ ಎನ್ನಲಾಗಿದೆ. ಅವರು ಆಟೋ ಬಾಡಿಗೆಗೆ ನವೀನ್​ನ್ನ ಕರೆದುಕೊಂಡು ಹೋಗುತ್ತಿದ್ದರಂತೆ. ಈ ವೇಳೆ ಪರಿಚಯವಾದ ಅಪ್ರಾಪ್ತ ಬಾಲಕಿ ನವೀನನ ಜೊತೆ ಪ್ರೀತಿ ಅಂತಾ ಸುತ್ತಾಡಿ ಸಿಕ್ಕ ಸಿಕ್ಕ ಕಡೆ ತಿರುಗಾಡಿದ್ದಾಳೆ. ಕಳೆದ ಫೆ.9 ರಂದು ರಾತ್ರಿ 10 ಗಂಟೆಯಿಂದ 12 ಗಂಟೆವರೆಗೂ ನಿರಂತರ ಪೋನ್​ನಲ್ಲಿ ಮಾತನಾಡಿರುವ ನವೀನ್. 12 ಗಂಟೆ ಸುಮಾರಿಗೆ ಅಪ್ರಾಪ್ತ ಬಾಲಕಿಯ ಮನೆ ಬಳಿ ಹೋದನಂತೆ. ಅಷ್ಟೇ ಆಮೇಲೆ ಹುಡುಗನ ಸುಳಿವೇ ಇಲ್ಲ.

ಈ ಕುರಿತು ಹುಡುಗಿ ಮನೆಯವರು ಹೊಡೆದು ಕೊಲೆ ಮಾಡಿರಬಹುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಒಂದು ವೇಳೆ ಬದುಕಿದ್ದರೆ, ಈವರೆಗೆ ವಾಪಸ್ ಬರಬೇಕಿತ್ತು. ಆದರೆ ಇನ್ನೂ ಬಂದಿಲ್ಲದಿರುವುದರಿಂದ ಅನುಮಾನವಿದೆ ಅಂತಾ ಗ್ರಾಮಸ್ಥರು ಗಂಭೀರ ಆರೋಪ‌ ಮಾಡಿದ್ದಾರೆ. ಇನ್ನು ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಇಂದು, ನಾಳೆ ಎಂದು ಸಬೂಬು ಹೇಳುತ್ತಾ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Delhi Crime: 11 ವರ್ಷದ ಬಾಲಕಿ ನಾಪತ್ತೆ, ಕೊಲೆ ಪ್ರಕರಣ : 10 ದಿನಗಳ ಬಳಿಕ ಒಂದು ಮಿಸ್ಡ್​ಕಾಲ್​ನಿಂದ ಆರೋಪಿ ಸಿಕ್ಕಿಬಿದ್ದ

ಸದ್ಯ ಮೇಲ್ನೋಟಕ್ಕೆ ಕೊಲೆ ಮಾಡಿ ಎಲ್ಲೋ ಬಿಸಾಡಿರಬಹುದು ಎನ್ನುವ ಆರೋಪ ಕೇಳಿಬಂದಿದ್ದು. ನವೀನ್ ಇದಕ್ಕಿದ್ದಂತೆ ನಾಪತ್ತೆಯಾದ ಕಾರಣ ಗ್ರಾಮದಲ್ಲಿ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಹುಡುಗಿ ಮನೆಯವರು ಹೊಡೆದಾಕಿರಬಹುದು ಅಂತಾ ಗುಸು ಗುಸು ಗ್ರಾಮದಲ್ಲಿ ಕೇಳಿಬರುತ್ತಿವೆ. ಇತ್ತ ಪೊಲೀಸರು ಮಾತ್ರ ತಲೆಕೆಡೆಸಿಕೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದರೇ ಮಾತ್ರ ಸತ್ಯ ಹೊರಬರಲಿದೆ.

ವರದಿ: ಮಹೇಶ್ ಟಿವಿ9 ತುಮಕೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Fri, 24 February 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ