ರೋಗಿಗೆ ಅವಧಿ ಮುಗಿದ ಔಷಧಿ ನೀಡಿದ ತುಮಕೂರಿನ ಖಾಸಗಿ ಆಸ್ಪತ್ರೆ: ಪ್ರಶ್ನಿಸಿದ್ದಕ್ಕೆ ಉಡಾಫೆ ಉತ್ತರ ನೀಡಿದ ವೈದ್ಯ

ತುಮಕೂರಿನ ಪ್ರತಿಷ್ಠಿತ ಮಡಿಲು ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮುಗಿದ ಔಷಧಿಯನ್ನು ನೀಡಲಾಗಿದೆ. ಮಡಿಲು ಖಾಸಗಿ ಮಕ್ಕಳ ಆಸ್ಪತ್ರೆಯಾಗಿದ್ದರೂ ಕೂಡ ಎಲ್ಲ ವರ್ಗದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿಗೆ ಅವಧಿ ಮುಗಿದ ಔಷಧಿ ನೀಡಿದ ತುಮಕೂರಿನ ಖಾಸಗಿ ಆಸ್ಪತ್ರೆ: ಪ್ರಶ್ನಿಸಿದ್ದಕ್ಕೆ ಉಡಾಫೆ ಉತ್ತರ ನೀಡಿದ ವೈದ್ಯ
ಮಡಿಲು ಆಸ್ಪತ್ರೆ
Follow us
| Updated By: ವಿವೇಕ ಬಿರಾದಾರ

Updated on: Feb 10, 2023 | 10:17 AM

ತುಮಕೂರು: ವೈದ್ಯೋ ನಾರಾಯಣ ಹರಿಃ ಅಂತಾರೆ. ರೋಗಿಗಳ ಜೀವ ಕಾಪಾಡಬೇಕಾದ ವೈದ್ಯರೇ, ರೋಗಿಗಳ ಜೀವದ ಜೊತೆ ಚೆಲ್ಲಾಟ ಆಡಲು ಶರು ಮಾಡಿದರೇ ದುರಂತವೇ ನಡೆದು ಹೋಗುತ್ತದೆ. ಕೆಲವು ಆಸ್ಪತ್ರೆಗಳಲ್ಲಿ ಅವಧಿ ಮುಗಿದ ಔಷಧಿಗಳನ್ನು ರೋಗಿಗಳಿಗೆ ನೀಡಿರುವ ಸುದ್ದಿಗಳನ್ನು ಓದಿದ್ದೇವೆ, ಕೇಳಿದ್ದೇವೆ ಮತ್ತು ನೋಡಿದ್ದೇವೆ. ಅದೇ ರೀತಿಯಾಗಿ ಡಾ. ಅಶೋಕ್ ಅವರು ನಡೆಸುತ್ತಿರುವ ತುಮಕೂರಿನ (Tumakuru) ಪ್ರತಿಷ್ಠಿತ ಮಡಿಲು ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮುಗಿದ ಔಷಧಿಯನ್ನು ನೀಡಲಾಗಿದೆ. ಮಡಿಲು ಖಾಸಗಿ ಮಕ್ಕಳ ಆಸ್ಪತ್ರೆಯಾಗಿದ್ದರೂ ಕೂಡ ಎಲ್ಲ ವರ್ಗದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಾವಗಡ ಮೂಲದ ರಂಗಪ್ಪ ಎಂಬುವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ವೈದ್ಯರೊಬ್ಬರ ಸಲಹೆ ಮೇರೆಗೆ ಮಡಿಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಕಿಡ್ನಿ ಸ್ಪೇಷಲಿಸ್ಟ್ ವೈದ್ಯ ಡಾ.‌ರಂಗೇಗೌಡರ ಬಳಿ ಚಿಕಿತ್ಸೆ ಪಡೆದರು. ರಂಗಪ್ಪನಿಗೆ ಕಳೆದ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಡಾ.‌ರಂಗೇಗೌಡ ಕಿಡ್ನಿ ಸ್ಟೋನ್ ಆಪರೇಷನ್ ಮಾಡಿದ್ದಾರೆ.

ನಂತರ ಎರಡು ದಿನಗಳ‌ ಕಾಲ ಮಡಿಲು ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಹೀಗಾಗಿ ವೈದ್ಯರು 2 ದಿನಕ್ಕಾಗುವ ಔಷಧಿಗಳನ್ನು ನೀಡಿದ್ದಾರೆ. ಹಾಗೇ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳಲು ರಂಗಪ್ಪ ಅವರಿಗೆ ಗ್ಲೂಕೋಸ್ ನೀಡಲಾಗಿತ್ತು. ಆಪರೇಷನ್ ಆದ ರಾತ್ರಿಯಿಂದಲೂ ಆಸ್ಪತ್ರೆ ಸಿಬ್ಬಂದಿ ರಂಗಪ್ಪ ಅವರಿಗೆ ನೀಡಿದ ಗ್ಲೂಕೋಸ್​​​ನ ಅವಧಿ ಮುಗದಿತ್ತು.

ವೈದ್ಯರು ಹಾಗೂ ನರ್ಸ್ ಅವಧಿ ಮುಗಿದು 11 ತಿಂಗಳಾದ ಗ್ಲೂಕೋಸ್ ನೀಡಿದ್ದಾರೆ. ಇದನ್ನು ಗಮನಿಸಿದ ಮನಿಸಿದ ರಂಗಪ್ಪರ ಮಗ, ಕೂಡಲೇ ಮಾಧ್ಯಮದವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಅವಧಿ ಮುಗಿದ ಗ್ಲೂಕೋಸ್ ಹಾಕಿರುವುದು ಬೆಳಕಿಗೆ ಬಂದಿದೆ.

ಉಡಾಫೆ ಉತ್ತರ ನೀಡುತ್ತಿರುವ ವೈದ್ಯರು

ಅವಧಿ ಮುಗಿದ ಔಷಧಿ ಕೊಡಬಹುದು ಏನು ಆಗಲ್ಲ. ಏನೋ ಕಣ್ತಪ್ಪಿನಿಂದ ಆಗಿದೆ ಇಲ್ಲಿಗೆ ಬಿಟ್ಟು ಬಿಡಿ. ಅವಧಿ ಮುಗಿದ ಔಷಧಿ ನೀಡಿದರೂ ರೋಗಿಗೆ ಏನು ಆಗಿಲ್ಲ. ಇದುವರೆಗೆ ನಮ್ಮಲ್ಲಿ ಯಾವುದೇ ಅನಾಹುತವಾಗಿಲ್ಲ. ಅವಧಿ ಮುಗಿದ ಮೆಡಿಸನ್ ರೋಗಿಗೆ ಚಿಕಿತ್ಸೆ ಕೊಟ್ಟರೇ ನಿಮಗೇನು ಸಮಸ್ಯೆ ಎಂದು ಆಸ್ಪತ್ರೆಯ ವೈದ್ಯರು ಉದ್ದಟತನದ ಉತ್ತರ ನೀಡಿದ್ದಾರೆ.

ನಾನು 30 ವರ್ಷದಿಂದ IMA ಅಸೋಸಿಯೇಷನ್​ಗೆ ಜಿಲ್ಲಾ ಅಧ್ಯಕ್ಷ ಆಗಿದ್ದೀನಿ. ರೋಗಿಗೆ ಅವಧಿ ಮುಗಿದ ಔಷಧಿ ಕೊಡಬಹುದು. ಆಹಾರಕ್ಕೆ ಅವಧಿ ಮುಗಿದೋದರೆ ನೀವು ತಿನ್ನಲ್ವಾ? ಎಂದು ಡಾ ಶಶಿಧರ್ ಉಡಾಫೆಯಾಗಿ ಮಾತನಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ