AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ

ಮೊಮ್ಮಗಳ ವಿವಾಹಕ್ಕೆ ಬಂದಿದ್ದ ಅಳಿಯನ ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ ಬಳಿಕ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

Tumakuru News: 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಅಳಿಯನ ಸ್ನೇಹಿತರಿಂದಲೇ ಹೀನ ಕೃತ್ಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:May 28, 2023 | 11:39 AM

Share

ತುಮಕೂರು: ಅಳಿಯನ ಸ್ನೇಹಿತರಿಂದಲೇ(Friends) 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ(Rape) ನಡೆದಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳ ವಿವಾಹಕ್ಕೆ(Granddaughter’s Wedding) ಬಂದಿದ್ದ ಅಳಿಯನ(son-in-law) ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ ಬಳಿಕ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಅಸ್ವಸ್ಥಗೊಂಡ ವೃದ್ಧೆಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನಲ್ಲಿ ಸಾಮೂಹಿಕ ಅತ್ಯಾಚಾರ

ಇನ್ನು ಮತ್ತೊಂದೆಡೆ ರಾಯಚೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೇ 23 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಏಳನೇ ಮೈಲ್ ಕ್ಯಾಂಪ್ ಬಳಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರುಕ್ಕಮ್ಮ(46) ಕೊಲೆಯಾದ ಮಹಿಳೆ. ಪರಿಚಯಸ್ಥರೇ ಸೇರಿ ಅತ್ಯಾಚಾರ ಎಸಗಿ ಮಹಿಳೆ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿ ಮಾಳಪ್ಪನನ್ನು ಬಂಧಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಎಸಗಿ ಮಹಿಳೆಯನ್ನು ಕಾಲುವೆ ಬಳಿ ತಳ್ಳಿ, ಗಂಭೀರವಾಗಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರುಕ್ಕಮ್ಮ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತಳ ಕುಟುಂಬಸ್ಥರು ಘಟನೆ ಬಳಿಕ ಆರೋಪಿ ಮಾಳಪ್ಪ ಸೇರಿ ಮೂವರ ವಿರುದ್ಧ ದೂರು ನೀಡಿದ್ದರು. ಸದ್ಯ ಆರೋಪಿ ಮಾಳಪ್ಪನನ್ನ ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kalaburagi News: ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ 172 ದಿನಗಳಿಂದ ಧರಣಿ ನಡೆಸುತ್ತಿದ್ದ ರೈತ ಸಾವು

ನಿವೇಶನ ವಿಚಾರಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಿವೇಶನದ ವಿಚಾರಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗ್ರಾಮದ ಮಹಿಳೆ ಗೀತಾ ಮೇಲೆ ಆರೋಪಿ ಮಲ್ಲೇಶ್ ಹಲ್ಲೆ ನಡೆಸಿದ್ದಾರೆ. ಗ್ರಾಮ ಪಂಚಾಯ್ತಿ ಕಂಪ್ಯೂಟರ್ ಆಪರೇಟರ್ ಮಲ್ಲೇಶ್ ಹಾಗೂ ಸ್ನೇಹಿತರಿಂದ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ.

ಗೀತಾ ಬೋರೇಗೌಡ ಮತ್ತು ಮಲ್ಲೇಶ್ ಎಂಬುವವರ ನಡುವೆ ನಿವೇಶನ ವಿಚಾರಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿತ್ತು. ಬೋರೇಗೌಡ ಆರು ತಿಂಗಳ ಹಿಂದೆ ನ್ಯಾಯಾಲಯದ ಮೆಟ್ಟಿಲೇರಿದ್ದ. ನ್ಯಾಯಾಲಯ ಬೋರೇಗೌಡರ ಪರ ತೀರ್ಪು ನೀಡಿತ್ತು. ನಿನ್ನೆ ಅಡಿಪಾಯ ತೆಗೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಮಲ್ಲೇಶ್ ಹಾಗೂ ಅವನ ಸ್ನೇಹಿತರು. ಒತ್ತುವರಿ ಮಾಡಿ ಫೌಂಡೇಶನ್ ತೆಗೆಯುತ್ತಿದ್ದಿಯ ಎಂದು ಜಗಳ ತೆಗೆದು ಏಕಾಏಕಿ ಬೋರೇಗೌಡನ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಅಡ್ಡ ಬಂದ ಗೀತಾಳಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳು ಮಹಿಳೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:29 am, Sun, 28 May 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?