AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೌಢ್ಯಾಚರಣೆಗೆ ಒಂದು ಜೀವ ಬಲಿಯಾಗಿದ್ದರೂ ನಿಲ್ಲದ ಗೊಲ್ಲ ಸಮಾಜದ ಮೈಲಿಗೆ ಸಂಪ್ರದಾಯ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿ ಬಳಿ ಕೆಲವು ದಿನಗಳಿಂದ ಮಗು ಹಾಗೂ ಬಾಣಂತಿಯನ್ನ ಊರಾಚೆ ಇಟ್ಟು ಮತ್ತೆ ಅದೇ ಸಂಪ್ರದಾಯ ಮುಂದುವರಿಸಿದ್ದಾರೆ. ಪ್ರಾಣಿಗಳಿಗೂ ಯೋಗ್ಯವಲ್ಲದ, ಊರಿನಿಂದ ಆಚೆ ಒಂದು ಚಿಕ್ಕ ಗುಡಿಸಿಲಿನಲ್ಲಿ ಮಗು ಬಾಣಂತಿಯನ್ನ ಇಡಲಾಗಿತ್ತು. ಈ ವಿಚಾರ ತಿಳಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮಗುವನ್ನ ತಾವೇ ಕೈಗೆತ್ತಿಕೊಂಡು ಮನೆಗೆ ಬಿಟ್ಟಿದ್ದಾರೆ.

ತುಮಕೂರು: ಮೌಢ್ಯಾಚರಣೆಗೆ ಒಂದು ಜೀವ ಬಲಿಯಾಗಿದ್ದರೂ ನಿಲ್ಲದ ಗೊಲ್ಲ ಸಮಾಜದ ಮೈಲಿಗೆ ಸಂಪ್ರದಾಯ
ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮನೆಗೆ ಬಿಟ್ಟರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on:Aug 24, 2023 | 10:02 AM

Share

ತುಮಕೂರು, ಆ.24: ಅದೆಕೋ ತುಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯ ನಿಲ್ಲುವಂತೆ ಕಾಣಿಸುತ್ತಿಲ್ಲ(Superstition) . ಊರಾಚೆ ಇರಿಸಿ ನವಜಾತ ಶಿಶು ಸಾವನ್ನಪ್ಪಿದರೂ ಕೂಡ ಈ ಸಮುದಾಯ‌ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕಳೆದ ಜುಲೈ ತಿಂಗಳಿನಲ್ಲಿ ತುಮಕೂರು(Tumkur) ತಾಲೂಕಿನ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಬಳಿ ಬಾಣಂತಿಯನ್ನ ಊರಾಚೆ ಇಟ್ಟು ಮಗು ಸಾವನ್ನಪ್ಪಿತ್ತು. ಅದನ್ನ ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಡಳಿತ ಹಾಗೂ ಜಿಲ್ಲಾ ನ್ಯಾಯಾಲಯ ಪ್ರಕರಣ ಕೂಡ ದಾಖಲಿಸಿ ವಾರ್ನಿಂಗ್ ನೀಡಿತ್ತು. ಇಷ್ಟಾದರೂ ಕೂಡ ಇದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಕಾಲ ಬದಲಾಗುತ್ತಿದ್ದರೂ ಕೂಡ ಆ ಸಮುದಾಯದ ಮೌಡ್ಯಾಚರಣೆ ಮಾತ್ರ ಬದಲಾಗುತ್ತಿಲ್ಲ. ಕಳೆದ ತಿಂಗಳು ತುಮಕೂರು ತಾಲೂಕಿನ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಬಳಿ ಅವಳಿ ಮಕ್ಕಳ ತಾಯಿಯನ್ನ ಸೂತಕ ಎಂದು ಊರಾಚೆ ಇಡಲಾಗಿತ್ತು. ಒಂದು ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೇ ಮತ್ತೊಂದು ಮಗು ಒಂದು ತಿಂಗಳ ಬಳಿಕ ಸಾವನ್ನಪಿತ್ತು. ಈ ಘಟನೆಗೆ ಕಾರಣ ಆಗಿದ್ದು ಬಾಣಂತಿಯನ್ನು ಊರಿನಿಂದ ಆಚೆ ಇಟ್ಟದ್ದು. ಮಗುವಿಗೆ ಅತಿ ಶೀತ ಆಗಿ ಮಗು ಪ್ರಾಣಬಿಟ್ಟಿತ್ತು. ಮೌಡ್ಯದಿಂದ ಮಗು ಬಲಿಯಾದರೂ ಕೂಡ ಜಿಲ್ಲೆಯಲ್ಲಿ ಮತ್ತೆ ಅದೇ ಸಂಪ್ರದಾಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿ ಬಳಿ ಕೆಲವು ದಿನಗಳಿಂದ ಮಗು ಹಾಗೂ ಬಾಣಂತಿಯನ್ನ ಊರಾಚೆ ಇಟ್ಟು ಮತ್ತೆ ಅದೇ ಸಂಪ್ರದಾಯ ಮುಂದುವರಿಸಿದ್ದಾರೆ. ಪ್ರಾಣಿಗಳಿಗೂ ಯೋಗ್ಯವಲ್ಲದ, ಊರಿನಿಂದ ಆಚೆ ಒಂದು ಚಿಕ್ಕ ಗುಡಿಸಿಲಿನಲ್ಲಿ ಮಗು ಬಾಣಂತಿಯನ್ನ ಇಡಲಾಗಿತ್ತು. ಈ ವಿಚಾರ ತಿಳಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮಗುವನ್ನ ತಾವೇ ಕೈಗೆತ್ತಿಕೊಂಡು ಮನೆಗೆ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಈ ಘಟನೆ ಮತ್ತೆ ಮರುಕಳಿಸಿದರೇ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ‌ನೀಡಿ ಅರಿವು ಮೂಡಿಸಿದ್ದಾರೆ. ಸದ್ಯ ಮ‌ನೆಯೊಳಗೆ ಮಗು ತಾಯಿ ಸುರಕ್ಷಿತವಾಗಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:02 am, Thu, 24 August 23

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ