AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೌಢ್ಯಾಚರಣೆಗೆ ಒಂದು ಜೀವ ಬಲಿಯಾಗಿದ್ದರೂ ನಿಲ್ಲದ ಗೊಲ್ಲ ಸಮಾಜದ ಮೈಲಿಗೆ ಸಂಪ್ರದಾಯ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿ ಬಳಿ ಕೆಲವು ದಿನಗಳಿಂದ ಮಗು ಹಾಗೂ ಬಾಣಂತಿಯನ್ನ ಊರಾಚೆ ಇಟ್ಟು ಮತ್ತೆ ಅದೇ ಸಂಪ್ರದಾಯ ಮುಂದುವರಿಸಿದ್ದಾರೆ. ಪ್ರಾಣಿಗಳಿಗೂ ಯೋಗ್ಯವಲ್ಲದ, ಊರಿನಿಂದ ಆಚೆ ಒಂದು ಚಿಕ್ಕ ಗುಡಿಸಿಲಿನಲ್ಲಿ ಮಗು ಬಾಣಂತಿಯನ್ನ ಇಡಲಾಗಿತ್ತು. ಈ ವಿಚಾರ ತಿಳಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮಗುವನ್ನ ತಾವೇ ಕೈಗೆತ್ತಿಕೊಂಡು ಮನೆಗೆ ಬಿಟ್ಟಿದ್ದಾರೆ.

ತುಮಕೂರು: ಮೌಢ್ಯಾಚರಣೆಗೆ ಒಂದು ಜೀವ ಬಲಿಯಾಗಿದ್ದರೂ ನಿಲ್ಲದ ಗೊಲ್ಲ ಸಮಾಜದ ಮೈಲಿಗೆ ಸಂಪ್ರದಾಯ
ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮನೆಗೆ ಬಿಟ್ಟರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on:Aug 24, 2023 | 10:02 AM

Share

ತುಮಕೂರು, ಆ.24: ಅದೆಕೋ ತುಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯ ನಿಲ್ಲುವಂತೆ ಕಾಣಿಸುತ್ತಿಲ್ಲ(Superstition) . ಊರಾಚೆ ಇರಿಸಿ ನವಜಾತ ಶಿಶು ಸಾವನ್ನಪ್ಪಿದರೂ ಕೂಡ ಈ ಸಮುದಾಯ‌ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕಳೆದ ಜುಲೈ ತಿಂಗಳಿನಲ್ಲಿ ತುಮಕೂರು(Tumkur) ತಾಲೂಕಿನ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಬಳಿ ಬಾಣಂತಿಯನ್ನ ಊರಾಚೆ ಇಟ್ಟು ಮಗು ಸಾವನ್ನಪ್ಪಿತ್ತು. ಅದನ್ನ ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಡಳಿತ ಹಾಗೂ ಜಿಲ್ಲಾ ನ್ಯಾಯಾಲಯ ಪ್ರಕರಣ ಕೂಡ ದಾಖಲಿಸಿ ವಾರ್ನಿಂಗ್ ನೀಡಿತ್ತು. ಇಷ್ಟಾದರೂ ಕೂಡ ಇದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಕಾಲ ಬದಲಾಗುತ್ತಿದ್ದರೂ ಕೂಡ ಆ ಸಮುದಾಯದ ಮೌಡ್ಯಾಚರಣೆ ಮಾತ್ರ ಬದಲಾಗುತ್ತಿಲ್ಲ. ಕಳೆದ ತಿಂಗಳು ತುಮಕೂರು ತಾಲೂಕಿನ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಬಳಿ ಅವಳಿ ಮಕ್ಕಳ ತಾಯಿಯನ್ನ ಸೂತಕ ಎಂದು ಊರಾಚೆ ಇಡಲಾಗಿತ್ತು. ಒಂದು ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೇ ಮತ್ತೊಂದು ಮಗು ಒಂದು ತಿಂಗಳ ಬಳಿಕ ಸಾವನ್ನಪಿತ್ತು. ಈ ಘಟನೆಗೆ ಕಾರಣ ಆಗಿದ್ದು ಬಾಣಂತಿಯನ್ನು ಊರಿನಿಂದ ಆಚೆ ಇಟ್ಟದ್ದು. ಮಗುವಿಗೆ ಅತಿ ಶೀತ ಆಗಿ ಮಗು ಪ್ರಾಣಬಿಟ್ಟಿತ್ತು. ಮೌಡ್ಯದಿಂದ ಮಗು ಬಲಿಯಾದರೂ ಕೂಡ ಜಿಲ್ಲೆಯಲ್ಲಿ ಮತ್ತೆ ಅದೇ ಸಂಪ್ರದಾಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿ ಬಳಿ ಕೆಲವು ದಿನಗಳಿಂದ ಮಗು ಹಾಗೂ ಬಾಣಂತಿಯನ್ನ ಊರಾಚೆ ಇಟ್ಟು ಮತ್ತೆ ಅದೇ ಸಂಪ್ರದಾಯ ಮುಂದುವರಿಸಿದ್ದಾರೆ. ಪ್ರಾಣಿಗಳಿಗೂ ಯೋಗ್ಯವಲ್ಲದ, ಊರಿನಿಂದ ಆಚೆ ಒಂದು ಚಿಕ್ಕ ಗುಡಿಸಿಲಿನಲ್ಲಿ ಮಗು ಬಾಣಂತಿಯನ್ನ ಇಡಲಾಗಿತ್ತು. ಈ ವಿಚಾರ ತಿಳಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪನವರು ಗ್ರಾಮಕ್ಕೆ ಭೇಟಿ ನೀಡಿ ಮಗು ಹಾಗೂ ಬಾಣಂತಿ ರಕ್ಷಿಸಿ ಮಗುವನ್ನ ತಾವೇ ಕೈಗೆತ್ತಿಕೊಂಡು ಮನೆಗೆ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಈ ಘಟನೆ ಮತ್ತೆ ಮರುಕಳಿಸಿದರೇ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ‌ನೀಡಿ ಅರಿವು ಮೂಡಿಸಿದ್ದಾರೆ. ಸದ್ಯ ಮ‌ನೆಯೊಳಗೆ ಮಗು ತಾಯಿ ಸುರಕ್ಷಿತವಾಗಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:02 am, Thu, 24 August 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ