AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakur News: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ, ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆ ಮಾಡಿಕೊಂಡ ಮನೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Nov 26, 2023 | 10:36 PM

Share

ತುಮಕೂರು, ನವೆಂಬರ್​​​​ 26: ಒಂದೇ ಕುಟುಂಬದ ಐವರು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದರು. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ಹೇಳಿದ್ದಿಷ್ಟು 

ಜಿಲ್ಲಾಧಿಕಾರಿ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದು, ಇವರು ಶಿರಾ ತಾಲ್ಲೂಕಿನ ಒಂದೇ ಕುಟುಂಬದವರು. ಕಳೆದ ಒಂದು ವರ್ಷದಿಂದ ತುಮಕೂರಿನಲ್ಲಿ ಇವರು ವಾಸಿಸುತ್ತಿದ್ದರು. ಐವರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ನೇಣಿಗೆ ಶರಣಾಗಿದ್ದರೆ, ಮೂವರ ಕುತ್ತಿಗೆ ಫೈಬರ್‌ನಲ್ಲಿ ಬಿಗಿದ ಸ್ಥಿತಿಯಲ್ಲಿದೆ. ಸಾವಿಗೆ ಕಾರಣ ತಿಳಿಯಲು ಒಂದು ಡೆತ್ ನೋಟ್ ಸಿಕ್ಕಿದೆ. ಸಾಲ ಮಾಡಿಕೊಂಡಿರುವ ಹಾಗಿದೆ. ತಂದೆಯೇ ಮೊದಲು ಮಕ್ಕಳ ಕುತ್ತಿಗೆ ಬಿಗಿದು ನಂತರ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರಿಹಾರ ಕೊಡಿಸಲು ಸಿಎಂ ರಿಲೀಫ್ ಫಂಡ್‌ಗೆ ಸರ್ಕಾರಕ್ಕೆ ಬರೆಯುತ್ತೇವೆ. ಕಬಾಬ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡೆತ್ ನೋಟ್​ನಲ್ಲಿ ಏನಿದೆ?

ಸಾವಿಗೂ ಮುನ್ನ ಮೃತ ವ್ಯಕ್ತಿ ಗರೀಬ್ ಸಾಬ್ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ. ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ. ಊಟ ಮಾಡೋಕು ಕಷ್ಟ ಆಗಿದೆ. ಊರಲ್ಲಿದ್ದಾಗ ಹೆಂಡತಿ ಅಣ್ಣ ಸಾದಿಕ್, ಹೆಂಡತಿಯ ತಂಗಿ ಯಾಸಿನ್ ನಮ್ಮ ಮೇಲೆ ವಿಷ ಕಾರಿದ್ದರು. ಅದಕ್ಕೆ ನಾವು ಇಲ್ಲಿಗೆ ಬಂದಿದ್ದೇವೆ.

ಇದನ್ನೂ ಓದಿ: ಮೆಣಸಿನಕಾಯಿ ಕಳ್ಳತನ: ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸ್ ಕೊಡಿ. ಮನೆ ವಸ್ತುಗಳನ್ನ ನೀವು ತಗೋಳಿ. ಹದಿನೈದು ಸಾವಿರಾನ ಜರಿನ ಆಂಟಿಗೆ ಕೊಡಿ. ನಮ್ಮ ಬೈಕ್​ನ ನಮ್ಮ ಹಿರಿಯಣ್ಣ ಅಜಾಜ್​ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ಬೇಕಾದ ವಸ್ತುಗಳನ್ನ ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ, ಆದರೆ ಇದ್ರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನ ಪೊಲೀಸರಿಗೆ ತೋರಿಸಿ. ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು.

ನಮ್ಮ ಸಾವಿಗೆ ಐದು ಜನರೇ ಕಾರಣ

ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ, ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ. ನಮ್ಮ ಸಾವಿಗೆ ಗೃಹಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ. ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳ್ಕೊತ್ತೀವಿ. ನಮ್ಮ ದೇಹವನ್ನ ಪೋಸ್ಟ್ ಮಾರ್ಟಮ್ ಮಾಡಬಾರದು. ಇನ್ನೂ ವಿಷಯ ಫೋನ್​ನಲ್ಲಿದೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Sun, 26 November 23

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು