AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿ; ಹಣ ಕೊಟ್ಟವರಿಂದಲೇ ಕಿಡ್ನಾಪ್, ಮುಂದೇನಾಯ್ತು?​

ಜ್ಯೋತಿಷಿ ರಾಮಣ್ಣನವರು ನಿಧಿ ನಿಕ್ಷೇಪ ತೋರಿಸುವುದಾಗಿ ನಂಬಿಸಿ 16 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಆದರೆ ನಿಧಿಯೂ ತೋರಿಸದೇ, ಹಣವೂ ವಾಪಸ್ ನೀಡದೇ ಇದ್ದ ಹಿನ್ನೆಲೆ ಹಣ ಕೊಟ್ಟಿದ್ದವರೇ ಕಿಡ್ನಾಪ್ ಮಾಡಿದ್ದರು. ತುಮಕೂರು ಜಿಲ್ಲೆ ಪಾವಗಡ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಕಿಡ್ನಾಪ್ ಟೀಂ ಬಂಧಿಸಿದ್ದಾರೆ.

ತುಮಕೂರು: ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿ; ಹಣ ಕೊಟ್ಟವರಿಂದಲೇ ಕಿಡ್ನಾಪ್, ಮುಂದೇನಾಯ್ತು?​
ಪಾವಗಡ ಪೊಲೀಸ ಠಾಣೆ
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು|

Updated on:Nov 05, 2023 | 12:58 PM

Share

ತುಮಕೂರು, ನ.05: ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿಯನ್ನು ಕಿಡ್ನಾಪ್​ (Kidnap) ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಡ್ನಾಪ್​ ಟೀಂ ಬಂಧಿಸಿದ್ದಾರೆ. ಬೆಂಗಳೂರಿನ ಕಮಲಾನಗರದ ಶಿವರಾಜ್​(32), ಅನಂತಕೃಷ್ಣ(21), ಆಂಧ್ರ ಮೂಲದ ಕೋತಲಗುಟ್ಟದ ನರೇಶ್(25) ಬಂಧಿತರು. ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಜ್ಯೋತಿಷಿ ರಾಮಣ್ಣನನ್ನು ರಕ್ಷಿಸಲಾಗಿದೆ.

ಜ್ಯೋತಿಷಿ ರಾಮಣ್ಣನವರು ನಿಧಿ ನಿಕ್ಷೇಪ ತೋರಿಸುವುದಾಗಿ ನಂಬಿಸಿ 16 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಆದರೆ ನಿಧಿಯೂ ತೋರಿಸದೇ, ಹಣವೂ ವಾಪಸ್ ನೀಡದೇ ಇದ್ದ ಹಿನ್ನೆಲೆ ಹಣ ಕೊಟ್ಟಿದ್ದವರೇ ಕಿಡ್ನಾಪ್ ಮಾಡಿದ್ದರು. ಬೈಕ್​ನಲ್ಲಿ ಹೊರಟಿದ್ದ ಜ್ಯೋತಿಷಿ ರಾಮಣ್ಣ‌ರನ್ನ ಎರಡು ಕಾರುಗಳಲ್ಲಿ ಚೇಸ್ ಮಾಡಿ ಪಾವಗಡ ಅರಣ್ಯ ಇಲಾಖೆ ಕಚೇರಿ ಎದುರು ಕಿಡ್ನಾಪ್ ಮಾಡಲಾಗಿತ್ತು. ಬಳಿಕ ರಾಮಣ್ಣನ ಪುತ್ರನಿಗೆ ಕರೆ ಮಾಡಿ 16 ಲಕ್ಷ ಕೊಟ್ಟು ನಿಮ್ಮ ತಂದೆಯನ್ನ ಕರೆದುಕೊಂಡು ಹೋಗಿ ಎಂದು ಬೆದರಿಕೆ ಹಾಕಿದ್ದರು. ನಿಮ್ಮ ತಂದೆ 16 ಲಕ್ಷ ಸಾಲ ಪಡೆದಿದ್ದರು, ಅದನ್ನು ನೀಡಿ ತಂದೆ ಬಿಡಿಸಿಕೊಂಡು ಹೋಗಿ ಎಂದಿದ್ದರು. ಆತಂಕಕ್ಕೊಳಗಾದ ಕುಟುಂಬಸ್ಥರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಉಳ್ಳಾಲ ಬಳಿ ರಾಮಣ್ಣನ ರಕ್ಷಣೆ ಮಾಡಿದ್ದಾರೆ. ಹಾಗೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಲೇಡಿ ಅಧಿಕಾರಿಯ ಬರ್ಬರ ಹತ್ಯೆ, ಕಾರಣವೇನು?

ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವು

ಇನ್ನು ಮತ್ತೊಂದೆಡೆ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿರುವ ಆರೋಪ ಕೇಳಿ ಬಂದಿದೆ. ಅ.23ರಂದು ಪೊಲೀಸ್ ವಶದಲ್ಲಿದ್ದ ಕುಮಾರ್ ಆಚಾರ್​(48) ಸಾವನ್ನಪ್ಪಿದ್ದಾರೆ. ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಆಡುತ್ತಿದ್ದರೆಂದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ನಾಲ್ವರನ್ನ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಾಗ ಕುಮಾರ್ ಆಚಾರ್ ಮೃತಪಟ್ಟಿದ್ದರು. ಪೊಲೀಸರೇ ಕುಮಾರ್ ಆಚಾರ್ ಸಾವಿಗೆ ಕಾರಣ ಎಂದು ಸಂಬಂಧಿಕರು ಹಾಗೂ ಮಾಜಿ ಶಾಸಕ ಮಸಾಲೆ ಜಯರಾಮ್ ಆರೋಪಿಸಿದ್ದಾರೆ. ಆದರೆ ಕುಮಾರ್ ಆಚಾರ್​ನ ಸಾವನ್ನ ಸಹಜ ಸಾವು ಎಂದು ಪೊಲೀಸರು ದಾಖಲಿಸಿದ್ದಾರೆ. ಸಾವಿಗೆ ನ್ಯಾಯ ಒದಗಿಸಿ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:52 pm, Sun, 5 November 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?