ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿ ಪ್ರಕರಣ: ಕುಟುಂಬದವರ ವಿರುದ್ಧ ಎಫ್​ಐಆರ್ ​ದಾಖಲು

ಕಾಡುಗೊಲ್ಲ ಸಮುದಾಯದ ಮೌಢ್ಯಕ್ಕೆ ಒಂದು ತಿಂಗಳ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿ ಪ್ರಕರಣ: ಕುಟುಂಬದವರ ವಿರುದ್ಧ ಎಫ್​ಐಆರ್ ​ದಾಖಲು
ಬಾಣಂತಿ ವಸಂತಾ
Follow us
| Updated By: ವಿವೇಕ ಬಿರಾದಾರ

Updated on:Jul 28, 2023 | 10:41 AM

ತುಮಕೂರು: ಕಾಡುಗೊಲ್ಲ (Kadugolla) ಸಮುದಾಯದ ಮೌಢ್ಯಕ್ಕೆ ಒಂದು ತಿಂಗಳ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ (FIR) ದಾಖಲಾಗಿದೆ. ಇನ್ನು ಹಿರಿಯ ಸಿವಿಲ್​ ನ್ಯಾಯ್ಯಾಧೀಶರಾದ ನೂರುನ್ನಿಸ್ ನಿನ್ನೆ (ಜು.27) ರಂದು ಗ್ರಾಮಕ್ಕೆ ಭೇಟಿ ನೀಡಿ ಬಾಣಂತಿ ವಸಂತಾ ಆರೋಗ್ಯ ವಿಚಾರಿಸಿದರು. ಈ ವೇಳೆ ಅವರು ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ

ಜಿಲ್ಲೆಯ ತುಮಕೂರು ತಾಲೂಕಿನ ಮಲ್ಲೇನಹಳ್ಳಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಮೌಢ್ಯ ಇನ್ನೂ ಜೀವಂತವಾಗಿದೆ. ವಸಂತಾ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿತ್ತು. ಹೆರಿಗೆ ಮುಗಿಸಿ ವಾಪಸ್ ಗ್ರಾಮಕ್ಕೆ ಬಂದ ವಸಂತಾರಿಗೆ ಕಾಡುಗೊಲ್ಲ ಸಮುದಾಯದ ಮುಖಂಡರು ನಮ್ಮ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗಲ್ಲ ಹೀಗಾಗಿ ನಾವು ಗ್ರಾಮದೊಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರ ಒಳಗೆ ಬಂದರೇ ಕೇಡು, ಎಂದು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಆದೇಶ ನೀಡಿದ್ದರು.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಗುಡಿಸಿಲಿನಲ್ಲಿ, ಮಳೆ-ಚಳಿಯಲ್ಲಿ ಏಕಾಂಗಿಯಾಗಿ ವಾಸವಿದ್ದಳು. ಚಳಿಯಿಂದ ಮಗುವಿಗೆ ವಿಪರೀತ ಶಿತವಾಗಿ ಪ್ರಾಣ ಬಿಟ್ಟಿತ್ತು. ಈ ಸುದ್ದಿ ಟಿವಿ9ನಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಆರ್ ಸಿಎಚ್ ಮೋಹನ್, ಟಿಎಚ್ಓ ಲಕ್ಷ್ಮೀಕಾಂತ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ ವಸಂತರನ್ನು ಮನೆಗೆ ಸೇರಿಸಿದ್ದಾರೆ. ಅಲ್ಲದೇ ಪ್ರತಿದಿನ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:41 am, Fri, 28 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ