AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮಾಂಸಕ್ಕಾಗಿ ಬಾವಲಿಗಳ ಬೇಟೆ: ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದಿದ್ದ ನಾಲ್ವರನ್ನು ಕುಣಿಗಲ್ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸತ್ತ ಬಾವಲಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತುಮಕೂರು: ಮಾಂಸಕ್ಕಾಗಿ ಬಾವಲಿಗಳ ಬೇಟೆ: ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು
ನಾಲ್ವರನ್ನು ಬಂಧಿಸಿದ ಕುಣಿಗಲ್ ವಲಯ ಅರಣ್ಯಾಧಿಕಾರಿಗಳು
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 30, 2023 | 9:27 AM

Share

ತುಮಕೂರು, ಅಕ್ಟೋಬರ್​​​​​ 30: ಮಾಂಸಕ್ಕಾಗಿ ಎಂಟು ಬಾವಲಿ (bats) ಗಳನ್ನು ಕೊಂದಿದ್ದ ನಾಲ್ವರನ್ನು ಕುಣಿಗಲ್ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಬಂಧಿತರು. ಕಾಡರಾಮನಹಳ್ಳಿ ಜಮೀನೊಂದರ ಮರದಲ್ಲಿದ್ದ ಎಂಟು ಬಾವಲಿಗಳನ್ನು ಆರೋಪಿಗಳು ಹೊಡೆದು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸತ್ತ ಬಾವಲಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತಂಕ ಸೃಷ್ಟಿಸಿದ್ದ ಆನೆಯನ್ನ ಕೊನೆಗೂ ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿಗಳು

ಮೈಸೂರು: ಆತಂಕ ಸೃಷ್ಟಿಸಿದ್ದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಕೊನೆಗೂ ಕಾಡಿಗಟ್ಟಿದ್ದಾರೆ.  ಜಿಲ್ಲೆಯ ಸರಗೂರು ತಾಲೂಕಿನ‌ ತೆರಣಿಮುಂಟಿ ಗ್ರಾಮದ ಬಳಿ ಆನೆ ಕಾಣಿಸಿಕೊಂಡಿತ್ತು. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಮೈಸೂರು: ಈಜು ಬಾರದೆ ಕಾಲುವೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಸಾವು

ಕಬಿನಿ ಹಿನ್ನೀರು ಪ್ರದೇಶದ ರವಿರಾಮೇಶ್ವರ ದೇವಾಲಯದ ಬಳಿ ಆನೆ ಬಿಡುಬಿಟ್ಟಿತ್ತು. ಜಮೀನುಗಳಿಗೆ ತೆರಳುವ ವೇಳೆ ಎಚ್ಚರಿಕೆ ವಹಿಸುವಂತೆ ರೈತರಿಗೆ ತಿಳಿಸಿದ್ದರು. ಇದೀಗ ಆನೆಯನ್ನ ಬಂಡೀಪುರ ಅರಣ್ಯಕ್ಕೆ ಕಳುಹಿಸುವಲ್ಲಿ ಸಿಬ್ಬಂದಿಗಳು ಯಶಸ್ವಿ ಆಗಿದ್ದಾರೆ.

ಬ್ಯಾಗ್​ನಲ್ಲಿದ್ದ ನಗದು ಕಳ್ಳತನ ಮಾಡಿದ್ದ ಕಳ್ಳನ ಬಂಧನ

ಹುಬ್ಬಳ್ಳಿ: ಬೈಕ್​ನ ಬ್ಯಾಗ್​ನಲ್ಲಿದ್ದ ಹಣ ಕಳ್ಳತನ ಮಾಡಿದ್ದ ಕಳ್ಳನನ್ನು ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಖಿಲ್ ​ಬಂಧಿತ ವ್ಯಕ್ತಿ. ಬಂಧಿತನ ಬಳಿ ಇದ್ದ 7.97 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಅ.26ರಂದು ಹಳೆಯ ಬಸ್ ನಿಲ್ದಾಣ ಬಳಿ ಸುನೀಲ್ ಜಾಡ್ ಎಂಬಾತನ 8 ಲಕ್ಷ ರೂ. ಕಳ್ಳತನ ಮಾಡಿದ್ದ.

ಕಪಿಲಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಅಪರಿಚಿತ ಮಹಿಳೆ ಶವ ಎಂದು ಗುರುತಿಸಲಾಗಿದೆ. ನದಿಯಲ್ಲಿ ಶವ ತೆಲುತ್ತಿದ್ದದ್ದನ್ನ ದೇವಾಲಯದ ಭದ್ರತಾ ಸಿಬ್ಬಂದಿ ನೋಡಿ, ನಂಜನಗೂಡಿನ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸುತ್ತಿದ್ದ ಮೂವರ ಸೆರೆ

ಸ್ಥಳಕ್ಕಾಗಮಿಸಿದ ಪೊಲೀಸರು ದೋಣಿ ನಡೆಸುವ ಅಂಬಿಗರಿಂದ ಶವ ಹೊರಕ್ಕೆ ತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ