AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ

ಮಹಿಳಾ ಕಾನ್ಸ್​ಟೇಬಲ್ ಸುಧಾ ಕಿಡ್ನ್ಯಾಪ್​& ಮರ್ಡರ್​ ಪ್ರಕರಣಕ್ಕೆ ಸಂಬಂಧಿಸಿ ಅದೇ ಠಾಣೆಯ ಲೇಡಿ ಕಾನ್ಸ್​ಟೇಬಲ್​ ಎಸ್​.ರಾಣಿ ಹಾಗೂ ಆರೋಪಿ ನಿಖೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ
ನಾಪತ್ತೆಯಾಗಿರುವ ಪಿಸಿ ಸುಧಾ
TV9 Web
| Edited By: |

Updated on:Sep 19, 2022 | 9:55 AM

Share

ತುಮಕೂರು: ಹುಳಿಯಾರು ಠಾಣೆಯ ಮಹಿಳಾ ಕಾನ್ಸ್​ಟೇಬಲ್ ಸುಧಾ ಕಿಡ್ನ್ಯಾಪ್​& ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಹುಳಿಯಾರು ಠಾಣೆಯ ಮತ್ತೊಬ್ಬ ಲೇಡಿ ಕಾನ್ಸ್​ಟೇಬಲ್​ ಎಸ್​.ರಾಣಿ ಹಾಗೂ ಆರೋಪಿ ನಿಖೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಿಖೇಶ್​ ಹಾಗೂ ಮಂಜುನಾಥ್ ಎಂಬುವವರು ರಾಣಿ ಸೂಚನೆ ಮೇರೆಗೆ ಮಹಿಳಾ ಕಾನ್ಸ್​ಟೇಬಲ್​ ಸುಧಾ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಳನ್ನ ಕೊಲೆ ಮಾಡಲೇಬೇಕು ಅಂತ ರಾಣಿ ತಾಕೀತು ಮಾಡಿದ್ದಳು. ರಾಣಿಯ ಆಜ್ಞೆ ಮೇರೆಗೆ ಮಂಜುನಾಥ ಮತ್ತು ನಿಖೇಶ ಒಂದು ತಿಂಗಳಿಂದ ಕೊಲೆಗೆ ಸಂಚು ರೂಪಿಸಿದ್ದರು. ಹಾಗೂ ಒಮ್ಮೆ ಕೊಲೆಗೆ ಯತ್ನ ಕೂಡ ಮಾಡಿದ್ದರು. ಸುಧಾಳ ಮಗನನ್ನ ನೋಡಿಕೊಂಡು ಬರುವ ನೆಪದಲ್ಲಿ ಒಮ್ಮೆ ಸಾಗರಕ್ಕೆ ಕರೆದುಕೊಂಡು ಹೋಗಿದ್ದ ಮಂಜುನಾಥ ಮತ್ತು ನಿಖೇಶ್, ಸುಧಾಳ ಕೊಲೆಗೆ ಯತ್ನಿಸಿದ್ದರು. ಆದ್ರೆ ಅಂದು ಜೊತೆಯಲ್ಲಿ ಮಕ್ಕಳು ಇದ್ದಿದ್ರಿಂದ ಕೊಲೆ ಮಾಡೋಕೆ ಆಗಿರಲಿಲ್ಲ. ಕೊನೆಗೆ ಇದೇ ತಿಂಗಳು 13ರಂದು ಮರ್ಡರ್ ಮಾಡೋಕೆ ಡೇಟ್ ಫಿಕ್ಸ್ ಮಾಡಿ ನಾಲ್ಕೈದು ಬಾರಿ ಕರೆ ಮಾಡಿ ಸುಧಾರನ್ನ ಚಿಕ್ಕನಾಯಕನಹಳ್ಳಿ ಶೆಟ್ಟಿಕೆರೆ ಗೇಟ್ ಬಳಿ ಕರೆಸಿಕೊಂಡಿದ್ದಾರೆ. ಬಳಿಕ ಈಟಿಯೋಸ್ ಕಾರಿಗೆ ಕೂರಿಸಿಕೊಂಡು ತಿಪಟೂರಿಗೆ ತೆರಳಿದ್ದಾರೆ.

ತಿಪಟೂರು ನಗರಕ್ಕೆ ಬರುತ್ತಿದ್ದಂತೆ ಮಂಜುನಾಥನೂ ಕೂಡ ಅದೇ ಕಾರ್ ಹತ್ತಿಕೊಂಡಿದ್ದಾನೆ. ಹತ್ತುತ್ತಿದ್ದಂತೆ ಸುಧಾಳ ಕಣ್ಣಿಗೆ ಮೂವ್ ಹಚ್ಚಿದ್ದಾನೆ. ಸುಧಾ ಕಣ್ಣು ಉಜ್ಜುತ್ತಿದ್ದಂತೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದಾನೆ. ಎದೆ, ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ರಸ್ತೆ ಬದಿಯಲ್ಲಿನ ಪೊದೆವೊಂದಕ್ಕೆ ಸುಧಾಳ ಮೃತ ದೇಹ ಎಸೆದು ಪರಾರಿ ಆಗಿದ್ದಾರೆ. ಸುಧಾ ಮತ್ತು ರಾಣಿ ಮಧ್ಯೆ ಕೆಲಸದ ವಿಚಾರವಾಗಿ ಜಗಳ ಇತ್ತು ಎನ್ನಲಾಗಿದೆ. ಈ ಹಿಂದೆ ರಾಣಿ ಕೋರ್ಟ್ ಬೀಟ್ ಮಾಡುತ್ತಿದ್ದಳು. ಆದ್ರೆ ಇತ್ತೀಚೆಗೆ ಸುಧಾ ಕೋರ್ಟ್ ಡ್ಯೂಟಿಯನ್ನ ತನಗೆ ಹಾಕಿಸಿಕೊಂಡಿದ್ದಳು. ಇದೇ ವಿಚಾರವಾಗಿ ದ್ವೇಷ ಹುಟ್ಟಿಕೊಂಡಿತ್ತು ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:55 am, Mon, 19 September 22

Follow Us
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ