AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ

ಮಹಿಳಾ ಕಾನ್ಸ್​ಟೇಬಲ್ ಸುಧಾ ಕಿಡ್ನ್ಯಾಪ್​& ಮರ್ಡರ್​ ಪ್ರಕರಣಕ್ಕೆ ಸಂಬಂಧಿಸಿ ಅದೇ ಠಾಣೆಯ ಲೇಡಿ ಕಾನ್ಸ್​ಟೇಬಲ್​ ಎಸ್​.ರಾಣಿ ಹಾಗೂ ಆರೋಪಿ ನಿಖೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ
ನಾಪತ್ತೆಯಾಗಿರುವ ಪಿಸಿ ಸುಧಾ
TV9 Web
| Edited By: |

Updated on:Sep 19, 2022 | 9:55 AM

Share

ತುಮಕೂರು: ಹುಳಿಯಾರು ಠಾಣೆಯ ಮಹಿಳಾ ಕಾನ್ಸ್​ಟೇಬಲ್ ಸುಧಾ ಕಿಡ್ನ್ಯಾಪ್​& ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಹುಳಿಯಾರು ಠಾಣೆಯ ಮತ್ತೊಬ್ಬ ಲೇಡಿ ಕಾನ್ಸ್​ಟೇಬಲ್​ ಎಸ್​.ರಾಣಿ ಹಾಗೂ ಆರೋಪಿ ನಿಖೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಿಖೇಶ್​ ಹಾಗೂ ಮಂಜುನಾಥ್ ಎಂಬುವವರು ರಾಣಿ ಸೂಚನೆ ಮೇರೆಗೆ ಮಹಿಳಾ ಕಾನ್ಸ್​ಟೇಬಲ್​ ಸುಧಾ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಳನ್ನ ಕೊಲೆ ಮಾಡಲೇಬೇಕು ಅಂತ ರಾಣಿ ತಾಕೀತು ಮಾಡಿದ್ದಳು. ರಾಣಿಯ ಆಜ್ಞೆ ಮೇರೆಗೆ ಮಂಜುನಾಥ ಮತ್ತು ನಿಖೇಶ ಒಂದು ತಿಂಗಳಿಂದ ಕೊಲೆಗೆ ಸಂಚು ರೂಪಿಸಿದ್ದರು. ಹಾಗೂ ಒಮ್ಮೆ ಕೊಲೆಗೆ ಯತ್ನ ಕೂಡ ಮಾಡಿದ್ದರು. ಸುಧಾಳ ಮಗನನ್ನ ನೋಡಿಕೊಂಡು ಬರುವ ನೆಪದಲ್ಲಿ ಒಮ್ಮೆ ಸಾಗರಕ್ಕೆ ಕರೆದುಕೊಂಡು ಹೋಗಿದ್ದ ಮಂಜುನಾಥ ಮತ್ತು ನಿಖೇಶ್, ಸುಧಾಳ ಕೊಲೆಗೆ ಯತ್ನಿಸಿದ್ದರು. ಆದ್ರೆ ಅಂದು ಜೊತೆಯಲ್ಲಿ ಮಕ್ಕಳು ಇದ್ದಿದ್ರಿಂದ ಕೊಲೆ ಮಾಡೋಕೆ ಆಗಿರಲಿಲ್ಲ. ಕೊನೆಗೆ ಇದೇ ತಿಂಗಳು 13ರಂದು ಮರ್ಡರ್ ಮಾಡೋಕೆ ಡೇಟ್ ಫಿಕ್ಸ್ ಮಾಡಿ ನಾಲ್ಕೈದು ಬಾರಿ ಕರೆ ಮಾಡಿ ಸುಧಾರನ್ನ ಚಿಕ್ಕನಾಯಕನಹಳ್ಳಿ ಶೆಟ್ಟಿಕೆರೆ ಗೇಟ್ ಬಳಿ ಕರೆಸಿಕೊಂಡಿದ್ದಾರೆ. ಬಳಿಕ ಈಟಿಯೋಸ್ ಕಾರಿಗೆ ಕೂರಿಸಿಕೊಂಡು ತಿಪಟೂರಿಗೆ ತೆರಳಿದ್ದಾರೆ.

ತಿಪಟೂರು ನಗರಕ್ಕೆ ಬರುತ್ತಿದ್ದಂತೆ ಮಂಜುನಾಥನೂ ಕೂಡ ಅದೇ ಕಾರ್ ಹತ್ತಿಕೊಂಡಿದ್ದಾನೆ. ಹತ್ತುತ್ತಿದ್ದಂತೆ ಸುಧಾಳ ಕಣ್ಣಿಗೆ ಮೂವ್ ಹಚ್ಚಿದ್ದಾನೆ. ಸುಧಾ ಕಣ್ಣು ಉಜ್ಜುತ್ತಿದ್ದಂತೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದಾನೆ. ಎದೆ, ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ರಸ್ತೆ ಬದಿಯಲ್ಲಿನ ಪೊದೆವೊಂದಕ್ಕೆ ಸುಧಾಳ ಮೃತ ದೇಹ ಎಸೆದು ಪರಾರಿ ಆಗಿದ್ದಾರೆ. ಸುಧಾ ಮತ್ತು ರಾಣಿ ಮಧ್ಯೆ ಕೆಲಸದ ವಿಚಾರವಾಗಿ ಜಗಳ ಇತ್ತು ಎನ್ನಲಾಗಿದೆ. ಈ ಹಿಂದೆ ರಾಣಿ ಕೋರ್ಟ್ ಬೀಟ್ ಮಾಡುತ್ತಿದ್ದಳು. ಆದ್ರೆ ಇತ್ತೀಚೆಗೆ ಸುಧಾ ಕೋರ್ಟ್ ಡ್ಯೂಟಿಯನ್ನ ತನಗೆ ಹಾಕಿಸಿಕೊಂಡಿದ್ದಳು. ಇದೇ ವಿಚಾರವಾಗಿ ದ್ವೇಷ ಹುಟ್ಟಿಕೊಂಡಿತ್ತು ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:55 am, Mon, 19 September 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್