AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur Mayor Election: ತುಮಕೂರು ಮೇಯರ್ ಸ್ಥಾನ ಕಾಂಗ್ರೆಸ್​ಗೆ ಒಲಿಯುವ ಸಾಧ್ಯತೆ, ಮೀಸಲಾತಿ ನಿಯಮವೂ ಪೂರಕ

Tumkur Politics: ಕಾಂಗ್ರೆಸ್​ಗೆ ತನ್ನದೇ ಪಕ್ಷದ 10 ಮತಗಳ ಜೊತೆಗೆ ಇಬ್ಬರು ಪಕ್ಷೇತರರು ಮತ್ತು ಒಬ್ಬ ಎಂಎಲ್​ಸಿಯ ಮತ ಸಿಗುವ ನಿರೀಕ್ಷೆಯಿದೆ.

Tumkur Mayor Election: ತುಮಕೂರು ಮೇಯರ್ ಸ್ಥಾನ ಕಾಂಗ್ರೆಸ್​ಗೆ ಒಲಿಯುವ ಸಾಧ್ಯತೆ, ಮೀಸಲಾತಿ ನಿಯಮವೂ ಪೂರಕ
ತುಮಕೂರು ಮಹಾನಗರ ಪಾಲಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 09, 2022 | 9:13 AM

Share

ತುಮಕೂರು: ಮಹಾನಗರ ಪಾಲಿಕೆ ಮೇಯರ್ (Tumkur Mahanagara Palike) ಸ್ಥಾನದ ಚುನಾವಣೆಯು ಶುಕ್ರವಾರ (ಸೆಪ್ಟೆಂಬರ್ 9) ನಡೆಯಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮೇಯರ್ ಸ್ಥಾನವು (Mayor) ಒಲಿಯುವ ಸಾಧ್ಯತೆಯಿದೆ. ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಎಸ್​ಸಿ ಅಭ್ಯರ್ಥಿ ಇಲ್ಲದ ಕಾರಣ ಪಾಲಿಕೆಯ ಮೇಯರ್ ಸ್ಥಾನವು ಕಾಂಗ್ರೆಸ್ ತೆಕ್ಕೆಗೆ ಸಿಗುವ ಸಾಧ್ಯತೆ ನಿಚ್ಚಳವಾಗಿದೆ. ತುಮಕೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 12, ಜೆಡಿಎಸ್​ನ 10, ಕಾಂಗ್ರೆಸ್​ನ 10 ಮತ್ತು ಮೂವರು ಪಕ್ಷೇತರ ಸದಸ್ಯರಿದ್ದರು. ಕಾಂಗ್ರೆಸ್​ಗೆ ತನ್ನದೇ ಪಕ್ಷದ 10 ಮತಗಳ ಜೊತೆಗೆ ಇಬ್ಬರು ಪಕ್ಷೇತರರು ಮತ್ತು ಒಬ್ಬ ಎಂಎಲ್​ಸಿಯ ಮತ ಸಿಗುವ ನಿರೀಕ್ಷೆಯಿದೆ.

ಕಾಂಗ್ರೆಸ್​ನಲ್ಲಿ ಮೇಯರ್ ಸ್ಥಾನಕ್ಕೆ ಅರ್ಹತೆ ಪಡೆದಿರುವ ಎಸ್​ಸಿ ಮಹಿಳೆ ವಿಭಾಗಕ್ಕೆ ಸೇರಿದ ಇಬ್ಬರು ಸದಸ್ಯರಿದ್ದಾರೆ. ಪ್ರಭಾವತಿ ಸುಧೀಶ್ವರ್ ಮತ್ತು ರೂಪಶ್ರೀ ನಡುವೆ ತೀವ್ರ ಪೈಪೋಟಿಯಿದೆ. ಪಭಾವತಿ ಪತಿ ಸುಧೀಶ್ವರ್ ಈ ಹಿಂದೆ ಮೇಯರ್ ಆಗಿದ್ದರು. ರೂಪಶ್ರೀಗೆ ಉಪಮೇಯರ್ ಆಗಿದ್ದ ಅನುಭವ ಇದೆ. ಒಂದು ವರ್ಷದ ಮೇಯರ್ ಅಧಿಕಾರ ಅವಧಿಯನ್ನು ಇಬ್ಬರ ನಡುವೆ ತಲಾ ಆರು ತಿಂಗಳು ಅಧಿಕಾರ ಹಂಚಿಕೆಯಾಗುವ ಸಾಧ್ಯತೆಯಿದೆ. ಇದಕ್ಕೆ ಪಕ್ಷದ ವಿರೋಧವೂ ಇಲ್ಲ ಎಂದು ಹೇಳಲಾಗಿದೆ.

ಪ್ರಭಾವತಿ ಸುಧೀಶ್ವರ ಅವರೇ ಮೊದಲ ಹಂತದಲ್ಲಿ ಅಧಿಕಾರ ಹಿಡಿಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಉಪಮೇಯರ್ ಹುದ್ದೆಗೆ ಬಿಸಿಎಂ-ಎ ವರ್ಗಕ್ಕೆ ಮೀಸಲಾತಿ ಘೋಷಿಸಲಾಗಿದೆ. 23ನೇ ವಾರ್ಡ್​ನ ಜೆಡಿಎಸ್​ ಸದಸ್ಯ ತಿಗಳ ಸಮುದಾಯದ ಟಿ.ಕೆ.ನರಸಿಂಹ ಮೂರ್ತಿ ಉಪ-ಮೇಯರ್ ಆಗುವ ಸಾಧ್ಯತೆಯಿದೆ. 20ನೇ ವಾರ್ಡ್​ನ ಎ.ಶ್ರೀನಿವಾಸ್‌, 3ನೇ ವಾರ್ಡ್​ನ ಲಕ್ಷ್ಮೀನರಸಿಂಹರಾಜು ಆಕಾಂಕ್ಷಿಗಳಾಗಿದ್ದರು.

12 ಗಂಟೆಗೆ ನಾಮಪತ್ರ ಸಲ್ಲಿಕೆ

ತುಮಕೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ಇಂದು (ಸೆಪ್ಟೆಂಬರ್ 9) ಮಧ್ಯಾಹ್ನ 12ರಿಂದ 1 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮೇಯರ್-ಉಪಮೇಯರ್ ಆಯ್ಕೆಗಾಗಿ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಗಲಿದೆ. ನಿಯಮಗಳಂತೆ ನಾಮಪತ್ರ ಪರಿಶೀಲನೆ, ಉಮೇದುದಾರಿಕೆ ಹಿಂಪಡೆಯುವ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಕೈ ಎತ್ತುವ ಮೂಲಕ ಮತದಾನ ನಡೆಸಲಾಗುತ್ತದೆ ಎಂದು ಮಹಾನಗರಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

Published On - 9:13 am, Fri, 9 September 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!