AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ತುಮಕೂರು ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದರು.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್
ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದ ಡಿಕೆ ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 29, 2024 | 4:35 PM

Share

ತುಮಕೂರು, ಜ.29: ಈ ಜಿಲ್ಲೆ ಎರಡನೇ ಬೆಂಗಳೂರು (Bengaluru) ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನ ನಿಯಂತ್ರಣ ಮಾಡಲು ತುಮಕೂರು (Tumkur) ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷಗಳ ಅಭಿವೃದ್ಧಿಗಾಗಿ ತುಮಕೂರು ಜಿಲ್ಲೆಯನ್ನು ಈಗಿಂದಲೇ ಅಭಿವೃದ್ಧಿ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರ, ಶೈಕ್ಷಣಿಕ ಜಿಲ್ಲೆ ಇರುವುದು ತುಮಕೂರು ಜಿಲ್ಲೆ. ಹೆಚ್​ಎಎಲ್ ಈ ಜಿಲ್ಲೆಗೆ ಬಂದಿದ್ದು, ಕೈಗಾರಿಕಾ ಪ್ರದೇಶ ಇರುವ ಕಾರಣ ಈ ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ ಎಂದರು.

ಇದನ್ನೂ ಓದಿ: ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್

ಚುನಾವಣೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಇಂದು ಎಲ್ಲರ ಮನೆಗೂ ಹಣ ಹೋಗುತ್ತಿದೆ. ಅನ್ನಭಾಗ್ಯ ಸಿದ್ದರಾಮಯ್ಯ ಕನಸಿನ ಭಾಗ್ಯ ಎಂದರು.

ಸೋಲಾರ್ ವಿಸ್ತರಣೆಗೆ ಕ್ರಮ: ಡಿಕೆ ಶಿವಕುಮಾರ್

ಈ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಬದಲಾವಣೆ ಆಗಿದೆ‌. ನಾವು ಬರೀ ಗ್ಯಾರಂಟಿಗಳ ಬಗ್ಗೆ ಅಷ್ಟೇ ಯೋಚಿಸುತ್ತಿಲ್ಲ. ಮುಂದಿನ ಭವಿಷ್ಯಕ್ಕೂ ಯೋಚಿಸಲಾಗುತ್ತಿದೆ. ತುಮಕೂರಿಗೆ ಬಂದಾಗ ಪಾವಗಡ ಸೋಲಾರ್ ನೆನಪಾಗುತ್ತದೆ. ಅಲ್ಲಿನ ರೈತರು ಸೋಲಾರ್​ಗೆ ಜಾಗನೀಡಿ ನಮ್ಮ ಜೀವನ ಬದಲಾವಣೆ ಮಾಡಿದ್ದೀರಿ ಅಂತಿದ್ದಾರೆ. ಇನ್ನೂ ಹತ್ತು ಸಾವಿರ ಎಕರೆ ಜಾಗದಲ್ಲಿ ಸೋಲಾರ್ ವಿಸ್ತರಣೆ ಮಾಡಲಾಗುವುದು ಎಂದರು.

ದೇವರು ನಮಗೆ ವರನೂ ಕೊಡಲ್ಲ ಶಾಪವೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅದನ್ನ ನಾವು ಬಳಸಬೇಕು. ಎತ್ತಿನಹೊಳೆ ಯೋಜನೆ ಜಿಲ್ಲೆಯಲ್ಲಿ ಹಾದು ಹೋಗುತ್ತಿದೆ. ಈ ಸರ್ಕಾರ ಬಂದ ಬಳಿಕ ಮಾತು ಕೊಟ್ಟಹಾಗೆ ನಡೆಯುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ