Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ತುಮಕೂರು ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದರು.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್
ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದ ಡಿಕೆ ಶಿವಕುಮಾರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Jan 29, 2024 | 4:35 PM

ತುಮಕೂರು, ಜ.29: ಈ ಜಿಲ್ಲೆ ಎರಡನೇ ಬೆಂಗಳೂರು (Bengaluru) ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನ ನಿಯಂತ್ರಣ ಮಾಡಲು ತುಮಕೂರು (Tumkur) ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷಗಳ ಅಭಿವೃದ್ಧಿಗಾಗಿ ತುಮಕೂರು ಜಿಲ್ಲೆಯನ್ನು ಈಗಿಂದಲೇ ಅಭಿವೃದ್ಧಿ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರ, ಶೈಕ್ಷಣಿಕ ಜಿಲ್ಲೆ ಇರುವುದು ತುಮಕೂರು ಜಿಲ್ಲೆ. ಹೆಚ್​ಎಎಲ್ ಈ ಜಿಲ್ಲೆಗೆ ಬಂದಿದ್ದು, ಕೈಗಾರಿಕಾ ಪ್ರದೇಶ ಇರುವ ಕಾರಣ ಈ ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ ಎಂದರು.

ಇದನ್ನೂ ಓದಿ: ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್

ಚುನಾವಣೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಇಂದು ಎಲ್ಲರ ಮನೆಗೂ ಹಣ ಹೋಗುತ್ತಿದೆ. ಅನ್ನಭಾಗ್ಯ ಸಿದ್ದರಾಮಯ್ಯ ಕನಸಿನ ಭಾಗ್ಯ ಎಂದರು.

ಸೋಲಾರ್ ವಿಸ್ತರಣೆಗೆ ಕ್ರಮ: ಡಿಕೆ ಶಿವಕುಮಾರ್

ಈ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಬದಲಾವಣೆ ಆಗಿದೆ‌. ನಾವು ಬರೀ ಗ್ಯಾರಂಟಿಗಳ ಬಗ್ಗೆ ಅಷ್ಟೇ ಯೋಚಿಸುತ್ತಿಲ್ಲ. ಮುಂದಿನ ಭವಿಷ್ಯಕ್ಕೂ ಯೋಚಿಸಲಾಗುತ್ತಿದೆ. ತುಮಕೂರಿಗೆ ಬಂದಾಗ ಪಾವಗಡ ಸೋಲಾರ್ ನೆನಪಾಗುತ್ತದೆ. ಅಲ್ಲಿನ ರೈತರು ಸೋಲಾರ್​ಗೆ ಜಾಗನೀಡಿ ನಮ್ಮ ಜೀವನ ಬದಲಾವಣೆ ಮಾಡಿದ್ದೀರಿ ಅಂತಿದ್ದಾರೆ. ಇನ್ನೂ ಹತ್ತು ಸಾವಿರ ಎಕರೆ ಜಾಗದಲ್ಲಿ ಸೋಲಾರ್ ವಿಸ್ತರಣೆ ಮಾಡಲಾಗುವುದು ಎಂದರು.

ದೇವರು ನಮಗೆ ವರನೂ ಕೊಡಲ್ಲ ಶಾಪವೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅದನ್ನ ನಾವು ಬಳಸಬೇಕು. ಎತ್ತಿನಹೊಳೆ ಯೋಜನೆ ಜಿಲ್ಲೆಯಲ್ಲಿ ಹಾದು ಹೋಗುತ್ತಿದೆ. ಈ ಸರ್ಕಾರ ಬಂದ ಬಳಿಕ ಮಾತು ಕೊಟ್ಟಹಾಗೆ ನಡೆಯುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?