AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ತುಮಕೂರು ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದರು.

ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು: ಡಿಕೆ ಶಿವಕುಮಾರ್
ಬೆಂಗಳೂರಿನ ಮುಂದಿನ 50 ವರ್ಷ ಅಭಿವೃದ್ಧಿಗಾಗಿ ತುಮಕೂರನ್ನು ಈಗಿಂದಲೇ ಬೆಳೆಸಬೇಕು ಎಂದ ಡಿಕೆ ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 29, 2024 | 4:35 PM

Share

ತುಮಕೂರು, ಜ.29: ಈ ಜಿಲ್ಲೆ ಎರಡನೇ ಬೆಂಗಳೂರು (Bengaluru) ಆಗಿ ಪರಿವರ್ತನೆ ಆಗುವ ನಂಬಿಕೆ ನಮ್ಮಲ್ಲಿ‌ ಮೂಡುತ್ತಿದೆ. ಬೆಂಗಳೂರಿನ ಜನ ನಿಯಂತ್ರಣ ಮಾಡಲು ತುಮಕೂರು (Tumkur) ಜಿಲ್ಲೆ ಸೂಕ್ತವಾಗಿದ್ದು, ಬೆಂಗಳೂರಿನ ಮುಂದಿನ 50 ವರ್ಷಗಳ ಅಭಿವೃದ್ಧಿಗಾಗಿ ತುಮಕೂರು ಜಿಲ್ಲೆಯನ್ನು ಈಗಿಂದಲೇ ಅಭಿವೃದ್ಧಿ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಬೆಂಗಳೂರು ಮೆಟ್ರೋವನ್ನು ತುಮಕೂರು ಜಿಲ್ಲೆಗೆ ವಿಸ್ತರಣೆ ಮಾಡುವ ಬೇಡಿಕೆಗಳ ನಡುವೆ ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರ, ಶೈಕ್ಷಣಿಕ ಜಿಲ್ಲೆ ಇರುವುದು ತುಮಕೂರು ಜಿಲ್ಲೆ. ಹೆಚ್​ಎಎಲ್ ಈ ಜಿಲ್ಲೆಗೆ ಬಂದಿದ್ದು, ಕೈಗಾರಿಕಾ ಪ್ರದೇಶ ಇರುವ ಕಾರಣ ಈ ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ ಎಂದರು.

ಇದನ್ನೂ ಓದಿ: ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್

ಚುನಾವಣೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಇಂದು ಎಲ್ಲರ ಮನೆಗೂ ಹಣ ಹೋಗುತ್ತಿದೆ. ಅನ್ನಭಾಗ್ಯ ಸಿದ್ದರಾಮಯ್ಯ ಕನಸಿನ ಭಾಗ್ಯ ಎಂದರು.

ಸೋಲಾರ್ ವಿಸ್ತರಣೆಗೆ ಕ್ರಮ: ಡಿಕೆ ಶಿವಕುಮಾರ್

ಈ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಬದಲಾವಣೆ ಆಗಿದೆ‌. ನಾವು ಬರೀ ಗ್ಯಾರಂಟಿಗಳ ಬಗ್ಗೆ ಅಷ್ಟೇ ಯೋಚಿಸುತ್ತಿಲ್ಲ. ಮುಂದಿನ ಭವಿಷ್ಯಕ್ಕೂ ಯೋಚಿಸಲಾಗುತ್ತಿದೆ. ತುಮಕೂರಿಗೆ ಬಂದಾಗ ಪಾವಗಡ ಸೋಲಾರ್ ನೆನಪಾಗುತ್ತದೆ. ಅಲ್ಲಿನ ರೈತರು ಸೋಲಾರ್​ಗೆ ಜಾಗನೀಡಿ ನಮ್ಮ ಜೀವನ ಬದಲಾವಣೆ ಮಾಡಿದ್ದೀರಿ ಅಂತಿದ್ದಾರೆ. ಇನ್ನೂ ಹತ್ತು ಸಾವಿರ ಎಕರೆ ಜಾಗದಲ್ಲಿ ಸೋಲಾರ್ ವಿಸ್ತರಣೆ ಮಾಡಲಾಗುವುದು ಎಂದರು.

ದೇವರು ನಮಗೆ ವರನೂ ಕೊಡಲ್ಲ ಶಾಪವೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅದನ್ನ ನಾವು ಬಳಸಬೇಕು. ಎತ್ತಿನಹೊಳೆ ಯೋಜನೆ ಜಿಲ್ಲೆಯಲ್ಲಿ ಹಾದು ಹೋಗುತ್ತಿದೆ. ಈ ಸರ್ಕಾರ ಬಂದ ಬಳಿಕ ಮಾತು ಕೊಟ್ಟಹಾಗೆ ನಡೆಯುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​