AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕ ನೇಮಕಾತಿ: ತುರುವೇಕೆರೆ ದೇವಸ್ಥಾನದ ಪ್ರಾಂಗಣದಲ್ಲೂ ಮೂಗಿಗೆ ಬಡಿಯುತ್ತಿದೆ ರಾಜಕೀಯ ದುರ್ನಾತ!

ಸಂಕ್ರಾಂತಿ ಮುಂಚಿನ ದಿನವೇ ದೇವಸ್ಥಾನದಲ್ಲಿ ಅರ್ಚಕರನ್ನು ಬದಲಿಸಲಾಗಿದೆ. ಕೃಷ್ಣಮೂರ್ತಿ ಬದಲಾಗಿ ಗೋವಿಂದರಾಜು ಪೂಜಾ ಕೈಂಕರ್ಯ ಮಾಡುತ್ತಿದ್ದಾರೆ. ಧರ್ಮದ ಸ್ಥಳ ದೇವಸ್ಥಾನದಲ್ಲೂ ಅಧರ್ಮದ ರಾಜಕಾರಣ ನುಸುಳಿದ್ದು ಮಾತ್ರ ಆಘಾತಕಾರಿಯಾಗಿದೆ.

ಅರ್ಚಕ ನೇಮಕಾತಿ: ತುರುವೇಕೆರೆ ದೇವಸ್ಥಾನದ ಪ್ರಾಂಗಣದಲ್ಲೂ ಮೂಗಿಗೆ ಬಡಿಯುತ್ತಿದೆ ರಾಜಕೀಯ ದುರ್ನಾತ!
ತುರುವೇಕೆರೆ ದೇವಸ್ಥಾನದ ಪ್ರಾಂಗಣದಲ್ಲೂ ಮೂಗಿಗೆ ಬಡಿಯುತ್ತಿದೆ ರಾಜಕೀಯ ದುರ್ನಾತ!
TV9 Web
| Edited By: ಸಾಧು ಶ್ರೀನಾಥ್​|

Updated on:Jan 19, 2023 | 3:54 PM

Share

ತುಮಕೂರು ಗ್ರಾಮಾಂತರದಲ್ಲಿ ದೇವರ ಉತ್ಸವಕ್ಕಾಗಿ ಜೆಡಿಎಸ್, ಬಿಜೆಪಿ ಮುಖಂಡರು ಕಿತ್ತಾಟ ಮಾಡಿಕೊಂಡ ಘಟನೆ ಬೆನ್ನಲ್ಲೇ ತುರುವೇಕೆರೆ (turuvekere) ಕ್ಷೇತ್ರದಲ್ಲೂ ಇಂಥದ್ದೇ ಒಂದು ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನವೊಂದರ (temple) ಅರ್ಚಕ ಜೆಡಿಎಸ್ ಬೆಂಬಲಿತನಾಗಿದ್ದು ಆತನನ್ನು ಪದಚ್ಚುತಿಗೊಳಿಸಿ ಬಿಜೆಪಿ ಶಾಸಕ ತಮ್ಮ ಬೆಂಬಲಿಗನಿಗೆ ಅರ್ಚಕ ಹುದ್ದೆ (archaka) ಕೊಡಿಸಿದ್ದಾರೆ ಎಂಬ ಆರೋಪ ತೀವ್ರ ಸಂಚಲನ ಮೂಡಿಸಿದೆ. ಹೌದು, ‌ಚುನಾವಣೆ ಸಮೀಪಿಸುತಿದ್ದಂತೆ ರಾಜಕೀಯದ ಸೋಂಕು ಪ್ರತಿ ಕ್ಷೇತ್ರಕ್ಕೂ ಜೋರಾಗಿ ಅಂಟಿಕೊಳ್ಳುತಿದೆ. ಗುಡಿಯಲ್ಲಿರುವ ದೇವರಿಗೂ ಪಕ್ಷದ ಪಟ್ಟ ಕಟ್ಟಲಾಗುತ್ತಿದೆ. ಮೊನ್ನೆ ಮಂಗಳವಾರ ತುಮಕೂರಿನ ಗ್ರಾಮಾಂತರದಲ್ಲಿ ಜೆಡಿಎಸ್ (jds) ಮತ್ತು ಬೆಜೆಪಿ (bjp) ಮುಖಂಡರುಗಳು ಪ್ರತ್ಯೇಕವಾಗಿ ದೇವಸ್ಥಾನ ಕಟ್ಟಿ ಉತ್ಸವಕ್ಕಾಗಿ ಕಿತ್ತಾಟ ಮಾಡಿಕೊಂಡ ಘಟನೆ ನಮ್ಮ ಕಣ್ಣಮುಂದೆ ಇದೆ.

ಇದರ ಜೊತೆಗೆ ತುರುವೇಕೆರೆ ಕ್ಷೇತ್ರ ಸಿಎಸ್ ಪುರದ ಅವ್ವೇರಹಳ್ಳಿಯಲ್ಲೂ ದೇವಸ್ಥಾನದ ಪೂಜೆ ಮಾಡುವ ಅರ್ಚಕರಿಗೂ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಪಟ್ಟ ಕಟ್ಟಲಾಗಿದೆ. ಇಲ್ಲಿನ ನರಸಿಂಹಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನದ ಮೂಲ ಅರ್ಚಕ ಕೃಷ್ಣಮೂರ್ತಿ ಜೆಡಿಎಸ್ ಬೆಂಬಲಿತ ಅನ್ನೋ ಕಾರಣಕ್ಕೆ ಆ ಕುಟುಂಬದಿಂದ ಪೂಜೆ ಮಾಡುವ ಹಕ್ಕನ್ನು ಕಿತ್ತುಕೊಂಡು ಬಿಜೆಪಿ ಶಾಸಕ ಮಸಾಲಾ ಜಯರಾಮ್ ಅವರ ಬೆಂಬಲಿಗ ಗೋವಿಂದರಾಜು ಅನ್ನುವವರಿಗೆ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಮೇಲೆ ಪ್ರಭಾವ ಬೀರಿ ಶಾಸಕ ಮಸಾಲಾ ಜಯರಾಮ್ ಆದೇಶ ಹೊರಡಿಸಿ ತಮ್ಮ ಬೆಂಬಲಿಗರಿಗೆ ಪೂಜೆ ಮಾಡಲು ಅವಾಕಾಶ ಕೊಟ್ಟಿದ್ದಾರೆ ಎಂದು ಮೂಲ ಅರ್ಚಕ ಕೃಷ್ಣಮೂರ್ತಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ.

ಇದನ್ನೂ ಓದಿ:

ಆನೆ ನಡೆದಿದ್ದೇ ದಾರಿ ಎಂದು ಸಾಗುತ್ತಿರುವ ಜನಾರ್ದನ ರೆಡ್ಡಿಗೆ ಈ ದಿಕ್ಕಿನಿಂದ ಪೀಕಲಾಟ ಶುರುವಾಗುತ್ತೆ ಎಂದು ನಿರೀಕ್ಷಿಸಿರಲಿಲ್ಲ! ಏನದು?

ಮೂಲ ಅರ್ಚಕ ಕೃಷ್ಣಮೂರ್ತಿ ಜೆಡಿಎಸ್ ಪರ ಮತ ಪ್ರಚಾರ ಮಾಡುತ್ತಿದ್ದರು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಲ್ಲೂ ಜೆಡಿಎಸ್ ಪರ ವಕಾಲತ್ತು ವಹಿಸುತಿದ್ದರು ಎಂಬ ಸುಳ್ಳು ಆರೋಪವನ್ನು ಮಾಡಲಾಗಿದೆಯಂತೆ. ಈ ಹಿಂದೆ ಒಮ್ಮೆ ಇಬ್ಬರೂ ಅರ್ಚಕರಿಗೂ ಒಂದೊಂದು ವರ್ಷ ಪೂಜೆಗೆ ಅವಾಕಶ ಕಲ್ಪಿಸಿ ಜಿಲ್ಲಾಧಿಗಳು ಆದೇಶ ಹೊರಡಿಸಿದ್ದರು.

ಈ ಆದೇಶ ಪ್ರಶ್ನಿಸಿ ಕೃಷ್ಣಮೂರ್ತಿ ಕುಟುಂಬವು ಕಮಿಷನರ್ ಕೋರ್ಟ್ ಮೇಟ್ಟಿಲೇರಿದೆ. ಅದರ ವಿಚಾರಣೆ ಕೂಡ ನಡೆಯುತ್ತಿದೆ. ಇದರ ನಡುವೆ ಜಿಲ್ಲಾಧಿಕಾರಿಗಳ ಆದೇಶದ ಪ್ರತಿ ತೋರಿಸಿ ತಹಶಿಲ್ದಾರ್ ಕಚೇರಿಯ ಸಿಬ್ಬಂದಿ ನರಸಿಂಹಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಸ್ಥಾನದ ಬೀಗ ಒಡೆದಿದ್ದಾರೆ. ಪೂಜೆ ಮಾಡುವ ಹಕ್ಕನ್ನು ಶಾಸಕ ಮಸಾಲಾ ಜಯರಾಮ ಬೆಂಬಲಿತ ಗೋವಿಂದರಾಜುಗೆ ಕೊಟ್ಟಿದ್ದಾರೆ ಎಂದು ಮೂಲ ಅರ್ಚಕರು ಆರೋಪಿಸಿದ್ದಾರೆ.

ಸಂಕ್ರಾಂತಿ ಮುಂಚಿನ ದಿನವೇ ದೇವಸ್ಥಾನದಲ್ಲಿ ಅರ್ಚಕರನ್ನು ಬದಲಿಸಲಾಗಿದೆ. ಕೃಷ್ಣಮೂರ್ತಿ ಬದಲಾಗಿ ಗೋವಿಂದರಾಜು ಪೂಜಾ ಕೈಂಕರ್ಯ ಮಾಡುತ್ತಿದ್ದಾರೆ. ಧರ್ಮದ ಸ್ಥಳ ದೇವಸ್ಥಾನದಲ್ಲೂ ಅಧರ್ಮದ ರಾಜಕಾರಣ ನುಸುಳಿದ್ದು ಮಾತ್ರ ಆಘಾತಕಾರಿಯಾಗಿದೆ. ಇನ್ನು ಇದೆಲ್ಲಾ ಸುಳ್ಳು ಎಂದು ಶಾಸಕ ಮಸಾಲೆ ಜಯರಾಂ ಮಾಹಿತಿ ನೀಡಿದ್ದಾರೆ.

ವರದಿ: ಮಹೇಶ್, ಟಿವಿ 9, ತುಮಕೂರು

Published On - 3:50 pm, Thu, 19 January 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು