AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆ(Turuvekere government hospital)ಯಲ್ಲಿ ನಡೆದಿದೆ.

ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 21, 2023 | 10:37 PM

ತುಮಕೂರು, ಡಿ.21: ಹೆರಿಗೆ ಮಾಡಿಸಲು 3 ಸಾವಿರ ಲಂಚ(bribe)ಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆ(Turuvekere government hospital)ಯಲ್ಲಿ ನಡೆದಿದೆ. ಡಾ.ಹರಿಪ್ರಸಾದ್ ಸಿಕ್ಕಿಬಿದ್ದ ವೈದ್ಯ. ಹನುಮಂತಪ್ಪ ಎಂಬುವರ ಬಳಿ ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆಯಿಟ್ಟಿದ್ದನಂತೆ. ಹೀಗಾಗಿ ಆತ ಲೋಕಾಯುಕ್ತ ಅಧಿಕಾರಿಗಳ ಮೊರೆ ಹೋಗಿದ್ದ. ಇಂದು ಹೆರಿಗೆಗೂ ಮುನ್ನ ಹಣ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ  ಅಭಿಯಂತರ (ಎಇಇ) ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ವಿದ್ಯುತ್ ಗುತ್ತಿಗೆದಾರ ಪ್ರದೀಪ್ ಎಂಬುವವರ ಬಳಿ ವಿದ್ಯುತ್ ಕಾಮಗಾರಿಯ ವರ್ಕ್ ಆರ್ಡರ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾಮಗಾರಿ ವರ್ಕ್ ಆರ್ಡರ್ ಕೊಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು,  ಎಇಇ ರಮೇಶ್​ನನ್ನು ಹಿಡಿದಿದ್ದಾರೆ.

ಇದನ್ನೂ ಓದಿ:ಗದಗ ಗಣಿ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ: ಕಂಗಾಲಾದ ಅಧಿಕಾರಿಗಳು

ಇನ್ನು ಮೊನ್ನೆಯಷ್ಟೇ (ಡಿ.19) ಧಾರವಾಡದಲ್ಲಿರುವ ಶಿಗ್ಗಾಂವಿ ಏತ ನೀರಾವರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ  ಅಭಿಯಂತರ ಹಾಗೂ ಕಿರಿಯ ಅಭಿಯಂತರ ಅಧಿಕಾರಿಗಳು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬರೊಬ್ಬರಿ 1.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದು, ಎಇಇ ಬಿ.ಮಂಜುನಾಥ್​ 1 ಲಕ್ಷ ರೂಪಾಯಿ ಲಂಚ ಹಾಗೂ ಜೆಇ ಪ್ರಕಾಶ್ ಹೊಸಮನಿ ಎಂಬುವವರು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದರು. ಇದೀಗ ಮತ್ತಿಬ್ಬರು ಸರ್ಕಾರಿ ವೈದ್ಯರು ಬಲೆಗೆ ಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Thu, 21 December 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ