AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಲೋಪ: ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್​ಗಳು ಅಮಾನತು

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್'ಗಳನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪ: ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್​ಗಳು ಅಮಾನತು
ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ಹಾಹಕ ಇಂಜಿನಿಯರ್​ಗಳು ಅಮಾನತು
Rakesh Nayak Manchi
Rakesh Nayak Manchi|

Updated on:Jun 08, 2023 | 9:53 PM

Share

ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (Rural Development and Panchayat Raj) ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು (Suspension) ಮಾಡಲಾಗಿದೆ. ತುಮಕೂರಿನ (Tumkur) ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆ ಹಿನ್ನೆಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.

ಅದೇ ರೀತಿ, ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು.

ಇದನ್ನೂ ಓದಿ: ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು, ಕೆಲವೆಡೆ ಅಮಾನತು ಶಿಕ್ಷೆಯೂ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು.

ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಇದನ್ನು ಕಾಂಗ್ರೆಸ್ ಬೆಂಬಲಿಗರು ಟೀಕಿಸಿದರೆ ಇನ್ನಿತರರು ಶಿಕ್ಷಕರ ಬೆನ್ನಿಗೆ ನಿಂತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Thu, 8 June 23

Follow Us
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ