AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಲೋಪ: ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್​ಗಳು ಅಮಾನತು

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್'ಗಳನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪ: ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್​ಗಳು ಅಮಾನತು
ಆರ್​ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ಹಾಹಕ ಇಂಜಿನಿಯರ್​ಗಳು ಅಮಾನತು
Rakesh Nayak Manchi
|

Updated on:Jun 08, 2023 | 9:53 PM

Share

ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (Rural Development and Panchayat Raj) ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು (Suspension) ಮಾಡಲಾಗಿದೆ. ತುಮಕೂರಿನ (Tumkur) ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆ ಹಿನ್ನೆಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.

ಅದೇ ರೀತಿ, ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು.

ಇದನ್ನೂ ಓದಿ: ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು, ಕೆಲವೆಡೆ ಅಮಾನತು ಶಿಕ್ಷೆಯೂ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು.

ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಇದನ್ನು ಕಾಂಗ್ರೆಸ್ ಬೆಂಬಲಿಗರು ಟೀಕಿಸಿದರೆ ಇನ್ನಿತರರು ಶಿಕ್ಷಕರ ಬೆನ್ನಿಗೆ ನಿಂತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Thu, 8 June 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ