AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ

ಬಾವಿಯಲ್ಲಿ ಎರಡು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಬಳಿ ನಡೆದಿದೆ. ಮೃತರಿಬ್ಬರು ತುಮಕೂರು ನಗರದ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಾಯದಿಂದ ಶವಗಳನ್ನು ಹೊರತೆಗೆದಿದ್ದಾರೆ. ಸದ್ಯ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತುಮಕೂರು: ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ
ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ (ಸಾಂದರ್ಭಿಕ ಚಿತ್ರ)
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Sep 08, 2023 | 12:11 PM

Share

ತುಮಕೂರು, ಸೆ.8: ಜಿಲ್ಲೆಯ ಶಿರಾ ಪಟ್ಟಣದ ಚಿಕ್ಕಕೆರೆ ಬಳಿ ಇರುವ ಬಾವಿಯಲ್ಲಿ ಎರಡು ಅಪರಿಚಿತ ಮೃತದೇಹಗಳು ಪತ್ತೆಯಾದ (Dead Body Found) ಘಟನೆ ನಡೆದಿದೆ. ತುಮಕೂರು (Tumkur) ನಗರದ ನಿವಾಸಿಗಳಾದ ಹಾಜಿರಾ (40) ಮತ್ತು ಬಾಲಕಿ ಅಮ್ಮನ್ ಪಾಷಾ (12) ಮೃತರು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಸ್ಥಳೀಯರು ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಬೊಪ್ಪಜ್ಜ ಎಂಬುವವರಿಗೆ ಸೇರಿದ ಬಾವಿ ಇದಾಗಿದೆ. ಸದ್ಯ ಸ್ಥಳಕ್ಕೆ ಆಗಮಿಸಿದ ಶಿರಾ ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆಸುತ್ತಿದ್ದಾರೆ.

ಕಾರು ಬೈಕ್ ಅಪಘಾತದಲ್ಲಿ ಯುವಕ ಸಾವು

ಮೈಸೂರು: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಚ್​ಡಿಎಫ್​ಸಿ ಬ್ಯಾಂಗ್ ಸಿಬ್ಬಂದಿಯಾಗಿರುವ ಮಾರಿಗುಡಿ ಬೀದಿಯ ಮಂಜುನಾಥ್ (26) ಮೃತ ದುರ್ದೈವಿ.

ಇದನ್ನೂ ಓದಿ: ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಬುಲೆಟ್ ಬೈಕಿನಲ್ಲಿ ಹೋಗುವಾಗ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡಿದದ್ದ ಮಂಜುನಾಥ್ ಮತ್ತು ಪೂರ್ವಿಕಾಳನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಸಾವನ್ನಪ್ಪಿದ್ದು, ಪೂರ್ವಿಕಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ